ಮಕ್ಕಳಿಗೆ ಬುದ್ಧಿವಾದ; ಪೋಷಕರಿಗೆ ಕಿವಿಮಾತು ಹೇಳಿದ ಕೋರ್ಟ್‌


Team Udayavani, Dec 1, 2018, 12:33 PM IST

highcourt4.jpg

ಬೆಂಗಳೂರು: ಸ್ಥಿರಾಸ್ತಿ ಮೇಲಿನ ಹಕ್ಕು ಸಾಧಿಸುವ ಪ್ರಕರಣವೊಂದರ ವಿಚಾರಣೆ ವೇಳೆ ಶುಕ್ರವಾರ ಮಕ್ಕಳಿಗೆ ಬುದ್ಧಿವಾದ ಹೇಳಿದ ಹೈಕೋರ್ಟ್‌ ಮಕ್ಕಳನ್ನು ಬೆಳೆಸುವ ರೀತಿ ಬಗ್ಗೆ ಪೋಷಕರಿಗೆ ಕಿವಿಮಾತು ಹೇಳಿತು. ಈ ಕುರಿತ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಕ್ಕಳು ಹಾಗೂ ಪೋಷಕರ ನಡುವಿನ ಬಾಂಧವ್ಯಕ್ಕೆ ಪ್ರೀತಿ-ವಿಶ್ವಾಸವೇ ಸೇತುವೆ ಎಂದು ಅಭಿಪ್ರಾಯಪಟ್ಟಿತು.

ತನಗೆ ಬರೆದ ದಾನಪತ್ರವನ್ನು ತಾಯಿ ವಾಪಸ್‌ ಪಡೆದಿರುವ ಕ್ರಮವನ್ನು ಪ್ರಶ್ನಿಸಿ ಮೈಸೂರಿನ ಎನ್‌.ಡಿ. ವನಮಾಲಾ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಪೀಠ, 82 ವರ್ಷದ ವಿಧವೆ ತಾಯಿಯ ಪೋಷಣೆ ಬಗ್ಗೆ ಕಾಳಜಿ ವಹಿಸದೇ ಆಕೆಯ ಸ್ಥಿರಾಸ್ತಿ ಮೇಲೆ ಹಕ್ಕು ಸಾಧಿಸಲು ಹೊರಟ ಮಗಳ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿತು. ಅಲ್ಲದೇ ಮಗಳು ಸಲ್ಲಿಸಿದ ರಿಟ್‌ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿತು.

ವಿಚಾರಣೆ ನಡೆಸಿದ ನ್ಯಾಯಪೀಠ, ಆದೇಶದಲ್ಲಿ ಭಗವದ್ಗೀತೆಯ ಶ್ಲೋಕಗಳು ಮತ್ತು ಡಿ.ವಿ. ಗುಂಡಪ್ಪ ಅವರ ಮಂಕು ತಿಮ್ಮನ ಕಗ್ಗದ ಸಾಲುಗಳನ್ನು ಉಲ್ಲೇಖೀಸಿ “ದಯೆಗಿಂತ ದೊಡ್ಡದಾದ ಧರ್ಮ ಯಾವುದೂ ಇಲ್ಲ. ತಂದೆ-ತಾಯಿಗಿಂತ ದೊಡ್ಡ ದೇವರಿಲ್ಲ, ಕ್ರೋಧಕ್ಕಿಂತ ದೊಡ್ಡ ಶತ್ರು ಇನ್ನೊಂದಿಲ್ಲ. ಮರ್ಯಾದೆಗಿಂತ ದೊಡ್ಡ ಸಂಪತ್ತು ಮತ್ತೂಂದಿಲ್ಲ.

ಪೋಷಕರು ಇಲ್ಲದೇ ನಾವು ಈ ಭೂಮಿಯ ಮೇಲೆ ಹುಟ್ಟಿ ಬಂದಿಲ್ಲ. ಅವರು ನಮ್ಮನ್ನು ಸಾಕಿ, ಸಲುಹಿ, ಶಿಕ್ಷಣ ನೀಡಿ ಬೆಳೆಸಿದ್ದಾರೆ. ಮಕ್ಕಳು ಪೋಷಕರ ಗೌರವ ಕಳೆಯಬಾರದು. ಅವರ ಬಾಳಿನ ಇಳಿವಯಸ್ಸಿನಲ್ಲಿ ನಾವು ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿದೆ.

ಇದೇ ವೇಳೆ “ಮಕ್ಕಳು ಈ ದೇಶದ ಆಸ್ತಿ. ಹಿರಿಯರ ಬಗ್ಗೆ ಗೌರವ, ಆದರ ಹಾಗೂ ಪ್ರೀತಿ ಸದಾ ರೂಢಿಸಿಕೊಳ್ಳುವಂತೆ ಅವರನ್ನು ಬೆಳೆಸುವಲ್ಲಿ ಪೋಷಕರು ನಿಗಾ ವಹಿಸಬೇಕು. ಅಂತೆಯೇ ಮಕ್ಕಳೂ ಪೋಷಕರ ತ್ಯಾಗವನ್ನು ಮರೆಯಬಾರದು ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿತು.

ಏನಿದು ಪ್ರಕರಣ?: ನಮ್ಮ ತಾಯಿ ನಮಗೆ ಬರೆದಿದ್ದ ದಾನಪತ್ರವನ್ನು ವಾಪಸು ಪಡೆದಿದ್ದಾರೆ. ಇದನ್ನು ಮೈಸೂರಿನ ಉಪವಿಭಾಗಧಿಕಾರಿ ನೀಡಿದ್ದ ಆದೇಶವನ್ನು ಜಿಲ್ಲಾಧಿಕಾರಿ ಮುಂದೆ ಪ್ರಶ್ನಿಸಲಾಗಿತ್ತು. ಆದರೆ, ಜಿಲ್ಲಾಧಿಕಾರಿ ಕೂಡಾ ಹಿರಿಯ ನಾಗರಿಕರು ಹಾಗೂ ಪೋಷಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ2007ರ ಕಲಂ 23 (1)ರ ಪ್ರಕಾರ ನೀಡಲಾಗಿರುವ ಉಪವಿಭಾಗಾಧಿಕಾರಿಯವರ ಆದೇಶವನ್ನು ಎತ್ತಿ ಹಿಡಿದ್ದಾರೆ.

ಇದು ಕಾನೂನು ಬಾಹಿರ ಎಂದುಈ ಆದೇಶ ಎ.ಸಿ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಇದು ಕಾನೂನು ಬಾಹಿರ ಎಂದು ಆಕ್ಷೇಪಿಸಿ ಮೈಸೂರಿನ ಎನ್‌.ಡಿ.ವನಮಾಲಾ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಪೀಠ ವಜಾಗೊಳಿಸಿತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.