ಬೆಡ್‌ರೂಂ ಇಣುಕುವ ವಿಕೃತನ ಬಗ್ಗೆ ಜನ ಜಾಗೃತಿ


Team Udayavani, Mar 18, 2017, 11:56 AM IST

bedroom.jpg

ಬೆಂಗಳೂರು: ರಾತ್ರಿ ವೇಳೆ ದಂಪತಿಗಳ ಕೊಠಡಿ ಬಳಿ ಬಂದು ಇಣುಕಿ ನೋಡುತ್ತಿರುವ ವ್ಯಕ್ತಿಯ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸ್ಥಳೀಯ ನಿವಾಸಿಗಳು ಫೇಸ್‌ಬುಕ್‌ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೇ ಈ ಸಂಬಂಧ ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದ್ದಾರೆ.

ಕೆಲ ದಿನಗಳ ಹಿಂದೆ ರಾಜರಾಜೇಶ್ವರಿ ನಗರದಲ್ಲಿ ತಡರಾತ್ರಿ ಕಾಣಿಸಿಕೊಳ್ಳುತ್ತಿದ್ದ ವ್ಯಕ್ತಿ, ಅಪಾರ್ಟಮೆಂಟ್‌, ಮನೆಗಳ ಬಾತ್‌ರೂಂ, ಬೆಡ್‌ರೂಂಗಳ ಕಿಟಕಿಗಳ ಬಳಿ ಧಿಡೀರ್‌ ಪ್ರತ್ಯಕ್ಷನಾಗುತ್ತಿದ್ದ. ಈ ಸಂಬಂಧ ಕೆಲ ಸ್ಥಳೀಯರು ಫೇಸ್‌ಬುಕ್‌ನಲ್ಲಿ ಗ್ರೂಪ್‌ ಸೃಷ್ಟಿಸಿ, ತಮಗಾದ ಅನುಭವಗಳನ್ನು ಹಂಚಿಕೊಂಡು, ಇತರರಿಗೂ ಎಚ್ಚರಿಕೆ ನೀಡಿದ್ದರು.

ಜತೆಗೆ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಅಪರಿಚಿತ ವ್ಯಕ್ತಿಯ ಮುಖ ಚಹರೆಯನ್ನು ಪ್ರಕಟಿಸಿದ್ದರು. ಇದೇ ಪೋಸ್ಟನ್ನು ಸಾರ್ವಜನಿಕರೊಬ್ಬರು ಇದೀಗ ಮತ್ತೆ ಶೇರ್‌ ಮಾಡಿದ್ದು, ರಾಜರಾಜೇಶ್ವರಿ ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಫೇಸ್‌ಬುಕ್‌ನಲ್ಲಿ ಏನಿದೆ?: “ರಾಜರಾಜೇಶ್ವರಿ ನಗರದ ನಿವಾಸಿಗಳೇ ಎಚ್ಚರಿಕೆಯಿಂದ ಇರಿ. ಬಿಇಎಂಎಲ್‌ ಬಡಾವಣೆಯ ನ್ಯೂ ಹಾರಿಜಾನ್‌ ಶಾಲೆಯ ಬಳಿ ಒಬ್ಬ ವಿಚಿತ್ರ ವ್ಯಕ್ತಿ ರಾತ್ರಿ ಹೊತ್ತು ಸಂಚರಿಸುತ್ತಿದ್ದು, ಮನೆಗಳ ಬೆಡ್‌ ರೂಂ ಮತ್ತು ಶೌಚಾಲಯಗಳನ್ನು ಇಣುಕಿ ನೋಡುತ್ತಾನೆ. ಮಹಿಳೆಯರನ್ನೇ ಈತ ಗುರಿಯಾಗಿರಿಸಿಕೊಂಡು ರಾತ್ರಿ 11 ರಿಂದ 2 ಗಂಟೆವರೆಗೆ ಸುತ್ತಾಡುತ್ತಿದ್ದಾನೆ’.

“ಈ ವ್ಯಕ್ತಿಯನ್ನು ನಾವು ನೋಡಿದ್ದೇವೆ. ಹಿಡಿಯಲು ಹಲವು ಬಾರಿ ಯತ್ನಿಸಿದ್ದರೂ, ಆತ ತಪ್ಪಿಸಿಕೊಳ್ಳುತ್ತಿದ್ದಾನೆ. ಸುಲಭವಾಗಿ ಮನೆಗಳ ಕಾಂಪೌಂಡ್‌,  ಗೋಡೆ ಮತ್ತು ನೀರಿನ ಪೈಪ್‌ಗ್ಳನ್ನು ಹತ್ತಿ ಇಳಿದು ಪರಾರಿಯಾಗುತ್ತಾನೆ. ಆತ ಬಹಳ ಅಪಾಯಕಾರಿ ವ್ಯಕ್ತಿಯಾಗಿದ್ದು, ಹಿಡಿಯಲು ಎಲ್ಲರ ಸಹಾಯಬೇಕಿದೆ. ನಿಮ್ಮ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿ, ಒಂದು ವೇಳೆ ಆತ ಪತ್ತೆಯಾದರೆ ಹಿಡಿಯಲು ಸಹಾಯ ಮಾಡಿ’ ಎಂದು ಪೋಸ್ಟ್‌ ಮಾಡಿದ್ದರು.

ಪೊಲೀಸರ ರಾತ್ರಿ ಗಸ್ತು ಹೆಚ್ಚಳ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು, ಆರು ತಿಂಗಳ ಹಿಂದಿನ ಪೋಸ್ಟ್‌ನ್ನು ಇದೀಗ ಮತ್ತೆ ರಿಪೋಸ್ಟ್‌ ಮಾಡಿದ್ದಾರೆ. ಈ ರೀತಿ ರಾತ್ರಿ ಹೊತ್ತು ಸಂಚಾರ ಮಾಡುವ ವ್ಯಕ್ತಿಯ ಬಗ್ಗೆ ದೂರು ಬಂದಿದ್ದು, ಆರೋಪಿಯ ಪತ್ತೆ ಕಾರ್ಯ ಕೂಡ ನಡೆಸಲಾಗಿತ್ತು. ಸ್ಥಳೀಯರ ಮಾಹಿತಿ ಹಿನ್ನೆಲೆಯಲ್ಲಿ ನಾಕಾ ಬಂದಿ ಹಾಕಿ ತಪಾಸಣೆ ನಡೆಸಲಾಗಿತ್ತು.

ಸುಮಾರು ಒಂದು ತಿಂಗಳ ಕಾಲ ಹುಡುಕಾಟ ನಡೆಸಲಾಗಿದೆ. ಆದರೆ, ಆರೋಪಿಯ ಸುಳಿವು ಸಿಕ್ಕಿಲ್ಲ. ಇದೀಗ ಆತ ಮತ್ತೆ ಕಾಣಿಸಿಕೊಂಡಿದ್ದಾನೆ ಎಂಬ ಬಗ್ಗೆ ಯಾರೂ ಮಾಹಿತಿ ನೀಡಿಲ್ಲ. ಆದರೂ ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ರಾತ್ರಿ ಗಸ್ತು ಹೆಚ್ಚಿಸಲಾಗುತ್ತದೆ ಎಂದು “ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.