ವೆಂಕಯ್ಯ ನಾಯ್ಡು ಆಯ್ಕೆ ವಿರೋಧಕ್ಕೆ ಜಗ್ಗೇಶ್ ಟ್ವೀಟ್
Team Udayavani, Aug 7, 2017, 8:00 AM IST
ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಿದ್ದರೆ, ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದು ನಟ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. “ಕರ್ನಾಟಕದಲ್ಲಿ ಅವರನ್ನು ಭಾಷಾ ಭಾವನೆಯಲ್ಲಿ ರಾಜ್ಯಸಭೆಗೆ ಆಯ್ಕೆ ಮಾಡಲು ಆಕ್ಷೇಪಿಸಿದರು. ಆದರೆ, ಇಂದು ಭಾರತಕ್ಕೆ ಉಪರಾಷ್ಟ್ರಪತಿ.ಬಾರದು ಬಪ್ಪದು … ಬಪ್ಪದು ತಪ್ಪದು! ಇದು ದೇವರ ಲೀಲೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಅದನ್ನು ಟ್ವಿಟರ್ ವಾಲ್ನಿಂದ ತೆಗೆದುಹಾಕಿದ್ದಾರೆ. ಇದಕ್ಕೂ ಮುನ್ನ, “ವೆಂಕಯ್ಯ ನಾಯ್ಡು ಅವರು ಕರ್ನಾಟಕದಿಂದ ರಾಜ್ಯಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದರು.
ಆದರೆ, ಕಳೆದ ವರ್ಷ ಚುನಾವಣೆ ನಡೆದ ಸಂದರ್ಭದಲ್ಲಿ ಕರ್ನಾಟದಿಂದ ವೆಂಕಯ್ಯ ನಾಯ್ಡು ಅವರು ಸ್ಪರ್ಧಿಸುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೆ, ಅವರು ರಾಜ್ಯದಿಂದ ಆಯ್ಕೆಯಾಗಿದ್ದರೆ,ಇಂದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿರುತ್ತಿತ್ತು ಎಂಬರ್ಥದಲ್ಲಿ ಜಗ್ಗೇಶ್ ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
Yugadi: ವರುಷದ ಆದಿ ಯುಗಾದಿ
U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