ಐಎಂಎ ಮನ್ಸೂರ್‌ ಖಾನ್‌ ಇರುವಿಕೆ ಪತ್ತೆ?


Team Udayavani, Jun 25, 2019, 3:06 AM IST

ima ch new

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ರೂವಾರಿ ಸಂಸ್ಥೆಯ ಸ್ಥಾಪಕ ಮನ್ಸೂರ್‌ ಖಾನ್‌ ಎಲ್ಲಿದ್ದಾನೆ ಎಂಬುದು ತಿಳಿದಿದೆ. ಆದರೆ, ತನಿಖೆ ದೃಷ್ಟಿಯಿಂದ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಒಂದು ವೇಳೆ ಆತ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹೇಳಿಕೊಂಡಿರುವಂತೆ ಕಾನೂನಿಗೆ ಶರಣಾಗುವುದಾದರೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಆರ್‌.ರವಿಕಾಂತೇಗೌಡ ಹೇಳಿದ್ದಾರೆ.

ಆರೋಪಿ ಮನ್ಸೂರ್‌ ಖಾನ್‌ ಬಿಡುಗಡೆ ಮಾಡಿರುವ ವಿಡಿಯೋ ಕುರಿತು ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ಆರೋಪಿ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಕೆಲ ಪ್ರಮುಖ ಹೆಸರು ಹೇಳಿದ್ದಾನೆ. ಆದರೆ, ಆತನ ಹೇಳಿರುವ ಎಲ್ಲರಿಗೂ ನೋಟಿಸ್‌ ಜಾರಿ ಮಾಡಲು ಸಾಧ್ಯವಿಲ್ಲ. ಸೂಕ್ತ ಸಾಕ್ಷ್ಯಗಳನ್ನಾಧರಿಸಿ ವಿಚಾರಣೆ ನಡೆಸಲಾಗುತ್ತದೆ.

ಆತ ಕಾನೂನಿಗೆ ಶರಣಾಗುವುದಾಗಿ, ಆತನಿಗೆ ಮತ್ತು ಕುಟುಂಬಕ್ಕೆ ಪ್ರಾಣ ಭಯ ಇದೆ ಎಂದು ಹೇಳಿಕೊಂಡಿದ್ದಾನೆ. ಕಾನೂನಿಗೆ ತಲೆಬಾಗುವುದಾದರೆ, ಸೂಕ್ತ ರಕ್ಷಣೆ ನೀಡಲಾಗುವುದು. ತನಗೆ ಬೇಕಾದ ರೀತಿಯಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ. ಆತ ಹೇಳಿರುವ ಎಲ್ಲಾ ಸಂಗತಿಗಳನ್ನೂ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಐಎಂಎ ಆಸ್ತಿ ಪತ್ತೆ: ಐಎಂಎ ಸಮೂಹ ಸಂಸ್ಥೆಗೆ ಸೇರಿದ ಆಸ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಕಂಪನಿಯ ಮಳಿಗೆಗಳನ್ನು ಪರಿಶೀಲಿಸಿ, ಚಿನ್ನ, ಬೆಳ್ಳಿ, ವಜ್ರಗಳನ್ನು ಜಪ್ತಿ ಮಾಡಿದ್ದೇವೆ. ಕಂಪನಿಯ ನಿರ್ದೇಶಕರನ್ನು ಬಂಧಿಸಲಾಗಿದೆ. ಅವರ ವಿಚಾರಣೆಯಿಂದ ಸಾಕಷ್ಟು ಸಂಗತಿಗಳು ಹೊರಗೆ ಬರುತ್ತಿವೆ. ಇನ್ನೂ ಕೆಲವರನ್ನು ಗುರುತಿಸಲಾಗಿದ್ದು, ಸದ್ಯದಲ್ಲೇ ಬಂಧಿಸುತ್ತೇವೆ. ತನಿಖೆಯ ಗೌಪ್ಯತೆ ಹಾಗೂ ಮುಂದಿನ ಹಂತದ ತನಿಖೆಗೆ ಧಕ್ಕೆ ಆಗದಿರಲಿ ಎಂಬ ಉದ್ದೇಶದಿಂದ ಕೆಲ ವಿಚಾರಗಳನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ವಿಡಿಯೋ ಬಗ್ಗೆ ಪರಿಶೀಲನೆ: ಮನ್ಸೂರ್‌ ಖಾನ್‌ ಬಿಡುಗಡೆ ಮಾಡಿರುವ ವೀಡಿಯೋ ಯುಟ್ಯೂಬ್‌ಗ ಅಪ್‌ಲೋಡ್‌ ಆಗಿದ್ದು ಎಲ್ಲಿಂದಾ?ಎಂಬ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿರುವ ಮನ್ಸೂರ್‌ ಖಾನ್‌ ಅದನ್ನು ಅಪ್‌ಲೋಡ್‌ ಮಾಡಿಲ್ಲ. ಆದರೆ ಆತನ ಅಧಿ ಕೃತ ಇ-ಮೇಲ್‌ ಐಡಿಯಿಂದಲೇ ಅಪ್‌ಲೋಡ್‌ ಆಗಿದೆ ಎಂಬುದು ಗೊತ್ತಾಗಿದೆ.

