![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಉತ್ಪಾದನೆಯಲ್ಲಿ ವಿಶ್ವ ಮಟ್ಟದ ಚಿಂತನೆ ಅಗತ್ಯ
Team Udayavani, Feb 14, 2017, 12:09 PM IST
![make-in-induia.jpg](https://www.udayavani.com/wp-content/uploads/2017/02/14/make-in-induia.jpg)
ಬೆಂಗಳೂರು: ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಯಶಸ್ವಿಯಾಗಬೇಕಾದರೆ ಭಾರತವು ಜಾಗತಿಕಮಟ್ಟದಲ್ಲಿ ಚಿಂತನೆ ನಡೆಸಬೇಕಿದೆ. ವೈಮಾನಿಕ ಮತ್ತು ರಕ್ಷಣಾ ವಲಯದ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದಲ್ಲಿ ಡಿಜಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಪ್ರಾರಂಭಗೊಂಡ ಮೇಕ್ ಇನ್ ಇಂಡಿಯಾ-ಕರ್ನಾಟಕ ಸಮ್ಮೇಳನದಲ್ಲಿ “ವೈಮಾನಿಕ ಮತ್ತು ರಕ್ಷಣಾ ವಲಯ’ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಉದ್ಯಮಿಗಳು, “”ಯಾವುದೇ ಕ್ಷೇತ್ರದ ಉತ್ಪನ್ನಗಳು ನಮ್ಮಲ್ಲಿಗೆ ಮಾತ್ರ ಸೀಮಿತವಾಗದೇ ಜಾಗತಿಕ ಮಾರುಕಟ್ಟೆ ಪ್ರವೇಶಿಸಬೇಕು. ದೇಶೀಯ ಉತ್ಪನ್ನಗಳು ಯಶಸ್ವಿಯಾಗಬೇಕಾದರೆ ವಿಶ್ವಮಟ್ಟಕ್ಕೆ ತಲುಪಬೇಕು. ಆಗ ಮಾತ್ರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಮೌಲ್ಯ ಸಿಗಲಿದೆ,” ಎಂದು ಪ್ರತಿಪಾದಿಸಿದರು.
ಭರತ್ ಫೋರ್ಜ್ ಲಿ.ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಬಾಬಾ ಕಲ್ಯಾಣಿ ಮಾತನಾಡಿ, “ತಂತ್ರಜ್ಞಾನಗಳ ಬಳಕೆಯಲ್ಲಿ ಬದಲಾವಣೆಗಳಾಗುತ್ತಿವೆ. ಹೊಸ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ವೈಮಾನಿಕ ಮತ್ತು ರಕ್ಷಣಾ ವಲಯ ಸದೃಢಗೊಳಲು ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ ಅಗತ್ಯವಿದೆ. ತಂತ್ರಜ್ಞಾನಗಳ ಅಳವಡಿಕೆಯಲ್ಲಿ ತಡವಾಗಬಾರದು. ಇದಕ್ಕೆ ಯಾವುದೇ ರೀತಿಯಲ್ಲಿಯೂ ವಿನಾಯಿತಿ ನೀಡಲು ಸಾಧ್ಯವಿಲ್ಲ. ನಾವು ತಡ ಮಾಡಿದರೆ ಮತ್ತೂಂದು ರಾಷ್ಟ್ರ ಅದನ್ನು ಅಳವಡಿಸಿಕೊಂಡು ಮುನ್ನಡೆಯುತ್ತದೆ,” ಎಂದು ಹೇಳಿದರು.
ಕರ್ನಾಟಕ ಪ್ರಶಸ್ತ ಸ್ಥಳ
ಬೆಂಗಳೂರು: “ಆರೋಗ್ಯ, ಜೈವಿಕ ತಂತ್ರಜ್ಞಾನ ಮತ್ತು ಔಷಧ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಿಮ್ಹಾನ್ಸ್, ಐಐಎಸ್ಸಿಯಂತಹ ಮೇರು ಸಂಶೋಧನಾ ಕೇಂದ್ರಗಳಿವೆ. ಹೀಗಾಗಿ ಈ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಉದ್ಯಮಿಗಳಿಗೆ ಅನುಕೂಲವೇ ಹೆಚ್ಚು. ಅಲ್ಲದೇ, ಹೊಸ ಹೊಸ ಅವಿಷ್ಕಾರಕ್ಕೆ ಉತ್ತೇಜನ ನೀಡಿದಂತಾಗುತ್ತದೆ,” ಎಂದು ,” ಎಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.