ಇರಾನಿ ಗ್ಯಾಂಗ್‌ ಸರಗಳ್ಳರು ಪೊಲೀಸರ ಬಲೆಗೆ


Team Udayavani, May 4, 2019, 3:04 AM IST

irani

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ವೃದ್ಧೆಯರನ್ನು ಟಾರ್ಗೆಟ್‌ ಮಾಡಿಕೊಂಡು ಸರಕಿತ್ತುಕೊಂಡು ಹೋಗುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್‌ನ ಸರಗಳ್ಳರು, ಮನೆಗಳ್ಳರು, ದರೋಡೆಕೋರರನ್ನು ಬಂಧಿಸಿರುವ ವಿದ್ಯಾರಣ್ಯಪುರ ಠಾಣೆ ಪೊಲೀಸರು, 45 ಲಕ್ಷ ರೂ.ಗಿಂತ ಅಧಿಕ ಮೌಲ್ಯದ ಚಿನ್ನಾಭರಣ 3 ಕೆ.ಜಿ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಇರಾನಿ ಗ್ಯಾಂಗ್‌ನ ಇಬ್ಬರು ಮೋಸ್ಟ್‌ ವಾಂಟೆಂಡ್‌ ಸರಗಳ್ಳರು, ಮೂವರು ಮನೆಕಳ್ಳರು, ಏರ್‌ಗನ್‌ ತೋರಿಸಿ ಜನರನ್ನು ಸುಲಿಗೆ ಮಾಡುತ್ತಿದ್ದ ಸುಲಿಗೆಕೋರರು, ಎಂಟು ಆಟೋಗಳನ್ನು ಕಳವು ಮಾಡಿದ್ದ ಆರೋಪಿ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ.

ಇರಾನಿ ಗ್ಯಾಂಗ್‌ನ ಮಹಮದ್‌ ಅಲಿ, ಸೈಯದ್‌ ಖರಾರ್‌ ಹುಸೈನ್‌ನ ಬಂಧನದಿಂದ ನಗರದ ವಿವಿಧೆಡೆ ನಡೆದಿದ್ದ 20 ಸರಗಳವು ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳಿಂದ 18.75 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.

ವೃದ್ಧರು ವಾಕಿಂಗ್‌ ಮಾಡುವ ಜಾಗಗಳನ್ನು ಗುರುತಿಸುತ್ತಿದ್ದ ಆರೋಪಿಗಳು, ಮುಂಜಾನೆ ಅಥವಾ ಸಂಜೆ ವೇಳೆ ಕೃತ್ಯ ಎಸಗುತ್ತಿದ್ದರು. ಒಂಟಿಯಾಗಿ ನಡೆದು ಹೋಗುವ ಮಹಿಳೆಯರನ್ನು ಟಾರ್ಗೆಟ್‌ ಮಾಡಿಕೊಂಡು ಅವರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಸರ ಕೀಳುವ ಮುನ್ನ ಜಾಕೆಟ್‌ ಧರಿಸುತ್ತಿದ್ದ ಆರೋಪಿಗಳು ಸ್ವಲ್ಪ ದೂರ ಹೋದ ಬಳಿಕ ಜಾಕೆಟ್‌ ಉಲ್ಟಾ ಮಾಡಿ ಹಾಕಿಕೊಳ್ಳುತ್ತಿದ್ದರು. ಪೊಲೀಸರ ದಿಕ್ಕು ತಪ್ಪಿಸಲು ಈ ತಂತ್ರ ಅನುಸರಿಸುತ್ತಿದ್ದರು.

ಸಂಜಯ ನಗರದಲ್ಲಿ ವೃದ್ಧೆಯೊಬ್ಬರ ಸರ ಕೀಳುವಾಗ ಅವರನ್ನು ರಸ್ತೆಮೇಲೆ ಬಲವಾಗಿ ನೂಕಿದ್ದರು. ಪರಿಣಾಮ ವೃದ್ಧೆಯ ಕೈಗೆ ಗಾಯವಾಗಿ, ಕಾಲು ಮುರಿದಿತ್ತು. ವೃದ್ಧೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು ಎಂದು ಅಧಿಕಾರಿ ವಿವರಿಸಿದರು.

ಆರೋಪಿ ಸೈಯದ್‌ ಖರಾರ್‌ ಹುಸೈನ್‌ ವಿರುದ್ಧ ಮಹಾರಾಷ್ಟ್ರದಲ್ಲಿ 100ಕ್ಕೂ ಅಧಿಕ ಸರಗಳವು ಪ್ರಕರಣಗಳು ದಾಖಲಾಗಿದ್ದು, ಕೋಕಾ ಕಾಯಿದೆ ಅಡಿ ಬಂಧನಕ್ಕೊಳಗಾಗಿದ್ದ. ಮೊಹಮದ್‌ ಅಲಿ ವಿರುದ್ಧ 25ಕ್ಕೂ ಹೆಚ್ಚು ಕೇಸ್‌ಗಳಿವೆ ಎಂದು ಅಧಿಕಾರಿ ತಿಳಿಸಿದರು.

