ಕಿಡ್ನಿ ದಾನಕ್ಕೆ ಅನುಮತಿ ನೀಡಲೂ ವಿಳಂಬವೇ?


Team Udayavani, Jul 19, 2018, 11:34 AM IST

blore-4.jpg

ಬೆಂಗಳೂರು: ಕಿಡ್ನಿ ವೈಫ‌ಲ್ಯದಿಂದ ಬಳಲುತ್ತಿರುವ ಸೇನಾ ಅಧಿಕಾರಿಗೆ ಕಿಡ್ನಿ ದಾನ ಮಾಡಲು ಸ್ವಯಂಪ್ರೇರಿತವಾಗಿ ಮುಂದೆ ಬಂದ ಮಹಿಳೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ಕಾರ್ಯವೈಖರಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಿಡ್ನಿ ದಾನಕ್ಕೆ ಅನುಮತಿ ನೀಡಲು ವಿಳಂಬ ಮಾಡುತ್ತಿರುವ ಸರ್ಕಾರದ ಕ್ರಮ ಪ್ರಶ್ನಿಸಿ ವರ್ಷಾ ಶರ್ಮಾ ಎಂಬುವರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾ.ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ದೇಶಕ್ಕಾಗಿ ತ್ಯಾಗ ಮನೋಭಾವದಿಂದ ಸೇವೆ ಸಲ್ಲಿಸುವ ಸೇನೆಯ ಅಧಿಕಾರಿಗೆ ಕಿಡ್ನಿ ದಾನ ನೀಡಲು ಮುಂದಾಗಿರುವ ಮಹಿಳೆಗೆ ಅನುಮತಿ ನೀಡಲು ಹೀಗೇಕೆ ವಿಳಂಬ ಧೋರಣೆ ಅನುಸರಿಸುತ್ತೀದ್ದೀರಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ಕಿಡ್ನಿ ದಾನಕ್ಕೆ ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿ ಸಂಬಂಧ ಇಂದೇ ಸಕ್ಷಮ ಪ್ರಾಧಿಕಾರ ಸಭೆ ನಡೆಸಿ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿತು.

ಈ ವೇಳೆ ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಕಿಡ್ನಿ ಕಸಿಗೆ ಅನುಮತಿ ಪರಿಶೀಲಿಸುವ ಕರ್ನಾಟಕ ಅಂಗಾಂಗ ಕಸಿ ಪ್ರಾದೇಶಿಕ ಸಮನ್ವಯ ಸಮಿತಿ ಸದಸ್ಯರಲ್ಲಿ ಒಬ್ಬ ಸದಸ್ಯರ ಕೋರಂ ಕಡಿಮೆಯಿದೆ. ಹೀಗಾಗಿ, ಎರಡು ದಿನ ಕಾಲಾವಕಾಶ ನೀಡಬೇಕು ಎಂದು ಕೋರಿದರಲ್ಲದೆ, ವರ್ಷಾ ಶರ್ಮಾ ಅವರ ಮನವಿ ಸಂಬಂಧ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳುವ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಯವರೇ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು. 

ಪ್ರಕರಣ ಏನು?: ಭಾರತೀಯ ಸೇನೆಯ ನೈರುತ್ಯ ವಿಭಾಗದ ಕಮಾಂಡೆಂಟ್‌ ಪುಣೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಅಭಿಯಂತರ ಹುದ್ದೆಯಲ್ಲಿರುವ 49 ವರ್ಷದ ಕರ್ನಲ್‌ ಪಂಕಜ್‌ ಭಾರ್ಗವ 2017ರ ಆಗಸ್ಟ್‌ನಲ್ಲಿ ಅನಾರೋಗ್ಯದಿಂದಾಗಿ ಕಿಡ್ನಿ ವೈಫ‌ಲ್ಯಕ್ಕೆ ತುತ್ತಾಗಿದ್ದು, ಕಳೆದ ನವೆಂಬರ್‌ನಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕಿಡ್ನಿ ಕಸಿ ಅನಿವಾರ್ಯವಾಗಿದ್ದರಿಂದ ಕುಟುಂಬದ ಸ್ನೇಹಿತೆಯಾಗಿರುವ ಮುಂಬೈ ಮೂಲದ ವರ್ಷಾ ಶರ್ಮಾ, ತನ್ನ ಒಂದು ಕಿಡ್ನಿಯನ್ನು ದಾನವಾಗಿ ಪಂಕಜ್‌ ಭಾರ್ಗವ ಅವರಿಗೆ ನೀಡಲು ಮುಂದಾಗಿದ್ದರು. ಅದರಂತೆ ಕಿಡ್ನಿ ದಾನಕ್ಕೆ ಅನುಮತಿ ನೀಡುವಂತೆ ಸಕ್ಷಮ ಪ್ರಾಧಿಕಾರವಾದ ಕರ್ನಾಟಕ ಅಂಗಾಂಗ ಕಸಿ ಪ್ರಾದೇಶಿಕ ಸಮನ್ವಯ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಮನವಿ ಬಗ್ಗೆ ಸಮಿತಿ ಹಲವು ಆಕ್ಷೇಪಣೆಗಳನ್ನು ಎತ್ತಿ ವಿಳಂಬ ಮಾಡಿತ್ತಲ್ಲದೆ, ಅರ್ಜಿ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿರಲಿಲ್ಲ. ಹೀಗಾಗಿ, ಕಿಡ್ನಿ ದಾನಕ್ಕೆ ಅನುಮತಿ ಕೊಡಲು ಸಮಿತಿಗೆ ನಿರ್ದೇಶಿಸುವಂತೆ ಕೋರಿ ವರ್ಷಾ ಶರ್ಮಾ ಹೈಕೋರ್ಟ್‌ ಮೊರೆಹೋಗಿದ್ದಾರೆ.

ರಾತ್ರಿಯಾದರೂ ಸರಿ; ನಿರ್ಧಾರ ಪ್ರಕಟಿಸಿ
ಸರ್ಕಾರಿ ವಕೀಲರ ವಾದ ಆಲಿಸಿದ ನ್ಯಾಯಪೀಠ, “ಸರ್ಕಾರಕ್ಕೆ ಸಂಬಂಧಿಸಿದ ಕೆಲ ವಿಚಾರಗಳ ಬಗ್ಗೆ ತಡರಾತ್ರಿಯೂ ಆದೇಶಗಳನ್ನು ಹೊರಡಿಸುತ್ತೀರಿ. ಈ ವಿಚಾರದಲ್ಲಿ ಅಂತಹ ನಿಯಮವನ್ನು ಏಕೆ ಪಾಲಿಸಬಾರದು? ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಸೇನಾಧಿಕಾರಿ ಜೀವಕ್ಕೆ ಸಂಬಧಿಸಿದ ಈ ಮನವಿಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ. ಸಮಿತಿಯ ಸದಸ್ಯರಾದ ಮೂವರು ವೈದ್ಯರೇ ಸಭೆ ನಡೆಸಿ ರಾತ್ರಿ ಎಷ್ಟು ಹೊತ್ತಾದರೂ ಸರಿ, ಬುಧವಾರವೇ ನಿರ್ಧಾರ ಪ್ರಕಟಿಸಿ,’ ಎಂದು ತಾಕೀತು ಮಾಡಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.