ಗುತ್ತಿಗೆದಾರರ ಹಣದಿಂದಲೇ ಹೊಸ ಟೈಲ್ಸ್‌ ಅಳವಡಿಕೆ

ಅಧಿಕಾರಿಗಳಿಗೆ ಕಂದಾಯ ಸಚಿವ ಆರ್‌.ಅಶೋಕ್‌ ಸೂಚನೆ ರಸ್ತೆಗೆ ಅಳವಡಿಸಿರುವ ಟೈಲ್ಸ್‌ಗಳ ಬಣ್ಣ ಹಾಳಾದ ಹಿನ್ನೆಲೆ ಕ್ರಮ

Team Udayavani, Aug 14, 2021, 1:24 PM IST

ಗುತ್ತಿಗೆದಾರರ ಹಣದಿಂದಲೇ ಹೊಸ ಟೈಲ್ಸ್‌ ಅಳವಡಿಕೆ

ಬೆಂಗಳೂರು: ಕಮರ್ಷಿಯಲ್‌ ಸ್ಟ್ರೀಟ್‌ ರಸ್ತೆಗೆ ಅಳವಡಿಸಿರುವ ಟೈಲ್ಸ್‌ಗಳ ಬಣ್ಣ ಹಾಳಾಗಿದ್ದು, ಕೂಡಲೆ ಅದನ್ನು ತೆರವುಗೊಳಿಸಿ ಗುತ್ತಿಗೆದಾರರ
ಹಣದಿಂದಲೇ ಸೆಪ್ಟೆಂಬರ್‌ ವೇಳೆಗೆ ಹೊಸ ಟೈಲ್ಸ್‌ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

ಸ್ಮಾರ್ಟ್‌ಸಿಟಿ ವತಿಯಿಂದ ಅಭಿವೃದ್ಧಿಪಡಿಸುತ್ತಿರುವ ಕಮರ್ಷಿಯಲ್‌ ಸ್ಟ್ರೀಟ್‌ ರಸ್ತೆ ಕಾಮಗಾರಿ ಬಗ್ಗೆ ಸಾಕಷ್ಟು ದೂರುಗಳುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

ಕಮರ್ಷಿಯಲ್‌ ಸ್ಟ್ರೀಟ್‌ ರಸ್ತೆಯು450 ಮೀಟರ್‌ ಉದ್ದವಿದ್ದು, ಸ್ಮಾರ್ಟ್‌ ಸಿಟಿ ವತಿಯಿಂದ 5.5 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿಯನ್ನು ಕೈಗತ್ತಿಕೊಳ್ಳಲಾಗಿದೆ.

