ರಾಜ್ಯ ನಾಯಕರ ಮೇಲೆ ಐಟಿ ದಾಳಿ ಸಂಭವ: ಕೃಷ್ಣ ಭೈರೇಗೌಡ
Team Udayavani, Mar 23, 2018, 11:49 AM IST
ಬೆಂಗಳೂರು: ರಾಜ್ಯ ಸರ್ಕಾರದ ಐದಾರು ಜನ ಸಚಿವರ ಮೇಲೆ ಐಟಿ ಇಲಾಖೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಅಭಿಪ್ರಾಯ ಪಟ್ಟಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಬ್ಯಾಟರಾಯನ ಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೇಂದ್ರ ಸರ್ಕಾರ ಐಟಿ, ಇಡಿ, ಸಿಬಿಐ ಇಲಾಖೆಗಳನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದು, ಸಚಿವರುಗಳ ಮೇಲೆ ಐಟಿ ದಾಳಿ ನಡೆಸುವ ಮುನ್ಸೂಚನೆ ಇದೆ ಎಂದರು. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಪ್ರಭಾವಿ ಎನ್ನುವ ಕಾರಣಕ್ಕೆ ಅವರ ಮೇಲೆ ಐಟಿ ದಾಳಿ ನಡೆಸಲಾಗಿದೆ.
ಚುನಾವಣೆ ಸಂದರ್ಭದಲ್ಲಿ ಸಚಿವರುಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಕುತಂತ್ರದಿಂದ ದಾಳಿ ನಡೆಯುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಸಚಿವರನ್ನು ಬೆದರಿಸುವ ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಇದೆಲ್ಲದಕ್ಕೂ ಹೆದರುವುದಿಲ್ಲ ಎಂದು ಹೇಳಿದರು.