ಒಗ್ಗೂಡಿ ನಡೆದರೆ ಸ್ಥಾನಮಾನ


Team Udayavani, Jul 28, 2018, 11:43 AM IST

ogggudi.jpg

ಬೆಂಗಳೂರು: ಅತ್ಯಂತ ಹಿಂದುಳಿದ ಸಮುದಾಯಗಳು ಶಿವದಾರ, ಲಿಂಗದಾರ ಎಂಬ ಭಿನ್ನತೆ ಬದಿಗಿಟ್ಟು ಒಗ್ಗೂಡಿ ನಡೆದಾಗ ಸಮುದಾಯಕ್ಕೆ ಸೂಕ್ತ ಸಾಮಾಜಿಕ ಸ್ಥಾನಮಾನ ದೊರೆಯುತ್ತದೆ ಎಂದು ಮಾಜಿ ಸಚಿವೆ ಉಮಾಶ್ರೀ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶುಕ್ರವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕೀಯ ಸ್ಥಾನಮಾನ ಪಡೆಯುವ ವಿಚಾರದಲ್ಲಿ ನಾವು ಭಿನ್ನಾಭಿಪ್ರಾಯ ಹೊಂದಬಾರದು.

ಇಡೀ ಸಮುದಾಯ ಎಂದಾಕ್ಷಣ ನಾವುಗಳು ಭಿನ್ನತೆ ಬಿಟ್ಟು ಒಗ್ಗೂಡಬೇಕಾಗುತ್ತದೆ. ಆಗಲೇ ನಮ್ಮ ಸಮುದಾಯದವರು ಶಾಸಕರು ಹಾಗೂ ಸಂಸದರಾಗಲು ಸಾಧ್ಯ. ರಾಜಕೀಯ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮ ಪಾಲನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ಶಿವಶರಣ ಜಯಂತಿಗೆ ನಾನು ಸಚಿವೆಯಾಗಿದ್ದಾಗ ಹೆಚ್ಚಿನ ಮನ್ನಣೆ ನೀಡಲಾಗಿತ್ತು. ಜೇಡರ ದಾಸಿಮಯ್ಯ ಜಯಂತಿ, ಸರ್ವಜ್ಞ ಜಯಂತಿ, ಅಂಬಿಗರ ಚೌಡಯ್ಯ ಜಯಂತಿ, ನಾರಾಯಣ ಗುರು ಜಯಂತಿ ಸೇರಿದಂತೆ ವಿವಿಧ ಜಯಂತಿಗಳ ಆಚರಣೆಗಳನ್ನು ಅನುಷ್ಠಾನಕ್ಕೆ ತರಲಾಯಿತು.

ಇಲಾಖೆ ಅಡಿಯಲ್ಲಿ ಬರುವ 25 ಜಯಂತಿಗಳಲ್ಲಿ 12 ಜಯಂತಿ ಶಿವಶರಣರಿಗೆ ಸಂಬಂಧಿಸಿದ್ದಾಗಿವೆ ಎಂದು ತಿಳಿಸಿದರು. ಮಾಜಿ ಸಚಿವ ಆರ್‌.ಬಿ.ತಿಮ್ಮಾಪುರ ಮಾತನಾಡಿ, ಹಿಂದುಳಿದ ಸಮುದಾಯಗಳು ಎಚ್ಚರದಿಂದ ಇರಬೇಕು. ಹಡಪದ ಸಮುದಾಯಕ್ಕೆ ಸೇರಿದ ಕೆಲವೇ ಮಂದಿ ರಾಜಕೀಯ ಸ್ಥಾನಮಾನ ಪಡೆದಿದ್ದಾರೆ.

84 ಗ್ರಾಮ ಪಂಚಾಯಿತಿ ಸದಸ್ಯರು, 4 ಪುರಸಭೆ ಸದಸ್ಯರು ಹಾಗೂ ಓರ್ವ ತಾಲೂಕು ಪಂಚಾಯಿತಿ ಸದಸ್ಯರು ಮಾತ್ರವೇ ಹಡಪದ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸಮುದಾಯದವರು ಜೀವನ ರೂಪಿಸಿಕೊಳ್ಳಲು ಬ್ಯಾಂಕುಗಳು ಸಾಲ ನೀಡಲು ಮುಂದಾಗಬೇಕು. ಹಿಂದುಳಿದ ವರ್ಗದವರಿಗೆ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ನೀಡಬೇಕು ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರಿಗೆ ಸಂಬಂಧಿಸಿದ ಕೃತಿ ಮತ್ತು ಧ್ವನಿಸುರಳಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಅಪ್ಪಣ್ಣ ದೇವರ ಮಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.