ಐಟಿ ಭೇಟಿ ಪಿತೂರಿ; ಬಿಎಸ್‌ವೈ,ವಿಜಯೇಂದ್ರ ವಿರುದ್ಧ ಸಿಎಂ ಆರೋಪ


Team Udayavani, Sep 6, 2018, 6:00 AM IST

cm-hd-bsy.jpg

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುತ್ರ ವಿಜಯೇಂದ್ರ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ್ದಾರೆ ಎಂಬ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಗಂಭೀರ ಆರೋಪ- ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

“ನಮ್ಮ ಸರ್ಕಾರಕ್ಕೆ ಆಪತ್ತು ತರಲೆಂದೇ ಈ ಪಿತೂರಿಯ ಭೇಟಿ ನಡೆದಿದೆ”ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರ ಸ್ವಾಮಿ ಅವರು ಯಡಿಯೂರಪ್ಪ ವಿರುದ್ಧ ನೇರ ಆರೋಪ ಮಾಡಿ ದರೆ,”ಇದೆಲ್ಲಾ ಸುಳ್ಳು.ಪುರಾವೆಗಳಿದ್ದರೆ ತನಿಖೆ ಮಾಡಲಿ’ ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.

ವಿಜಯೇಂದ್ರ ಅವರು ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾದ ಬೆಳವಣಿಗೆಗೂ,ಮುಖ್ಯಮಂತ್ರಿ ಕುಮಾರಸ್ವಾಮಿಯವರ ಲೆಕ್ಕಪರಿಶೋಧಕರ ಕಚೇರಿ ಮೇಲಿನ ಆದಾಯ ತೆರಿಗೆ ದಾಳಿಗೂ ಸಂಬಂಧ ಇದೆ ಎನ್ನುವ ಮಾತುಗಳು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವಲಯದಲ್ಲಿ ಕೇಳಿ ಬರುತ್ತಿದೆ. ಮುಖ್ಯಮಂತ್ರಿ ವಿರುದ್ಧ ಪಿತೂರಿ ನಡೆಸಿ ಆ ಮೂಲಕ ಸರ್ಕಾರ ಉರುಳಿಸಲು ಸಂಚು ರೂಪಿಸಲಾಗುತ್ತಿದೆ ಎಂಬ ಮಾತುಗಳು ಈ ಪಕ್ಷದಲ್ಲಿ ಪ್ರತಿಧ್ವನಿಸುತ್ತಿವೆ. ಈ ಬಗ್ಗೆ ಸ್ವತಃ ಮುಖ್ಯ ಮಂತ್ರಿಗಳೇ ಬಹಿರಂಗವಾಗಿ ಮಾತನಾಡಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

ಏನೇನಾಯ್ತು?:
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಈ ಸರ್ಕಾರಕ್ಕೆ ಅಪತ್ತು ತರಲು ಕೆಲವು ಪ್ರಯತ್ನ ನಡೆಯುತ್ತಿವೆ. ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಇತ್ತೀಚೆಗೆ ಐಟಿ ಇಲಾಖೆ ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಯಾರ್ಯಾರು ಏನೆಲ್ಲಾ ನಡೆಸುತ್ತಿದ್ದಾರೆ ಎಲ್ಲ ಗೊತ್ತಿದೆ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ, ಕುಮಾರಸ್ವಾಮಿಯವರು ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಮಾತನಾಡಬೇಕು. ಇಲ್ಲ ಸಲ್ಲದ ಆರೋಪ ಮಾಡಬಾರದು. ಪಿತೂರಿ ಮಾಡಿದ್ದಕ್ಕೆ ಏನಾದರೂ ಪುರಾವೆ ಇದ್ದರೆ ಕೊಡಲಿ ಎಂದು ಸವಾಲು ಹಾಕಿದರು.

ಕುಮಾರಸ್ವಾಮಿಯವರು ಅನಗತ್ಯ ಹೇಳಿಕೆ ಕೊಟ್ಟು ಯಾರನ್ನೋ ಬಲಿಪಶು ಮಾಡಿ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಲ್ಲ. ನಮಗೆ ಸುಪ್ರೀಂಕೋರ್ಟ್‌, ಹೈಕೋರ್ಟ್‌ಗಳಲ್ಲಿ ಕೇಸ್‌ಗಳಿವೆ, ಅದಕ್ಕೆ ಓಡಾಡುತ್ತಿದ್ದೇವೆ. ನಾವ್ಯಾಕೆ ಬೇರೆಯವರ ಬಗ್ಗೆ ತಲೆಕೆಡಿಸಿಕೊಳ್ಳಬೇಕು ಎಂದರು.

