ದಾರಿ ತಪ್ಪಿದ ಉಪಗ್ರಹ :ಮರು ಸಂಪರ್ಕಕ್ಕೆ ಇಸ್ರೋ ಶತಪ್ರಯತ್ನ 


Team Udayavani, Apr 2, 2018, 6:00 AM IST

GSAT-6A.jpg

ಬೆಂಗಳೂರು: ಮಾರ್ಚ್‌ 29ರಂದು ಉಡಾವಣೆಗೊಂಡಿದ್ದ ಇಸ್ರೋದ ಸಂವಹನ ಉಪಗ್ರಹ ಜಿಸ್ಯಾಟ್‌ 6ಎ ಶನಿವಾರ ನಿಯಂತ್ರಣಾ ಕೇಂದ್ರದ ಸಂಪರ್ಕ ಕಡಿದುಕೊಂಡಿದೆ. ಮತ್ತೆ ಉಪಗ್ರಹದೊಂದಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿರುವುದಾಗಿ ಇಸ್ರೋ ತಿಳಿಸಿದೆ. ವಿದ್ಯುತ್‌ ವ್ಯವಸ್ಥೆಯಲ್ಲಿನ ವೈಫ‌ಲ್ಯವೇ ಸಂಪರ್ಕ ಕಡಿತಕ್ಕೆ ಕಾರಣ ಎನ್ನಲಾಗಿದೆಯಾದರೂ, ಇಸ್ರೋ ಇದನ್ನು ಖಚಿತಪಡಿಸಿಲ್ಲ.

ಯಶಸ್ವಿಯಾಗಿ ಉಡಾವಣೆ ಮಾಡಿದ ನಂತರ ಶುಕ್ರವಾರ ಕಕ್ಷೆಗೆ ಏರಿಸುವ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿತ್ತು. ಲಿಕ್ವಿಡ್‌ ಅಪೊಜೀ ಮೋಟರ್‌ ಇಂಜಿನ್‌ ಸರಿಯಾಗಿಯೇ ಕೆಲಸ ಮಾಡುತ್ತಿತ್ತು. ಯಶಸ್ವಿಯಾಗಿ ನಿಗದಿತ ಕಕ್ಷೆಗೆ ಏರಿಸುವಿಕೆಯೂ ನಡೆದಿತ್ತು. ಎರಡನೇ ಬಾರಿ ಕಕ್ಷೆಗೆ ಏರಿಸುವ ಪ್ರಕ್ರಿಯೆ ಶನಿವಾರ ಮಾಡಲಾಗಿದ್ದು, ಬೆಳಗ್ಗೆ 10.51ಕ್ಕೆ ಈ ಪ್ರಕ್ರಿಯೆ ಮುಗಿದ ನಂತರ ನಾಲ್ಕು ನಿಮಿಷಗಳವರೆಗೆ ಇಸ್ರೋ ನಿಯಂತ್ರಣ ಕೇಂದ್ರಕ್ಕೆ ಸಂಕೇತಗಳು ಲಭಿಸುತ್ತಿದ್ದವು. ನಂತರ ಸಂಪರ್ಕ ಕಡಿತಗೊಂಡಿದೆ. ಎರಡನೇ ಬಾರಿ ಕಕ್ಷೆಗೆ ಏರಿಸುವ ಪ್ರಕ್ರಿಯೆಯನ್ನು ಸುಮಾರು 53 ನಿಮಿಷಗಳ ಕಾಲ ನಡೆಸಲಾಗಿತ್ತು.

ಆರಂಭಿಕ ವಿಶ್ಲೇಷಣೆಯ ಪ್ರಕಾರ, ಉಪಗ್ರಹದಲ್ಲಿ ವಿದ್ಯುತ್‌ ವ್ಯವಸ್ಥೆಯ ವೈಫ‌ಲ್ಯ ಕಂಡುಬಂದಿದೆ ಎಂದು ಹೇಳಲಾಗಿದೆಯಾದರೂ, ಇದನ್ನು ಇಸ್ರೋ ಖಚಿತಪಡಿಸಿಲ್ಲ. ಮೂರನೇ ಬಾರಿ ಕಕ್ಷೆಗೆ ಏರಿಸುವ ಪ್ರಕ್ರಿಯೆಯನ್ನು ಭಾನುವಾರ ನಡೆಸಲು ನಿರ್ಧರಿಸಲಾಗಿತ್ತು.

ಈ ಸಂಬಂಧ ಶನಿವಾರ ಇಸ್ರೋದ ಹಿರಿಯ ವಿಜ್ಞಾನಿಗಳ ಜತೆ ಮುಖ್ಯಸ್ಥ ಕೆ. ಶಿವನ್‌ ನಿರಂತರ ಸಭೆ ನಡೆಸಿದ್ದು, ಸಮಸ್ಯೆಯ ಮೂಲ ಹಾಗೂ ಪರಿಹಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಶಿವನ್‌ ಇಸ್ರೋ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರದಲ್ಲಿನ ಮೊದಲ ಉಡಾವಣೆ ಇದಾಗಿತ್ತು.

ಜಿಸ್ಯಾಟ್‌ ಅತ್ಯಂತ ಶಕ್ತಿಯುತ ಸಂವಹನ ಸ್ಯಾಟಲೈಟ್‌ ಆಗಿದೆ. ಸುಮಾರು 10 ವರ್ಷಗಳವರೆಗೆ ಇದರ ಜೀವಿತಾವಧಿ ಇತ್ತು. ವಿವಿಧ ಬ್ಯಾಂಡ್‌ಗಳಲ್ಲಿ ಸಂಕೇತಗಳನ್ನು ಪಸರಿಸುವ ಮೂಲಕ ಭಾರತದ ಎಲ್ಲ ಭಾಗಗಳಲ್ಲೂ ನಿಸ್ತಂತು ಸಂವಹನಕ್ಕೆ ಇದು ಪೂರಕವಾಗಿತ್ತು. “ಎಸ್‌’ ಬ್ಯಾಂಡ್‌ ಮತ್ತು “ಸಿ’ ಬ್ಯಾಂಡ್‌ ಅನ್ನು ಇದು ಬಳಸಿಕೊಳ್ಳಬೇಕಿತ್ತು. ಸ್ಯಾಟಲೈಟ್‌ ಆರು ಮೀಟರ್‌ ಅಗಲದ ಆ್ಯಂಟೆನಾ ಹೊಂದಿದ್ದು, “ಎಸ್‌’ ಬ್ಯಾಂಡ್‌ ಸಂವಹನ ಸ್ಯಾಟಲೈಟ್‌ಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಉದ್ದದ ಆ್ಯಂಟೆನಾ ಬಳಸಲಾಗಿತ್ತು. ಇದರಿಂದಾಗಿ ಭೂಮಿಯ ಮೇಲೆ ಸಣ್ಣ ಆ್ಯಂಟೆನಾ ಬಳಸಿ ನಿಸ್ತಂತು ಸಲಕರಣೆಗಳು ಸಂವಹನ ನಡೆಸಬಹುದಾಗಿದೆ. ಸೇನಾ ಪಡೆಗಳಿಗೂ ಈ ಸ್ಯಾಟಲೈಟ್‌ ಬಳಕೆಗೆ ಲಭ್ಯವಾಗಲಿತ್ತು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.