6 ತಿಂಗಳಲ್ಲಿ ಬೆಂಗಳೂರಿನ ಚಿತ್ರಣ ಬದಲು


Team Udayavani, Jan 29, 2020, 3:07 AM IST

aru-tinga

ಬೆಂಗಳೂರು: ಆರು ತಿಂಗಳಲ್ಲಿ ಬೆಂಗಳೂರಿನ ಚಿತ್ರಣ ಬದಲಾಯಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಮಂಗಳವಾರ ಬಸವನಗುಡಿಯ ನ್ಯಾಷನಲ್‌ ಹೈಸ್ಕೂಲ್‌ ಮೈದಾನದಲ್ಲಿ ಆಯೋಜಿಸಿದ್ದ ಅಕ್ರಮ- ಸಕ್ರಮ ಯೋಜನೆಯಡಿ ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ರಾಜಧಾನಿಯ ಜನತೆ ಅಚ್ಚರಿ ಪಡುವಂತೆ ಬೆಂಗಳೂರನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ 9 ಸಾವಿರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ಸಾವಿರ ಸೇರಿದಂತೆ ಒಟ್ಟು 10 ಸಾವಿರ ಆರ್ಥಿಕವಾಗಿ ಹಿಂದುಳಿದ ವರ್ಗದ ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿರುವುದು ತೃಪ್ತಿ ತಂದಿದೆ ಎಂದರು.

ಜನರ ಶ್ರೇಯೋಭಿವೃದ್ಧಿಗಾಗಿ ಕಂದಾಯ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿ ಸುತ್ತಿದೆ. ಅದರಲ್ಲಿ 94 (ಸಿ) ಮತ್ತು 94 (ಸಿಸಿ) ಯಡಿ ಅಕ್ರಮ ಸಕ್ರಮ ಯೋಜನೆ ಬಡಜನರಿಗೆ ಅತ್ಯಂತ ಉಪಯುಕ್ತವಾಗಿದೆ.

ಸರ್ಕಾರಿ ಜಮೀನುಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ವಾಸದ ಮನೆಗಳನ್ನು ನಿರ್ಮಿಸಿಕೊಂಡಿದ್ದಲ್ಲಿ ಅಂತಹ ವಾಸದ ಮನೆಗಳನ್ನು ಸಕ್ರಮ ಮಾಡಲು ಕರ್ನಾಟಕ ಭೂ-ಕಂದಾಯ ಕಾಯ್ದೆ 1964 ರ ಕಲಂ 94 (ಸಿ) ಮತ್ತು 94 (ಸಿಸಿ) ಅವಕಾಶವನ್ನು ಸರ್ಕಾರ ಕಲ್ಪಿಸಿಕೊಟ್ಟಿದೆ ಎಂದರು.

ಕಂದಾಯ ಸಚಿವ ಆರ್‌.ಅಶೋಕ್‌ ಮಾತನಾಡಿ, ಸರ್ಕಾರ ಬಂದು ಆರು ತಿಂಗಳಲ್ಲಿಯೇ 1090 ಎಕರೆ ಗೋಮಾಳವನ್ನು ಸ್ಮಶಾನ ಮತ್ತು ಶಾಲೆಗಳಿಗೆ ನೀಡಲಾಗಿದೆ. ಎಲ್ಲೆಲ್ಲಿ ಸರ್ಕಾರಿ, ಗೋಮಾಳ ಜಮೀನು ಒತ್ತುವರಿ ಮಾಡಿಕೊಳ್ಳಲಾಗಿದೆಯೋ ಎಲ್ಲವನ್ನು ವಶಪಡಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಸಚಿವ ವಿ.ಸೋಮಣ್ಣ, ಸಂಸದ ಮುನಿಸ್ವಾಮಿ, ಪಿ.ಸಿ.ಮೋಹನ್‌, ಶಾಸಕ ಅರವಿಂದ ಲಿಂಬಾವಳಿ, ಎಸ್‌.ರಘು, ಭೈರತಿ ಬಸವರಾಜು, ಸತೀಶ್‌ರೆಡ್ಡಿ, ಗೋಪಾಲಯ್ಯ, ರವಿಸುಬ್ರಮಣ್ಯ, ಎಸ್‌.ಟಿ.ಸೋಮಶೇಖರ್‌, ಮೇಯರ್‌ ಗೌತಮ್‌ ಕುಮಾರ್‌ ಜೈನ್‌ ಉಪಸ್ಥಿತರಿದ್ದರು.

10 ಸಾವಿರ ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 886, ರಾಜರಾಜೇಶ್ವರಿ ನಗರ 136, ದಾಸರಹಳ್ಳಿ 372, ಯಲಹಂಕ 1660, ಮಹದೇವಪುರ 1773, ಕೆ.ಆರ್‌.ಪುರ 13, ಸಿ.ವಿ.ರಾಮನ್‌ನಗರ 93, ಬೆಂಗಳೂರು ದಕ್ಷಿಣ 2137, ಪದ್ಮನಾಭನಗರ 41, ವಿಜಯನಗರ 13, ಬೊಮ್ಮನಹಳ್ಳಿ 460, ಬ್ಯಾಟರಾಯನಪುರ 882, ಆನೇಕಲ್‌ 534, ಬೆಂಗಳೂರು ಗ್ರಾಮಾಂತರದಲ್ಲಿ 1000 ಸೇರಿ ಒಟ್ಟಾರೆ 10 ಸಾವಿರ ಫ‌ಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಯಿತು.

ವಸತಿ ಇಲಾಖೆಯಿಂದ ಬೆಂಗಳೂರಿನಲ್ಲಿ 1 ಲಕ್ಷ ಮನೆಗಳು ಹಾಗೂ 200 ಕೊಳಗೇರಿ ಪ್ರದೇಶದಲ್ಲಿ ಮನೆ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಬಡವರ ನೆಮ್ಮದಿ ಬದುಕಿಗೆ ಸರ್ಕಾರ ಬದ್ಧವಾಗಿದ್ದು, ಆರು ತಿಂಗಳಲ್ಲಿ ಬೆಂಗಳೂರಿನ ಚಿತ್ರಣ ಬದಲಾಗಲಿದೆ.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.