ಯಡಿಯೂರಪ್ಪ ಪುತ್ರ ವಿಜಯೇಂದ್ರ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಯವರು ಇಂತಹ ಹೇಳಿಕೆ ಕೊಡಬಾರದು. ನಾನು ಆದಾಯ ತೆರಿಗೆ ಅಧಿಕಾರಿಗಳನ್ನು ಭೇಟಿ ಮಾಡಿದ್ದೆ ಎಂಬುದು ಕಪೋಲಕಲ್ಪಿತ. ಅವರ ಅಸ್ಥಿರ ಮನಸ್ಸು ಇಂತಹ ಹೇಳಿಕೆ ಕೊಡಿಸುತ್ತಿದೆ. ಮುಖ್ಯಮಂತ್ರಿಯವರ ಬಳಿಯೇ ಗುಪ್ತಚರ ಇಲಾಖೆ ಇದೆ, ತನಿಖೆ ಮಾಡಿಸಲಿ. ಯಡಿಯೂರಪ್ಪ ಅವರ ಮಕ್ಕಳು ಎಲ್ಲಿಗೆ ಹೋಗ್ತಾರೆ ಎನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪ್ರತಿಕ್ರಿಯಿಸಿದ್ದಾರೆ.

ಇನ್ನು, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹ ಇದೇ ರೀತಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಯವರಿಗೆ ಆದಾಯ ತೆರಿಗೆ ಇಲಾಖೆ ಬಗ್ಗೆ ಯಾಕೆ ಭಯ? ಏನಾದರೂ ಇದ್ದರೆ ತನಿಖೆ ನಡೆಯಲಿ ಬಿಡಿ. ಈ ರೀತಿಯ ಆರೋಪಗಳು “ಕಳ್ಳನ ಮನಸ್ಸು ಹುಳ್ಳೊಳಗೆ’ ಎನ್ನುವಂತಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ವಿಧಾನಸೌಧದಲ್ಲಿ ಪ್ರಕ್ರಿಯಿಸಿರುವ ಕುಮಾರಸ್ವಾಮಿ, ನಾನು ಎಲ್ಲ ತಿಳಿದುಕೊಂಡೇ ಮಾತನಾಡಿದ್ದೇನೆ. ಮಾಧ್ಯಮಗಳಲ್ಲೂ ಇದು ಬಂದಿದೆ. ಪುರಾವೆ ಕೊಡಲು ಇವರು ಹೋದಾಗ ಕ್ಯಾಮರಾ ಹಿಡಿದುಕೊಂಡು ಹೋಗಲ್ಲಾ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಅವರೇ ಹೇಳಿದ್ದಾರೆ, ಸುಪ್ರೀಂಕೋರ್ಟ್‌, ಹೈಕೋರ್ಟ್‌ನಲ್ಲಿ ನಮ್ಮ ವಿರುದ್ಧ ಪ್ರಕರಣಗಳು ಅಂತ. ಅಲ್ಲಿಗೆ ಭೇಟಿಯಾಗಿರುವುದು ಸ್ಪಷ್ಟವಾಗಿದೆ. ನಾನು ಏನೂ ಗೊತ್ತಿಲ್ಲದೇ ಹೇಳುವುದಿಲ್ಲ, ಎಲ್ಲವೂ ನನಗೂ ಅರ್ಥವಾಗುತ್ತದೆ ಎಂದು ಖಾರವಾಗಿಯೇ ತಿಳಿಸಿದ್ದಾರೆ.

ಐಟಿ ಇಲಾಖೆ ಹೇಳಿಕೆ
ಯಾವುದೇ ರಾಜಕೀಯ ನಾಯಕರ ಕುಟುಂಬ ಸದಸ್ಯರು ನಮ್ಮ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿಯಾಗಿಲ್ಲ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಂಟಿ ಆಯುಕ್ತ ತಮಿಳ್‌ ಸೆಲ್ವನ್‌, ರಾಜಕೀಯ ನಾಯಕರೊಬ್ಬರ ಕುಟುಂಬ ಸದಸ್ಯರು ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ್ದರು ಎಂಬುದು ಆಧಾರ ರಹಿತ. ಇಲಾಖೆ ಕಳೆದ ಎರಡು ವರ್ಷಗಳಿಂದ ಹಲವಾರು ಪ್ರಕರಣಗಳಲ್ಲಿ ಪಾರದರ್ಶಕ ತನಿಖೆ ನಡೆಸಿ ತಾರ್ಕಿಕ ಅಂತ್ಯ ತಲುಪುವುಂತೆ ನೋಡಿಕೊಂಡಿದೆ. ಆದರೆ, ಯಾವುದೇ ಪ್ರಕರಣದಲ್ಲೂ ರಾಜಕೀಯ ಪ್ರೇರಿತವಾಗಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.