ಕನ್ಸಲ್ಟಂಟ್ ಕಂಪನಿಯಿಂದ ವೆಲ್ಲಾರ ಜಂಕ್ಷನ್‌ ಪರಿಶೀಲನೆ

ಆಲ್ ಸೇಂಟ್ಸ್‌ ಚರ್ಚ್‌ನಿಂದ ದೂರು | ಪ್ರತಿನಿಧಿಗಳ ಭೇಟಿ

Team Udayavani, Jul 5, 2019, 2:38 PM IST

bng-tdy-5..

ಬೆಂಗಳೂರು: ನೆಮ್ಮದಿ ಕದಡುತ್ತಿರುವ ‘ನಮ್ಮ ಮೆಟ್ರೋ’ ಎರಡನೇ ಹಂತದ ಸುರಂಗ ಮಾರ್ಗ ಯೋಜನೆಗೆ ಆರ್ಥಿಕ ನೆರವು ನೀಡಬಾರದು ಎಂದು ಆಲ್ ಸೇಂಟ್ಸ್‌ ಚರ್ಚ್‌ ಸದಸ್ಯರು, ಯೂರೋಪಿಯನ್‌ ಇನ್‌ವೆಸ್ಟ್‌ಮೆಂಟ್ ಬ್ಯಾಂಕ್‌ (ಇಐಬಿ)ಗೆ ಮನವಿ ಸಲ್ಲಿಸಿದ ಮೇರೆಗೆ ಗುರುವಾರ, ಬ್ಯಾಂಕಿನ ಪರವಾಗಿ ಇಆರ್‌ಪಿ ಕನ್ಸಲ್ಟಂಟ್ ಕಂಪನಿ ಪ್ರತಿನಿಧಿಗಳು ಸ್ಥಳ ಪರಿಶೀಲನೆ ನಡೆಸಿದರು.

ಇಆರ್‌ಪಿ ಕನ್ಸಲ್ಟಂಟ್‌ನ ಟೆಂಡೋಲ್ಕರ್‌ ಸೇರಿದಂತೆ ಮೂವರು ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ, ಮೆಟ್ರೋ ಸುರಂಗ ಮಾರ್ಗ ನಿರ್ಮಾಣದಿಂದ ಆಗಲಿರುವ ಸಮಸ್ಯೆಗಳ ಕುರಿತು ಚರ್ಚ್‌ ಸದಸ್ಯರು ಮತ್ತು ಸಮುದಾಯದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಸುಮಾರು ಒಂದು ತಾಸು ಸಮಾಲೋಚನೆ ನಂತರ ಶೀಘ್ರದಲ್ಲೇ ಈ ಸಂಬಂಧ ಯೂರೋಪಿಯನ್‌ ಇನ್‌ವೆಸ್ಟ್‌ಮೆಂಟ್ ಬ್ಯಾಂಕ್‌ಗೆ ವರದಿ ಸಲ್ಲಿಸುವುದಾಗಿ ಹೇಳಿದರು.

