ಪತಿ ಸಾವಿನ ಬಗ್ಗೆ ಸುಳ್ಳು ದಾಖಲೆ ನೀಡಿ 3 ಕೋಟಿ ವಿಮೆ ಪಡೆದ ಪತ್ನಿ
Team Udayavani, Feb 10, 2022, 11:48 AM IST
ಬೆಂಗಳೂರು: ವಿಮಾ ಕಂಪನಿಯ ಮೂರು ಕೋಟಿ ರೂ.ಗಾಗಿ ಪತ್ನಿಯೊಬ್ಬರು ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸುಳ್ಳು ದಾಖಲೆ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಖಾಸಗಿ ವಿಮಾ ಕಂಪನಿ ಕಾನೂನು ವಿಭಾಗ ವ್ಯವಸ್ಥಾಪಕ ಪಿ.ಎಸ್.ಗಣಪತಿ ಎಂಬುವರು ನೀಡಿದ ದೂರಿನ ಮೇರೆಗೆ ಕೋರಮಂಗಲಠಾಣೆ ಪೊಲೀಸರು, ವಿಟ್ಟಸಂದ್ರ ನಿವಾಸಿ ಸುಪ್ರಿಯಾ ಲಕಾಕುಲಾ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಆಂಧ್ರಪ್ರದೇಶ ಮೂಲದ ಕೃಷ್ಣಪ್ರಸಾದ್ ಗಾರಲಪಟ್ಟಿ (31) ಎಂಬುವರು ನಗರದ ವಿಟ್ಟಸಂದ್ರದ ಅಪಾರ್ಟ್ಮೆಂಟ್ನಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು.
ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಕೃಷ್ಣಪ್ರಸಾದ್ ಆನ್ಲೈನ್ನಲ್ಲಿ ವಿಮಾ ಕಂಪನಿಯನ್ನು ಸಂಪರ್ಕಿಸಿ, ಕಳೆದ 2021ರ ಮಾರ್ಚ್ 3ರಂದು ಮಹಾ ರಕ್ಷ ಸುಪ್ರೀಂ ಪಾಲಿಸಿಗೆ ಅರ್ಜಿ ಸಲ್ಲಿಸಿ ಫೋಟೋ, ಪಾನ್, ಆಧಾರ್, ಮೂರು ತಿಂಗಳ ವೇತನ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ಮರು ದಿನ ವೈದ್ಯಕೀಯ ವರದಿಗಳನ್ನು ಸಲ್ಲಿಸಿದ್ದರು.
ಆನ್ಲೈನ್ ಮೂಲಕವೇ ಕೃಷ್ಣಪ್ರದಾಸ್ ಅವರ ದಾಖಲೆ ಪರಿಶೀಲನೆ ನಡೆಸಿದ ವಿಮಾಕಂಪನಿ, 2021ರ ಮಾರ್ಚ್ 5ರಂದು ಕೃಷ್ಣಪ್ರಸಾದ್ಗೆ ಪಾಲಿಸಿ ನೀಡಿತ್ತು. ಅದರಂತೆ ವಾರ್ಷಿಕ ಪ್ರೀಮಿಯಂ 51,777 ರೂ. ಆಗಿದ್ದು, ಪಾಲಿಸಿ ಮೊತ್ತ ಮೂರು ಕೋಟಿ ರೂ. ಆಗಿತ್ತು. ಈ ಪಾಲಿಸಿ ಅವಧಿ 28 ವರ್ಷ ಆಗಿದ್ದರೂ 12 ವರ್ಷ ಮಾತ್ರ ವಿಮೆ ಕಂತು ಪಾವತಿಸಬೇಕಿತ್ತು. ಕೃಷ್ಣಪ್ರಸಾದ್ ಅವರು ಈ ಪಾಲಿಸಿಗೆ ಪತ್ನಿ ಸುಪ್ರಿಯಾ ಅವರನ್ನೇ ನಾಮಿನಿ ಮಾಡಿದ್ದರು. ದುರಂತವೆಂದರೆ, ಈ ಪಾಲಿಸಿ ಮಾಡಿಸಿ 2 ತಿಂಗಳು 9 ದಿನಕ್ಕೆ (2021ರ ಮೇ 14) ಕೃಷ್ಣಪ್ರಸಾದ್ ಮೃತಪಟ್ಟಿದ್ದರು.
ಕಳೆದ 2021ರ ಜುಲೈ 19ರಂದು ಕೃಷ್ಣಪ್ರಸಾದ್ ಪತ್ನಿ ಸುಪ್ರಿಯಾ ವಿಮಾ ಕಂಪನಿ ಕಚೇರಿಗೆ ಬಂದು ನನ್ನ ಪತಿ ಹೃದಯಘಾತದಿಂದ ಮೃತಪಟ್ಟಿರುವುದಾಗಿ ದಾಖಲೆ ಸಲ್ಲಿಸಿದ್ದರು. ಅದರಂತೆ ದಾಖಲೆ ಪರಿಶೀಲಿಸಿದ್ದ ವಿಮೆ ಕಂಪನಿ ಅಧಿಕಾರಿಗಳು, ನಾಮಿನಿಯಾಗಿದ್ದ ಸುಪ್ರಿಯಾ ಅವರ ಬ್ಯಾಂಕ್ ಖಾತೆಗೆ 3.2 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದರು.
ನಂತರ 2021ರ ಡಿ.24ರಂದು ರವಿ ಎಂಬವರು ವಿಮಾ ಕಂಪನಿ ಸಂಪರ್ಕಿಸಿ, ಪತ್ರವೊಂದನ್ನು ನೀಡಿದ್ದರು. ಅದರಲ್ಲಿ ಕೃಷ್ಣ ಪ್ರಸಾದ್ ಹೃದಯಾಘಾತದಿಂದ ಮೃತಪಟ್ಟಿಲ್ಲ. ಬದಲಾಗಿ ಕ್ಯಾನ್ಸರ್ ಕಾಯಿಲೆಯಿಂದ ಮೃತ ಪಟ್ಟಿದ್ದಾರೆ. ಆದರೆ, ಕ್ಯಾನ್ಸರ್ ಕಾಯಿಲೆ ಬಗ್ಗೆ ಮುಚ್ಚಿಟ್ಟು ಪಾಲಿಸಿ ಮಾಡಿಸಿದ್ದಾರೆ. ಇದೀಗ ಅವರ ಪತ್ನಿ ಸುಪ್ರಿಯಾ ನಕಲಿ ದಾಖಲೆ ಸಲ್ಲಿಸಿ ವಿಮಾ ಹಣ ಪಡೆದಿದ್ದಾರೆ ಎಂದು ತಿಳಿಸಿದ್ದರು. ಜತೆಗೆ ಕೃಷ್ಣಪ್ರಸಾದ್ ಚಿಕಿತ್ಸೆ ಪಡೆದಿದ್ದ ಖಾಸಗಿಆಸ್ಪತ್ರೆಯ ದಾಖಲೆಗಳನ್ನು ನೀಡಿದ್ದರು. ಈಸಂಬಂಧ ಪರಿಶೀಲಿಸಿದ ವಿಮಾ ಕಂಪನಿಸುಪ್ರಿಯಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