ಕೋವಿಡ್‌ ಸಾಮಗ್ರಿ ಖರೀದಿ ಹೆಸರಲ್ಲಿ ಅವ್ಯವಹಾರ


Team Udayavani, Feb 6, 2022, 12:00 PM IST

ಕೋವಿಡ್‌ ಸಾಮಗ್ರಿ ಖರೀದಿ ಹೆಸರಲ್ಲಿ ಅವ್ಯವಹಾರ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ನೀಡಿದ ಅನುದಾನದಲ್ಲೂ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಗಳು ಬಹಿರಂಗಗೊಂಡಿವೆ.

ಬೆಂಗಳೂರು ನಗರ ಜಿಪಂ ಮತ್ತು ರಾಮನಗರ ಜಿಪಂಗಳ ಕೆಲವು ಗ್ರಾಪಂಗಳಲ್ಲಿ ಸ್ವಂತ ನಿಧಿಯ (ವರ್ಗ-1 15ನೇ ಹಣಕಾಸು ಹಾಗೂ ಇತರೆ) ಖಾತೆಗಳಿಂದ ಸಂದೇಹಾಸ್ಪದವಾಗಿ ಹಣ ಬ್ಯಾಂಕ್‌ ಖಾತೆಯಿಂದ ತೆಗೆದಿರುವುದು ಸಾರ್ವಜನಿಕರಿಂದ ಸ್ವೀಕೃತವಾದ ದೂರುಗಳು ಕರ್ನಾಟಕ ಪಂಚಾಯತ್‌ ರಾಜ್‌ ಆಯುಕ್ತಾಲಯದ ಗಮನಕ್ಕೆ ಬಂದಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಪಂ ವ್ಯಾಪ್ತಿಯ ಕೆಲವು ಗ್ರಾಪಂಗಳಲ್ಲಿ ಕೊರೊನಾ ನಿಯಂತ್ರಣ ನೆಪವೊಡ್ಡಿ ಸ್ವಂತ ನಿಧಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಚೆಕ್‌ ಮುಖಾಂತರ ಅನೇಕ ಸಾಮಗ್ರಿ ಖರೀದಿಸಲಾಗಿದೆ. ಯಾವುದೇ ಕ್ರಿಯಾ ಯೋಜನೆಯ ಅನುಮೋದನೆ ಇಲ್ಲದೆ ಲಕ್ಷಾಂತರ ರೂ. ಸಂದೇಹಾಸ್ಪದವಾಗಿ ಬಳಕೆ ಮಾಡಲಾಗಿದೆ.

ಗ್ರಾಪಂ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳಲ್ಲಿ ಹಾಗೂ ಸಾಮಗ್ರಿ ಖರೀದಿಯಲ್ಲಿನ ಒಟ್ಟು ಮೊತ್ತ 50 ಸಾವಿರ ರೂ.ಗಿಂತಲೂ ಮೇಲ್ಪಟ್ಟ ಹಣ ಪಾವತಿ ಮಾಡಬೇಕಾದರೆ ಜಿಪಂ ಅನುಮೋದನೆ ಕಡ್ಡಾಯ ಎಂದು ಗ್ರಾಮೀಣಾಭಿವೃದ್ದಿ ಪಂಚಾಯ್ತಿ ರಾಜ್‌ ಇಲಾಖೆ ಆದೇಶವನ್ನೂ ಹೊರಡಿಸಿದೆ. ಗ್ರಾಪಂ ಮಟ್ಟದಲ್ಲಿ ಸಾರ್ವಜನಿಕರ ಹಣ ದುರ್ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹೀಗಾಗಿ, ಈಗ ಬೆಂಗಳೂರು ನಗರ ಜಿಪಂ ತನ್ನ ವ್ಯಾಪ್ತಿಯ ಬೆಂಗಳೂರು ಉತ್ತರ, ಪೂರ್ವ, ದಕ್ಷಿಣ,ಯಲಹಂಕ ಹಾಗೂ ಅನೇಕಲ್‌ ವ್ಯಾಪ್ತಿಯ 87 ಗ್ರಾಪಂನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಪಂಚಾಯ್ತಿ ಇಲಾಖೆಯ ಸುತ್ತೂಲೆಯನ್ನು ರವಾನಿಸಿದೆ.

ಗ್ರಾಪಂ ವಿವಿಧ ಯೋಜನೆಗಳ ಮುಖಾಂತರ ಅನುಷ್ಠಾನಗೊಳಿಸುತ್ತಿ ರುವ ಕಾಮಗಾರಿಗಳಲ್ಲಿ ಹಾಗೂ ಸಾಮಗ್ರಿ ಖರೀದಿಯ ಬಿಲ್‌ 50 ಸಾವಿರ ರೂ. ಮೇಲ್ಪಟ್ಟರೆ ಆಗ ಹೆಚ್ಚಿನ ಮೊತ್ತವನ್ನು ಪಾವತಿಸುವ ಮುನ್ನ ಜಿಪಂ ಸಿಇಒ ಅನುಮೋದನೆ ಅಗತ್ಯ ಎಂದು ಪಂಚಾಯತ್‌ ರಾಜ್‌ ಇಲಾಖೆ ಈಗಾಗಲೇ ಸ್ಪಷ್ಟಪಡಿಸಿದೆ. ಸಂಗಪ್ಪ, ಬೆಂ. ನಗರ, ಜಿಪಂ ಸಿಇಒ

ಕ್ರಿಯಾ ಯೋಜನೆಯಿಲ್ಲದೆಲಕ್ಷಾಂತರ ರೂ. ಬಳಕೆ:  ಕೊರೊನಾ ನೆಪವೊಡ್ಡಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಪಂನ ಕೆಲವು ಗ್ರಾಪಂಗಳಲ್ಲಿ ಕ್ರಿಯಾ ಯೋಜನೆಯ ಅನುಮೋದನೆಯಿಲ್ಲದೆ ಲಕ್ಷಾಂತರರೂ.ಬಿಲ್‌ ಮಾಡಿ ಹಣ ದುರುಪಯೋಗ ಮಾಡಿಕೊಂಡಿರುವುದನ್ನು ಸಾರ್ವಜನಿಕರು ಪಂಚಾಯತ್‌ ರಾಜ್‌ ಇಲಾಖೆಗೆ ಸಾರ್ವಜನಿಕರು ತಮ್ಮ ದೂರಿನಲ್ಲಿ ಪ್ರಶ್ನಿಸಿದ್ದರು. ಕ್ರಿಯಾ ಯೋಜನೆಯಿಲ್ಲದೆ ಅನುದಾನ ಬಳಕೆ ಮಾಡಿದರೆ ಸಾರ್ವಜನಿಕ ಹಣ ವ್ಯರ್ಥವಾಗಲಿದೆ. ಈ ಬಗ್ಗೆ ಕರ್ನಾಟಕ ಪಂಚಾಯತ್‌ ರಾಜ್‌ ಆಯುಕ್ತಾಲಯ ಕ್ರಮಕೈಗೊಂಡುನಡೆದಿರುವ ಲೋಪವನ್ನು ಸರಿಪಡಿಸಬೇಕು. ಹಣದ ದುರ್ಬಳಕೆ ತಡೆಗಟ್ಟಬೇಕು ಎಂದು ಮನವಿ ಮಾಡಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ತಿಳಿಸಿದ್ದಾರೆ.

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.