ಇದಕ್ಕೂ ಮುನ್ನ ಚರ್ಚ್‌ ಸದಸ್ಯ ಎಬೆನಿಜರ್‌ ಪ್ರೇಮ್‌ಕುಮಾರ್‌ ಮಾತನಾಡಿ, ಮೆಟ್ರೋ ಯೋಜನೆಗೆ ಈಗಾಗಲೇ ಒಂದು ಎಕರೆ ಜಾಗವನ್ನು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ನೀಡಲಾಗಿದೆ. ಇದಲ್ಲದೆ, ಚರ್ಚ್‌ ಆವರಣದ ಕೆಳಗೆ ನಿಲ್ದಾಣ ನಿರ್ಮಾಣಕ್ಕೆ ನಿಗಮವು ತಾತ್ಕಾಲಿಕ ಜಾಗ ಕೇಳುತ್ತಿದೆ. ಆದರೆ, ಇದರಿಂದ 80ಕ್ಕೂ ಹೆಚ್ಚು ಹಳೆಯ ಮರಗಳ ಮಾರಣಹೋಮ ಆಗುತ್ತದೆ. ಅಂಗವಿಕಲ ಮಕ್ಕಳ ಶಾಲೆ ಇದ್ದು, ಅದನ್ನೂ ತೆರವುಗೊಳಿಸಬೇಕಾಗುತ್ತದೆ. ಪ್ರವೇಶದ್ವಾರವನ್ನು ವರ್ಷಗಟ್ಟಲೆ ಮುಚ್ಚಬೇಕಾಗುತ್ತದೆ. ಸಂಚಾರದಟ್ಟಣೆ ಹೆಚ್ಚಾಗುತ್ತದೆ. ಪ್ರಾರ್ಥನೆಗೆ ಬರುವ ಜನರಿಗೆ ಸಮಸ್ಯೆ ಆಗಲಿದೆ ಎಂದು ಇಆರ್‌ಪಿ ಕನ್ಸಲ್ಟಂಟ್ ಕಂಪನಿಯ ಪ್ರತಿನಿಧಿಗಳಿಗೆ ಹೇಳಿದರು.

ಅಷ್ಟಕ್ಕೂ ಸುರಂಗ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ. ಆದರೆ, ನಿಲ್ದಾಣ ನಿರ್ಮಾಣ ಹಾಗೂ ಅದಕ್ಕಾಗಿ ಮರಗಳನ್ನು ಕಡಿಯುವುದಕ್ಕೆ ವಿರೋಧ ಇದೆ. ನಮ್ಮ ನೆಮ್ಮದಿ ಕದಡಿರುವವರಿಗೆ ಇಐಬಿ ಯಾವುದೇ ಕಾರಣಕ್ಕೂ ಆರ್ಥಿಕ ನೆರವು ನೀಡಬಾರದು ಎಂದು ಕೋರಿದರು. ಇದಕ್ಕೆ ದನಿಗೂಡಿಸಿದ ಮತ್ತೂಬ್ಬ ಸದಸ್ಯ, ನಗರಕ್ಕೆ ಮೆಟ್ರೋ ಬೇಕು. ಹಾಗಂತ ಎಲ್ಲವನ್ನೂ ನಾಶಪಡಿಸಿ, ಮೆಟ್ರೋ ಕಟ್ಟುವುದಕ್ಕೆ ನಮ್ಮ ಸಹಮತ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸದಸ್ಯೆಯೊಬ್ಬರು ಮಾತನಾಡಿ, ‘ಚರ್ಚ್‌ ಕಟ್ಟಡಕ್ಕೆ 150 ವರ್ಷಗಳ ಇತಿಹಾಸ ಇದೆ. ಮರಗಳು ಮತ್ತು ಶಾಲೆ ತೆರವುಗೊಳ್ಳುವುದರ ಜತೆಗೆ ಸುರಂಗದಲ್ಲಿ ಟನಲ್ ಬೋರಿಂಗ್‌ ಯಂತ್ರ ಹಾದುಹೋಗುವುದರಿಂದ ಚರ್ಚ್‌ಗೆ ಧಕ್ಕೆ ಆಗುವ ಸಾಧ್ಯತೆಯೂ ಇದೆ’ ಎಂದರು. ಟೆಂಡೋಲ್ಕರ್‌ ಮಾತನಾಡಿ, ‘ನಾವು ಬಿಎಂಆರ್‌ಸಿಎಲ್ ಪ್ರತಿನಿಧಿಗಳಾಗಿ ಬಂದಿಲ್ಲ. ಮೂರನೇ ವ್ಯಕ್ತಿಯಾಗಿ ಇದರ ಪರಿಶೀಲನೆಗೆ ಬಂದಿದ್ದೇವೆ. ಯೋಜನೆಯಿಂದಾಗುವ ಸಾಧಕ-ಭಾದಕಗಳನ್ನು ಪರಿಶೀಲಿಸಿ, ವರದಿ ಸಲ್ಲಿಸಲಾಗುವುದು’ ಎಂದು ಹೇಳಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.