ಲೋಕಸೇವಾ ಆಯೋಗದಿಂದ 29ಕ್ಕೆ ಸಂದರ್ಶನ
Team Udayavani, Jul 4, 2019, 3:00 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಭ್ಯರ್ಥಿಗಳ ಸಂದರ್ಶನ ದಿನಾಂಕ ಪ್ರಕಟಿಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಬುಧವಾರ ಉಪವಾಸ ಸತ್ಯಾಗ್ರಹ ಆರಂಭಿಸುತ್ತಿದ್ದಂತೆ ಎಚ್ಚೆತ್ತ ಆಯೋಗವು ಇದೇ 29ರಂದು ಸಂದರ್ಶನ ನಡೆಸುವುದಾಗಿ ಪ್ರಕಟಿಸಿದೆ.
2015ರ ಬ್ಯಾಚ್ನ ಕೆಎಎಸ್ ಅಧಿಕಾರಿಗಳ ಆಯ್ಕೆಗೆ 2017ರ ಮೇ 12ರಂದು ಅಧಿಸೂಚನೆ ಹೊರಡಿಸಿ 2017ರ ಆ.20ಕ್ಕೆ ಪೂರ್ವಭಾವಿ ಪರೀಕ್ಷೆ ಕೂಡ ನಡೆದಿತ್ತು. ಬಳಿಕ 2017ರ ಡಿಸೆಂಬರ್ನಲ್ಲಿ ಮುಖ್ಯ ಪರೀಕ್ಷೆ ನಡೆದಿದ್ದು, ವರ್ಷ ಕಳೆದರೂ ಫಲಿತಾಂಶ ಪ್ರಕಟಿಸಿರಲಿಲ್ಲ. ಫಲಿತಾಂಶ ಪ್ರಕಟಿಸುವಂತೆ ಸುರೇಶ್ ಕುಮಾರ್ ಅವರು ನಿರಂತರವಾಗಿ ಒತ್ತಾಯಿಸುತ್ತಿದ್ದರು. ಬಳಿಕ 2019ರ ಜ.28ರಂದು ಫಲಿತಾಂಶ ಪ್ರಕಟವಾಗಿತ್ತು. ಬಳಿಕ, ಸುರೇಶ್ ಕುಮಾರ್ ಅವರು ಒತ್ತಾಯ ಮಾಡಿದರೂ ಸಂದರ್ಶನದ ದಿನಾಂಕ ಪ್ರಕಟಿಸಿರಲಿಲ್ಲ.
ಈ ಹಿನ್ನೆಲೆಯಲ್ಲಿ ಬುಧವಾರ ಕೆಪಿಎಸ್ಸಿ ಕಚೇರಿ ಎದುರು ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದರು. ತಕ್ಷಣವೇ ಆಯೋಗದ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಜು.29ರಂದು ಸಂದರ್ಶನ ನಡೆಸುವುದಾಗಿ ಭರವಸೆ ನೀಡಿದರು. ಇದನ್ನು ಒಪ್ಪದ ಸುರೇಶ್ ಕುಮಾರ್ ಲಿಖೀತ ಮಾಹಿತಿ ನೀಡುವಂತೆ ಒತ್ತಾಯಿಸಿದರು. ಬಳಿಕ, ಕೆಪಿಎಸ್ಸಿ ಕಾರ್ಯದರ್ಶಿ ಜನ್ನು, ಜು.29ರಂದು ಸಂದರ್ಶನ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಲಿಖೀತ ರೂಪದಲ್ಲಿ ತಿಳಿಸಿದರು. ಬಳಿಕ, ಅವರು ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆ ಬೆಂಬಲಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಇತರರು ಪಾಲ್ಗೊಂಡಿದ್ದರು. ಜು.29ರಿಂದ ಪ್ರಾರಂಭವಾಗುವ ಸಂದರ್ಶನ ಹೋಟಾ ಸಮಿತಿಯ ಶಿಫಾರಸಿನಂತೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅನ್ಯಾಯಕ್ಕೆ ಅವಕಾಶ ನೀಡಬಾರದು ಎಂದು ಸುರೇಶ್ ಕುಮಾರ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