ಇದನ್ನೂ ಓದಿ:ಶಿಕಾರಿಪುರ:ಸಂಗೊಳ್ಳಿ ರಾಯಣ್ಣ ಪುತ್ಥಳಿ ರಾತ್ರೋರಾತ್ರಿ ತೆರವು

ರಸ್ತೆಗೆ ಅಳವಡಿಸಿರುವ ಟೈಲ್ಸ್‌ಗಳ ಬಣ್ಣ ಹಾಳಾಗಿದ್ದು, ಅವುಗಳನ್ನು ಪೂರ್ತಿಯಾಗಿ ತೆಗೆದು ಗುಣಮಟ್ಟವಿರುವ ಟೈಲ್ಸ್‌ಗಳನ್ನು ಅಳವಡಿಸಿ,
ಮಾದರಿ ರಸ್ತೆಯನ್ನಾಗಿ ಮಾಡಲು ತಿಳಿಸಲಾಗಿದೆ. ಅಲ್ಲದೆ, ಕಮರ್ಷಿಯಲ್‌ ಸ್ಟ್ರೀಟ್‌ಗೆ ಹೊಂದಿಕೆಯಾಗುವ ಕ್ರಾಸ್‌ ರಸ್ತೆಗಳನ್ನು ಸಹಹೊಸದಾಗಿ ಸೇರ್ಪಡೆ ಮಾಡಿಕೊಂಡು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಹೆಚ್ಚುವರಿ ಹಣ ವ್ಯಯಿಸುವುದಿಲ್ಲ:ಕಮರ್ಷಿಯಲ್‌ ಸ್ಟ್ರೀಟ್‌ ರಸ್ತೆ ಕಾಮಗಾರಿಗೆ ಹೆಚ್ಚುವರಿ ಹಣ ವ್ಯಯಿಸುವುದಿಲ್ಲ. ಯಾವುದೇ ಕಳಪೆ ಟೈಲ್ಸ್‌
ಅಳವಡಿಸಿರುವುದಿರಿಂದ ಗುತ್ತಿಗೆದಾರರೇ ಸದ್ಯ ಅಳವಡಿಸಿರುವ ಟೈಲ್ಸ್‌ ತೆರವುಗೊಳಿಸಿ ಗುಣಮಟ್ಟದ ಟೈಲ್ಸ್‌ ಅಳವಡಿಸಲಿದ್ದು, ರಸ್ತೆಯನ್ನು ಮೂರು ವರ್ಷಗಳ ಕಾಲ ಗುತ್ತಿಗೆದಾರರೇ ನಿರ್ವಹಣೆ ಮಾಡಲಿದ್ದಾರೆ ರಸ್ತೆಯ ಎರಡೂ ಬದಿ ಪಾದಚಾರಿ ಮಾರ್ಗಗಳಲ್ಲಿ ಯುಟಿಲಿಟಿ,  ಡಕ್ಟ್ ಗಳನ್ನು ಅಳವಡಿಸಲಾಗಿದೆ. ಅಲ್ಲ ಅಂಗಡಿಗಳಿಗೆ ಮಳೆ ನೀರು ನುಗ್ಗದ ಹಾಗೆ ಕಾಲುವೆಗೆ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಲಾಗಿದೆ. ಇರುವ ರಸ್ತೆಯನ್ನು ತ್ವರಿತಗತಿಯಲ್ಲಿ ದುರಸ್ತಿಗೊಳಿಸಲು ತಾಕೀತು ಮಾಡಲಾಗಿದೆ ಎಂದರು.

ರಾಜಕಾಲುವೆ ಪರಿಶೀಲನೆ:ಇದೇ ವೇಳೆ ಹಲಸೂರು ಕೆರೆ ಬಳಿಯ ಗುರುದ್ವಾರ ಜಂಕ್ಷನ್‌ ಮುಂಭಾಗದ ರಾಜಕಾಲುವೆಯನ್ನು ಪರಿಶೀಲನೆ ಮಾಡಿದರು. ಮಳೆಗಾಲದ ವೇಳೆ ನೀರು ಸರಾಗವಾಗಿ ಹರಿದು ಹೋಗಬೇಕು.ಈಭಾಗದಲ್ಲಿ ಯಾವುದೇ ಸಮಸ್ಯೆ ಆಗಬಾರದು. ಕಾಲ ಕಾಲಕ್ಕೆ ಕಾಲುವೆಯಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸುತ್ತಿರಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ‌ ಶಾಸಕ ರಿಜ್ವಾನ ಹರ್ಷದ್‌, ಪಾಲಿಕೆ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌, ಮುಖ್ಯ ಆಯುಕ್ತ ಗೌರವ್‌ ಗುಪ್ತ, ಪೂರ್ವವಲಯ ಆಯುಕ್ತ ಮನೋಜ್‌ ಜೈನ್‌, ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌, ಪೂರ್ವ ವಲಯ ಜಂಟಿ ಆಯುಕ್ತೆ ಪಲ್ಲವಿ, ವಲಯ ಮುಖ್ಯ ಇಂಜಿನಿಯರ್‌ ಪ್ರಭಾಕರ್‌, ಸ್ಮಾರ್ಟ್‌ ಸಿಟಿ ಮುಖ್ಯ ಇಂಜಿನಿಯರ್‌ ಪ್ರಹ್ಲಾದ್‌ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.