![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಮಾಲೀಕನ ಮನೆಯ ಲಾಕರ್ ಹೊತ್ತೂಯ್ದ ಆರೋಪಿ ಸೆರೆ
Team Udayavani, Oct 30, 2018, 11:51 AM IST
![malikana.jpg](https://www.udayavani.com/wp-content/uploads/2018/10/30/malikana.jpg)
ಬೆಂಗಳೂರು: ಕೈಗಾರಿಕೋದ್ಯಮಿ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಮದುಬನಿ ಜಿಲ್ಲೆಯ ಅಖೀಲೇಶ್ ಕುಮಾರ್ (21) ಬಂಧಿತ. ಈತನಿಂದ 90 ಲಕ್ಷ ರೂ. ಮೌಲ್ಯದ 2 ಕೆ.ಜಿ. ವಜ್ರ ಮತ್ತು ಚಿನ್ನಾಭರಣಗಳು ಮತ್ತು ಅರ್ಧ ಕೆ.ಜಿ. ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ಉದ್ಯಮಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ.
ಆರೋಪಿ ಅ.17ರಂದು ಕೈಗಾರಿಕೋದ್ಯಮಿ ಸತ್ಯಪ್ರಕಾಶ್ ಮನೆಯಲ್ಲಿ ವಜ್ರ ಮತ್ತು ಚಿನ್ನಾಭರಣ, ಬೆಳ್ಳಿಯ ವಸ್ತುಗಳಿದ್ದ ಲಾಕರ್ ಕಳವು ಮಾಡಿದ್ದ. ಈ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆರೋಪಿ ಅಖೀಲೇಶ್ ಕುಮಾರ್ ಒಂದೂವರೆ ವರ್ಷಗಳ ಹಿಂದೆ ಉದ್ಯಮಿ ಸತ್ಯಪ್ರಕಾಶ್ ಮನೆಯಲ್ಲಿ ಅಡುಗೆ ಹಾಗೂ ಮನೆಗೆಲಸ ಮಾಡುತ್ತಿದ್ದ. ಬಳಿಕ ಹೆಚ್ಚಿನ ಸಂಬಳಕ್ಕಾಗಿ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ ಐದು ತಿಂಗಳ ಹಿಂದೆ ಪರಿಚಯಸ್ಥರ ಮೂಲಕ ಆರೋಪಿಯನ್ನು ಸಂಪರ್ಕಿಸಿದ ಸತ್ಯಪ್ರಕಾಶ್, ಮತ್ತೂಮ್ಮೆ ಕೆಲಸಕ್ಕೆ ಕರೆಸಿಕೊಂಡಿದ್ದರು.
ಮನೆಯ ಸದಸ್ಯರ ವಿಶ್ವಾಸ ಗಳಿಸಿದ್ದ ಆರೋಪಿಗೆ ಮನೆಯ ಎಲ್ಲ ಕೊಠಡಿಗಳ ಕೀಗಳನ್ನು ಕೊಟ್ಟಿದ್ದರು. ಇದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ ಅ.17ರಂದು ದಸರಾ ಪ್ರಯುಕ್ತ ಸತ್ಯಪ್ರಕಾಶ್ ಕುಟುಂಬ ಸಮೇತ ಊರಿಗೆ ಹೋಗಿದ್ದಾಗ, ಮನೆಯ ಮೊದಲನೇ ಮಹಡಿಯ ಕೊಠಡಿಯ ಕಬೋರ್ಡ್ನಲ್ಲಿ ಅಳವಡಿಸಿದ್ದ ಲಾಕರ್ ಅನ್ನು ಕದ್ದೊಯ್ದಿದ್ದ.
ಇದರಲ್ಲಿ 2 ಕೆ.ಜಿ. ವಜ್ರ ಮತ್ತು ಚಿನ್ನದ ಒಡವೆಗಳು ಹಾಗೂ ಅರ್ಧ ಕೆ.ಜಿ. ಬೆಳ್ಳಿ ವಸ್ತುಗಳು ಇದ್ದವು. ಈ ಬಗ್ಗೆ ಸತ್ಯಪ್ರಕಾಶ್ ಮಡಿವಾಳ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗದ ಡಿಸಿಪಿ ಡಾ.ಬೋರಲಿಂಗಯ್ಯ ವಿಶೇಷ ತಂಡ ರಚಿಸಿದ್ದರು. ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಅವರು ಹೇಳಿದರು.
ರೈಲು ಏರಿ ಬಿಹಾರಕ್ಕೆ ಪರಾರಿ: ಆರೋಪಿ ಅಖೀಲೇಶ್ ಮನೆಯಿಂದ ಲಾಕರ್ನ್ನು ಕೊಂಡೊಯ್ದು ಇಂದಿರಾನಗರದಲ್ಲಿ ಲಾಕರ್ನ್ನು ಹೊಡೆದು, ಅದರಲ್ಲಿದ್ದ ವಜ್ರ, ಚಿನ್ನಾಭರಣಗಳನ್ನು ತೆಗೆದುಕೊಂಡು, ರೈಲು ಮಾರ್ಗದ ಮೂಲಕ ಬಿಹಾರಕ್ಕೆ ಹೋಗಿದ್ದ. ಮತ್ತೂಂದೆಡೆ ಆರೋಪಿಯ ಬೆನ್ನುಬಿದ್ದಿದ್ದ ವಿಶೇಷ ತಂಡ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿ ವಿಮಾನದ ಮೂಲಕ ಬಿಹಾರದ ಮದುಬನಿ ಜಿಲ್ಲೆ ತಲುಪಿತ್ತು. ಬಳಿಕ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಗದ್ದೆಯಲ್ಲಿ ಚಿನ್ನಾಭರಣ ಹೂತಿಟ್ಟ ಖದೀಮ: ಆರೋಪಿ ಕಳವು ಮಾಡಿದ ಚಿನ್ನಾಭರಣ, ಬೆಳ್ಳಿ, ವಜ್ರದ ಆಭರಣಗಳನ್ನು ಮನೆ ಹತ್ತಿರದ ಗದ್ದೆಯಲ್ಲಿ ಗುಂಡಿಗಳನ್ನು ತೆಗೆದು ಚೀಲದಲ್ಲಿ ಹೂತು ಹಾಕಿದ್ದ. ಕೆಲ ದಿನಗಳ ಬಳಿಕ ಅವುಗಳನ್ನು ಬಿಹಾರ ಹಾಗೂ ಕೋಲ್ಕತ್ತಾದಲ್ಲಿ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ.
ಅಷ್ಟರಲ್ಲಿ ಆರೋಪಿಯನ್ನು ಬಂಧಿಸಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಡಿಸಿಪಿ ಡಾ.ಬೋರಲಿಂಗಯ್ಯ, ಮಡಿವಾಳ ಎಸಿಪಿ ಸೋಮೇಗೌಡ, ಮಡಿವಾಳ ಇನ್ಸ್ಪೆಕ್ಟರ್ ಭರತ್, ಪಿಎಸ್ಐ ಸಂಜೀವ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.