![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಇನ್ಸ್ಪೆಕ್ಟರ್ ಮೇಲೆ ಪಾನಮತ್ತನ ಹಲ್ಲೆ
Team Udayavani, Apr 10, 2017, 11:36 AM IST
![police-halle.jpg](https://www.udayavani.com/wp-content/uploads/2017/04/10/police-halle.jpg)
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸಿದ್ದನ್ನು ಪ್ರಶ್ನಿಸಿದ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಟಿಕ್ಕಿಗಳನ್ನು ಮಹದೇವಪುರ ಠಾಣೆ ಪೊಲೀಸರು ಬಂಸಿದ್ದಾರೆ. ಬಿಹಾರ ಮೂಲದ ಪ್ರಿಯಾಂಶು ಮತ್ತು ಅಲೋಕ್ ಬಂತರು. ಹಳೆ ವಿಮಾನ ನಿಲ್ದಾಣ ಸಂಚಾರ ಠಾಣೆ ಇನ್ಸ್ಪೆಕ್ಟರ್ ಮೊಹಮ್ಮದ್ ಹಲ್ಲೆಗೊಳಗಾದವರು.
ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ದೊಡ್ಡನೆಕ್ಕುಂದಿ ಬಳಿಯ ಜಂಕ್ಷನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೊಹಮ್ಮದ್ ಅವರಿಗೆ ಪೊಲೀಸ್ ಕಂಟ್ರೋಲ್ ರೂಂನಿಂದ ಕರೆ ಬಂದಿತ್ತು. “ದೊಡ್ಡನೆಕ್ಕುಂದಿ ಬಳಿ ಕೆಲವರು ಶಸ್ತ್ರಾಸ್ತ್ರ ಇಟ್ಟು ಕೊಂಡು ಓಡಾಡುತ್ತಿದ್ದಾರೆ’ ಎಂದು ಮಾಹಿತಿ ನೀಡಲಾಗಿತ್ತು. ಈ ಸೂಚನೆ ಮೇರೆಗೆ ಮೊಹಮ್ಮದ್ ಸ್ಥಳಕ್ಕೆ ಹೋಗಿದ್ದರು. ಇದೇ ಮಾಹಿತಿ ಆಧರಿಸಿ ಮಹದೇವಪುರ ಠಾಣೆ ಇನ್ಸ್ಪೆಕ್ಟರ್ ಕೂಡ ಸ್ಥಳಕ್ಕೆ ಬಂದಿದ್ದರು. ಆದರೆ, ಅಲ್ಲಿ ಅಂತಹ ಯಾವುದೇ ವ್ಯಕ್ತಿಗಳು ಕಂಡು ಬಂದಿರಲಿಲ್ಲ. ಹಾಗಾಗಿ ಮಹದೇವಪುರ ಇನ್ಸ್ಪೆಕ್ಟರ್ ಅಲ್ಲಿಂದ ವಾಪಸ್ ತೆರಳಿದ್ದರು.
ಇನ್ಸ್ಪೆಕ್ಟರ್ ಮೊಹಮ್ಮದ್ ಅಲ್ಲಿಂದ ಇನ್ನೇನು ತೆರಳಬೇಕು ಎನ್ನುವಷ್ಟರಲ್ಲಿ ಇನ್ಸ್ಪೆಕ್ಟರ್ ಬಳಿಗೆ ಬಂದ ವ್ಯಕ್ತಿಯೊಬ್ಬ ಯಾರೋ ಇಬ್ಬರು ಯುವಕರು ನನ್ನ ಮೇಲೆ ಹಲ್ಲೆ ನಡೆಸಿ ಬೈಕ್ ಕಸಿದುಕೊಂಡರು ಎಂದು ಹೇಳಿಕೊಂಡಿದ್ದ. ಅಲ್ಲದೆ, ಬೈಕ್ ನಂಬರನ್ನೂ ನೀಡಿದ್ದ. ಹಾಗಾಗಿ ವಾಕಿಟಾಕಿ ಮೂಲಕ ಎಲ್ಲ ಸಿಬ್ಬಂದಿಗೂ ವಿಷಯ ತಿಳಿಸಿ ತಾವೂ ತಪಾಸಣೆಗಿಳಿದಿದ್ದರು. ಇದೇ ಮಾರ್ಗವಾಗಿ ಅಲೋಕ್ ಎಂಬಾತ ಬೈಕ್ ಓಡಿಸಿಕೊಂಡು ಬಂದಿದ್ದ.
ಮದ್ಯ ಸೇವಿಸಿದ್ದರಿಂದ ಪೊಲೀಸರನ್ನು ಕಂಡು ಅಲೋಕ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಸಿಬ್ಬಂದಿ ಕೂಡಲೇ ಆತನನ್ನು ಬೆನ್ನಟ್ಟಿ ವಶಕ್ಕೆ ಪಡೆದಿದ್ದರು. ನಂತರ ವಾಹನದ ದಾಖಲೆ ಪರಿಶೀಲನೆಗೆ ಮುಂದಾದಾಗ ಅಲೋಕ್ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದ. ನಂತರ ಸ್ನೇಹಿತ ಪ್ರಿಯಾಂಶುನನ್ನು ಕರೆಸಿಕೊಂಡ. ಸ್ಥಳಕ್ಕೆ ಬಂದ ಪ್ರಿಯಾಂಶು ಪೊಲೀಸರ ಜತೆ ಜಗಳ ತೆಗೆದು ಇನ್ಸ್ಪೆಕ್ಟರ್ ಮೊಹಮ್ಮದ್ ಕೆನ್ನೆಗೆ ಹೊಡೆದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.