ಚಿನ್ನದ ಸರ ಕಸಿದಿದ್ದ ಆರೋಪಿ ಸೆರೆ
Team Udayavani, Dec 26, 2018, 12:05 PM IST
ಬೆಂಗಳೂರು: ಚಿನ್ನದ ಸರ ಕಸಿದುಕೊಳ್ಳಲು ಮಹಿಳೆಯ ಕತ್ತು ಕೊಯ್ದಿದ್ದ ಆರೋಪಿಯನ್ನು ಸೋಲದೇವನಹಳ್ಳಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಯಶವಂತಪುರದ ಮುತ್ಯಾಲನಗರ ನಿವಾಸಿ ವಿನೋದ್ (30) ಬಂಧಿತ. ಆರೋಪಿ ಡಿ.24ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿನಾಯಕ ಲೇಔಟ್ ನಿವಾಸಿ ವನಜಾಕ್ಷಿ (49) ಎಂಬುವರ ಚಿನ್ನದ ಸರ ಕಸಿದುಕೊಳ್ಳಲು ಯತ್ನಿಸುವ ವೇಳೆ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ಹೇಳಿದರು.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ವೆಂಕಟೇಶ್ ಅವರ ಪತ್ನಿ ವನಜಾಕ್ಷಿ ಮನೆಗೆ ಹೊಂದಿಕೊಂಡಂತೆ ದಿನಸಿ ಅಂಗಡಿ ಇಟ್ಟುಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಪಿ ವಿನೋದ್, ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದಿದ್ದಾನೆ. ಸಿಗರೇಟ್ ಕೊಟ್ಟ ವನಜಾಕ್ಷಿ, ಮನೆಯೊಳಗೆ ಹೋಗಿದ್ದಾರೆ. ಕೂಡಲೇ ಹಿಂಬಾಲಿಸಿದ ಆರೋಪಿ, ಅವರ ಸರ ಕಸಿದುಕೊಳ್ಳಲು ಯತ್ನಿಸಿದ್ದು, ವನಜಾಕ್ಷಿ ವಿರೋಧ ವ್ಯಕ್ತಪಡಿಸಿ ರಕ್ಷಣೆಗಾಗಿ ಕೂಗಲಾರಂಭಿಸಿದ್ದಾರೆ.
ಈ ವೇಳೆ ಕೋಪಗೊಂಡ ವಿನೋದ್, ತನ್ನ ಬಳಿಯಿದ್ದ ಮಾರಕಾಸ್ತ್ರದಿಂದ ಅವರ ಕುತ್ತಿಗೆ ಇರಿದ್ದಾನೆ. ಈ ವೇಳೆ ಚಿನ್ನದ ಸರ ಕಸಿದುಕೊಂಡು ಸ್ವಲ್ಪ ಭಾಗ ಅಲ್ಲೆ ಉಳಿದಿದೆ. ಮಿಕ್ಕ ಚಿನ್ನ ಕಸಿದು ಆರೋಪಿ ಪರಾರಿಯಾಗಿದ್ದಾನೆ. ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ವನಜಾಕ್ಷಿ ಪತಿ ವೆಂಕಟೇಶ್ ಮತ್ತು ಆರೋಪಿ ವಿನೋದ್ ದೊಡ್ಡಪ್ಪ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಯ ದೊಡ್ಡಪ್ಪ ವನಜಾಕ್ಷಿ ಅವರ ದಿನಸಿ ಅಂಗಡಿಯಲ್ಲಿ ಪದಾರ್ಥಗಳನ್ನು ಕೊಂಡೊಯ್ಯುಲು ಬರುತ್ತಿದ್ದರು. ಈ ವೇಳೆ ದೊಡ್ಡಪ್ಪನ ಜತೆ ಆಗಾಗ್ಗೆ ಬರುತ್ತಿದ್ದ ಆರೋಪಿ ವಿನೋದ್, ವನಜಾಕ್ಷಿ ಒಂಟಿಯಾಗಿ ಇರುತ್ತಿದ್ದ ಬಗ್ಗೆ ತಿಳಿದುಕೊಂಡಿದ್ದ.
ಸೋಮವಾರ ಮಧ್ಯಾಹ್ನ ಅಂಗಡಿಗೆ ಬಂದ ಆರೋಪಿ ತನ್ನ ದೊಡ್ಡಪ್ಪನ ಹೆಸರು ಹೇಳಿ ಪರಿಚಯಿಸಿಕೊಂಡಿದ್ದಾನೆ. ಬಳಿಕ ಸಿಗರೇಟ್ ಖರೀದಿಸಿ ಕೃತ್ಯವೆಸಗಿ ಪರಾರಿಯಾಗಿದ್ದ. ಈ ಮಾಹಿತಿ ಕುರಿತ ಪ್ರಕರಣ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದರು.
ಸಾಲ ತೀರಿಸಲು ಕೃತ್ಯ: ಅವಿವಾಹಿತನಾಗಿರುವ ಆರೋಪಿ ವಿನೋದ್ ಮುತ್ಯಾಲನಗರದ ಬೇಕರಿಯೊಂದರ ನೌಕರ. ಆದರೆ, ತನ್ನ ಸಂಬಳದಲ್ಲಿ ನಾಲ್ವರು ಸಹೋದರು, ಒಬ್ಬ ಸಹೋದರಿ ಹಾಗೂ ತಾಯಿಯನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು. ಹೀಗಾಗಿ ಸ್ನೇಹಿತರು ಹಾಗೂ ಕೆಲ ಸಂಬಂಧಿಗಳ ಬಳಿ ಲಕ್ಷಾಂತರ ರೂ.ಸಾಲ ಮಾಡಿಕೊಂಡಿದ್ದ. ಇದನ್ನು ತೀರಿಸಲಾಗದೆ, ಸರಗಳ್ಳತನಕ್ಕೆ ಇಳಿದಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?