ಕಳ್ಳ ಸಹೋದರರ ಬಂಧನ: ಮೋಜಿನ ಜೀವನ ನಡೆಸಲು ಮನೆಗಳವು ಮಾಡುತ್ತಿದ್ದ ಮೈಸೂರು ಮೂಲದ ಇಬ್ಬರು ಸಹೋದರರು ಸೇರಿ ಮೂವರು ಆರೋಪಿಗಳನ್ನು ಬಂಧಿಸಿರುವ ವಿದ್ಯಾರಣ್ಯಪುರ ಪೊಲೀಸರು, 30 ಲಕ್ಷ ರೂ. ಮೌಲ್ಯದ 1.ಕೆ.ಜಿ ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದಾರೆ.

ಮೈಸೂರಿನ ಮಹಮದ್‌ ರಹೀಮ್‌ ಖಾನ್‌, ಆತನ ಸಹೋದರ ಬಿಲಾಲ್‌ ಖಾನ್‌, ನಯೀಮ್‌ ಖಾನ್‌ ಬಂಧಿತರು. ಆರೋಪಿಗಳ ಬಂಧನದಿಂದ 18 ಮನೆಗಳವು ಪ್ರಕರಣಗಳು ಪತ್ತೆಯಾಗಿವೆ. ಮೋಜಿನ ಜೀವನಕ್ಕಾಗಿ ಕಳ್ಳತನವನ್ನೇ ಕಸುಬು ಮಾಡಿಕೊಂಡಿರುವ ಆರೋಪಿಗಳು ಆಂಧ್ರ, ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಕಳವು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೂಂದು ಪ್ರಕರಣದಲ್ಲಿ ಕಿಟಕಿ ಮೂಲಕ ಕಟ್ಟಿಗೆ ತೂರಿಸಿ ಮನೆಯ ಚಿಲಕ ತೆಗೆದು ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ, ಆಟೋ ಚಂದ್ರಶೇಖರ್‌ ಎಂಬಾತನನ್ನು ಬಂಧಿಸಿ ಐದು ಲಕ್ಷ ರೂ, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಅದೇ ರೀತಿ ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಚಿನ್ನಾಭರಣ, ಹಣ ಕದ್ದಿದ್ದ ಶಶಿಕಲಾ ಎಂಬಾಕೆಯನ್ನು ಬಂಧಿಸಿದ್ದು, 2 ಲಕ್ಷ ರೂ. ಮೌಲ್ಯದ ಚಿನ್ನಭರಣ 1 ಕೆ.ಜಿ ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಮನೆಮುಂದೆ ನಿಲ್ಲಿಸುತ್ತಿದ್ದ ಆಟೋಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ಮೊಹಮದ್‌ ಸಾದಿಕ್‌ ಎಂಬಾತನನ್ನು ಬಂಧಿಸಿ, 8 ಆಟೋ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏರ್‌ಗನ್‌ ತೋರಿಸಿ ಸುಲಿಗೆ: ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಸಾರ್ವಜನಿಕರಿಗೆ ಏರ್‌ಗನ್‌ ತೋರಿಸಿ ಸುಲಿಗೆ ಮಾಡುತ್ತಿದ್ದ ಮೊಹಮದ್‌ ಶಫೀಕ್‌ ಅಹಮದ್‌, ಮೊಹಮದ್‌ ಶೋಹೆಬ್‌, ಇಸ್ಮಾಯಿಲ್‌ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ತಾಯಿತ ಕಟ್ಟಿಸಿಕೊಂಡು ಬರ್ತೀದ್ರು: ಸರಗಳವಿಗೆಂದೇ ಪುಣೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇರಾನಿ ಗ್ಯಾಂಗ್‌ನ ಮಹಮದ್‌ ಅಲಿ, ಸೈಯದ್‌ ಖರಾರ್‌ ಹುಸೈನ್‌, ಹೀಗೆ ಬರುವ ಮುನ್ನ ತಾವು ಪೊಲೀಸರ ಕೈಗೆ ಸಿಕ್ಕಿಬೀಳಬಾರದು ಎಂದು ಹರಕೆ ಹೊತ್ತು, ಮಂತ್ರಿಸಿದ “ತಾಯಿತ’ ಕಟ್ಟಿಸಿಕೊಂಡು ಬರುತ್ತಿದ್ದರು. ಕಳವು ಯಶಸ್ವಿಯಾಗಿ, ಊರಿಗೆ ಮರಳಿದ ಬಳಿಕ, ಕದ್ದ ಚಿನ್ನಾಭರಣದಲ್ಲಿ ಶೇ.10 ಪಾಲನ್ನು ದೇವರಿಗೆ ಮೀಸಲಿಡುತ್ತಿದ್ದರು ಎಂಬ ಸಂಗತಿ ವಿಚಾರಣೆ ವೇಳೆ ಗೊತ್ತಾಗಿದೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.