ಅದು ಭಾರತದಿಂದಲೇ ಅಪ್‌ಲೋಡ್‌ ಆಗಿರುವ ಸಾಧ್ಯತೆಯಿದೆ. ಆತ ತನ್ನ ವೀಡಿಯೋವನ್ನು ಭಾರತದಲ್ಲಿರುವ ಪರಿಚಯಸ್ಥರಿಗೆ ಕಳುಹಿಸಿ ಅವರ ಮೂಲಕ ಅಪ್‌ಲೋಡ್‌ ಮಾಡಿಸಿರಬಹುದು. ಹೀಗಾಗಿ ಈ ವಿಚಾರವನ್ನು ಸೂಕ್ಷ್ಮವಾಗಿ ಪರಿಗಣಿಸಿ ತನಿಖೆ ತಾಂತ್ರಿಕ ನಡಸಲಾಗುತ್ತಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಐಎಂಎ ಗೋಲ್ಡ್‌ ಪರಿಶೀಲನೆ: ಈ ಮಧ್ಯೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಸೋಮವಾರ ಶಿವಾಜಿನಗರದ ಲೇಡಿ ಕರ್ಜನ್‌ ರಸ್ತೆಯಲ್ಲಿರುವ ಐಎಂಎ ಗೋಲ್ಡ್‌ ಮಳಿಗೆಯಲ್ಲಿ ಪರಿಶೀಲಿಸಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ದಾಖಲೆಗಳನ್ನು ಜಪ್ತಿ ಮಾಡಿದೆ. ಬೆಳಗ್ಗೆ ಎಂಟು ಗಂಟೆಯಿಂದ ಎಸಿಪಿ ಬಾಲರಾಜ್‌ ನೇತೃತ್ವದ ತಂಡ ರಾತ್ರಿ 9.30ರವರೆಗೆ ಐಎಂಎ ಗೋಲ್ಡ್‌ನಲ್ಲಿ ಪರಿಶೀಲನೆ ನಡೆಸಿದ್ದು, ಸುಮಾರು ಎಂಟು ಟ್ರಂಕ್‌ಗಳ ಚಿನ್ನಾಭರಣ ಜಪ್ತಿ ಮಾಡಿದೆ.

ಈ ವೇಳೆ ವಂಚಕ ಸಂಸ್ಥೆ ಹಾಗೂ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ಮೂಲ ದಾಖಲೆಗಳು ಹಾಗೂ ಹೂಡಿಕೆದಾರರಿಗೆ ಸೇರಿದ ದಾಖಲೆಗಳು ಸಿಕ್ಕಿವೆ. ಇದರೊಂದಿಗೆ ಆರೋಪಿ ಬಳಿ ಚಿನ್ನಾಭರಣ ಅಡಮಾನ ಇಟ್ಟಿರುವ ದಾಖಲೆಗಳು ದೊರಕಿದ್ದು, ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿಯ ದಾಖಲೆ ಪತ್ತೆಯಾಗಿವೆ.

ಅಲ್ಲದೆ, ಸಂಜೆ ವೇಳೆಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಂಪನಿಯ ನಿರ್ದೇಶಕ ಹರ್ಷದ್‌ ಖಾನ್‌ನನ್ನು ಐಎಂಎ ಗೋಲ್ಡ್‌ಗೆ ಕರೆದೊಯ್ದ ವಿಶೇಷ ತಂಡ, ಆರೋಪಿಯಿಂದ ಅಡಮಾನ ಇಟ್ಟಿರುವ ಚಿನ್ನಾಭರಣಗಳ ಲೆಕ್ಕ ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ಕಂಪನಿ ಯಾರ ಜತೆ ವಹಿವಾಟು ನಡೆಸಿತ್ತು, ಸಾರ್ವಜನಿಕರ ಹೂಡಿಕೆಯ ಹಣ ಐಎಂಎ ಮೂಲಕ ಯಾವ ಯಾವ ಫಲಾನುಭವಿಗಳ ಪಾಲಾಗಿದೆ ಎಂಬ ಮಾಹಿತಿಗಳೆಲ್ಲಾ ಅದರಲ್ಲಿವೆ. ತನಿಖೆಯ ದೃಷ್ಟಿಯಿಂದ ಆ ಮಾಹಿತಿಗಳನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ.

