ಶಾಯಿ ತೋರಿಸಿ ಅಭಿಯಾನ


Team Udayavani, Apr 18, 2019, 3:00 AM IST

kaddaya-matadana

ಬೆಂಗಳೂರು: ಈ ಬಾರಿ ಶೇ. 80ರಷ್ಟು ಮತದಾನಕ್ಕೆ ಪಣತೊಟ್ಟಿರುವ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ (ಬಿಎಎಫ್), ಇದಕ್ಕಾಗಿ ಮತದಾರರನ್ನು ಪ್ರೋತ್ಸಾಹಿಸಲು ಹಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮತದಾನದಂದು ಅಂದರೆ ಗುರುವಾರ ಅಪಾರ್ಟ್‌ಮೆಂಟ್‌ಗಳಲ್ಲಿರುವ ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರಿಗಾಗಿಯೇ ಉಚಿತ ಕಾರ್‌ಪೂಲಿಂಗ್‌, ಟ್ಯಾಕ್ಸಿ ಸೇವೆ ಕಲ್ಪಿಸಲಾಗಿದೆ. ಪ್ರತಿ ಅಪಾರ್ಟ್‌ಮೆಂಟ್‌ಗಳಲ್ಲಿ ಸರಾಸರಿ 80ರಿಂದ 100 ಹಿರಿಯ ನಾಗರಿಕರು ಹಾಗೂ ಅಂಗವಿಕಲರಿದ್ದಾರೆ.

ಅವರ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ಯಾವುದೋ ಒಂದು ರಾಜಕೀಯ ಪಕ್ಷ ವ್ಯವಸ್ಥೆ ಮಾಡಿದ್ದಲ್ಲ. ಸ್ವತಃ ನಿವಾಸಿಗಳು ಈ ಕ್ರಮ ಕೈಗೊಂಡಿದ್ದೇವೆ ಎಂದು ಫೆಡರೇಷನ್‌ ಸದಸ್ಯೆ ಸಂಧ್ಯಾ ಭಟ್‌ ತಿಳಿಸಿದರು. ಅಗತ್ಯ ಇರುವ ಕಡೆಗಳಲ್ಲಿ ಆಟೋ, ಟ್ಯಾಕ್ಸಿಗಳನ್ನು ಬುಕಿಂಗ್‌ ಮಾಡಲಾಗುತ್ತಿದೆ.

“ಶೋ ದಿ ಇಂಕ್‌’ (ಶಾಯಿ ತೋರಿಸಿ) ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರಡಿ ಮತದಾರರು ಟ್ವಿಟರ್‌ನಲ್ಲಿ ಶಾಯಿ ಹಾಕಿದ ಬೆರಳಿನ ಚಿತ್ರ ತೋರಿಸಿ, ನಿತ್ಯ ಬಳಕೆ ವಸ್ತುಗಳ ಖರೀದಿಯಲ್ಲಿ ರಿಯಾಯ್ತಿ ಪಡೆಯಬಹುದು. ಈ ಸಂಬಂಧ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ)ದ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅದು ಹಲವು ಕಂಪೆನಿಗಳೊಂದಿಗೆ ಕೈಜೋಡಿಸಿದೆ ಎಂದೂ ಸಂಧ್ಯಾ ಭಟ್‌ ಹೇಳಿದರು.

ಇನ್ನು ಕಳೆದ ಒಂದು ವಾರದಿಂದ ಅಪಾರ್ಟ್‌ಮೆಂಟ್‌ಗಳಲ್ಲಿರುವ ಮಕ್ಕಳಿಂದ ಮನೆ-ಮನೆ ಮತದಾರರ ಜಾಗೃತಿ ಅಭಿಯಾನ ಮಾಡಲಾಗಿದೆ. ನಿತ್ಯ ಬೆಳಿಗ್ಗೆ ಮತ್ತು ಸಂಜೆ ಮಕ್ಕಳು ಗುರುವಾರದಂದು ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ. ಅಪಾರ್ಟ್‌ಮೆಂಟ್‌ಗಳಲ್ಲಿ ಮತ ಜಾಗೃತಿ ಬಗ್ಗೆ ಪೋಸ್ಟರ್‌ ಅಳವಡಿಸಲಾಗಿದ್ದು, ಮತ ಚಲಾಯಿಸಿ ಬಂದವರು ಅದರ ಮೇಲೆ ಸಹಿ ಮಾಡುತ್ತಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ದುಪ್ಪಟ್ಟಾಗಿದೆ. ಈ ಸಲ ವಸತಿ ಸಮುತ್ಛಯಗಳಲ್ಲಿನ ಮತದಾರರ ಸಂಖ್ಯೆ ಕೂಡ ಶೇ. 10ರಿಂದ 15ರಷ್ಟು ಏರಿಕೆ ಆಗಿದೆ. ಹಲವು ಜಾಗೃತಿ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು. ಇದೆಲ್ಲದರ ಪರಿಣಾಮ ಶೇ. 80ರಷ್ಟು ಮತದಾನ ಆಗುವ ಸಾಧ್ಯತೆ ಇದೆ ಎಂದು ಬಿಎಎಫ್ ಕಾರ್ಯದರ್ಶಿ ಶ್ರೀಕಾಂತ್‌ ನರಸಿಂಹನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.