ಪಿಸ್ತೂಲ್‌, ಜೀವಂತ ಗುಂಡುಗಳು ಪತ್ತೆ: ಐಎಂಎ ಗೋಲ್ಡ್‌ನಲ್ಲಿ ಪರಿಶೀಲನೆ ವೇಳೆ ಮನ್ಸೂರ್‌ ಖಾನ್‌ ಬಳಸುತ್ತಿದ್ದ ಪಿಸ್ತೂಲ್‌ ಮತ್ತು ಜೀವಂತ ಗುಂಡುಗಳು ಪತ್ತೆಯಾಗಿವೆ.ಕೆಲ ತಿಂಗಳ ಹಿಂದೆ ತಿಲಕನಗರ ಪೊಲೀಸರಿಂದ ಪಿಸ್ತೂಲ್‌ ಪರವಾನಿಗೆ ಪಡೆದಿದ್ದ ಆರೋಪಿ, ಅದನ್ನು ತನ್ನ ಜ್ಯುವೆಲ್ಲರಿ ಮಳಿಗೆಯಲ್ಲೇ ಇಟ್ಟಿದ್ದ. ಸೋಮವಾರ ಪರಿಶೀಲನೆ ವೇಳೆ ಒಂದು ಪಿಸ್ತೂಲ್‌, 50 ಜೀವಂತ ಗುಂಡುಗಳು ಸಿಕ್ಕಿವೆ. ಪಿಸ್ತೂಲ್‌ 32 ಎಂಎಂನದ್ದು ಎನ್ನಲಾಗಿದೆ. ಇದೀಗ ಪಿಸ್ತೂಲ್‌ ಪರವಾನಿಗೆ ರದ್ದು ಮಾಡುವಂತೆ ತಿಲಕನಗರ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ.

ಎಸ್‌ಐಟಿ ತನಿಖೆ ಎದುರಿಸಲು ಸಿದ್ಧ: ರೆಹಮಾನ್‌ ಖಾನ್‌
ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಈ ಬಗ್ಗೆ ನಾನು ಎಸ್‌ಐಟಿ ತನಿಖೆ ಎದುರಿಸಲು ಸಿದ್ದನಿದ್ದೇನೆ ಎಂದು ಕಾಂಗ್ರೆಸ್‌ ಮುಖಂಡ ಕೆ.ರೆಹಮಾನ್‌ ಖಾನ್‌ ಹೇಳಿದ್ದಾರೆ. ವಿಡಿಯೋದಲ್ಲಿ ಮನ್ಸೂರ್‌ ಖಾನ್‌ ತಮ್ಮ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಮನ್ಸೂರ್‌ ಖಾನ್‌ಗೂ ನನಗೂ ವೈಯಕ್ತಿಕ ಸಂಬಂಧವಿಲ್ಲ.

ಸಮಾಜದ ಕಾರ್ಯಕ್ರಮದಲ್ಲಿ ನೋಡಿದ್ದೆ. ಒಂದು ಬಾರಿ ರೋಷನ್‌ ಬೇಗ್‌ ಅವರನ್ನು ಭೇಟಿ ಮಾಡಿಸಿದ್ದರು. ಈ ಸಂಸ್ಥೆಯ ಬಗ್ಗೆ ನಾನು ಹಲವು ಬಾರಿ ಪ್ರಶ್ನೆ ಮಾಡಿದ್ದೆ. ಸರ್ಕಾರ, ಐಟಿ, ಪೊಲೀಸ್‌ ಇಲಾಖೆಗಳಿಗೆ ಇವನು ಮೋಸ ಮಾಡುವುದು ಗೊತ್ತಿತ್ತು. ಆದರೂ, ಯಾವ ಕಾರಣಕ್ಕೆ ಕಣ್ಣು ಮುಚ್ಚಿಕೊಂಡು ಕುಳಿತರೋ ಗೊತ್ತಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ನಮ್ಮ ಹೆಸರು ಪ್ರಸ್ತಾಪಿಸಿದ್ದಾರೆ. ಇಂತವರಿಂದ ಎಲ್ಲ ಸಮುದಾಯಗಳಿಗೂ ಅನ್ಯಾಯವಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.