ಜೈ ಜವಾನ್‌, ಜೈ ಅನ್ವೇಷಕ


Team Udayavani, Mar 11, 2020, 3:09 AM IST

jai-jawan

ಬೆಂಗಳೂರು: ಭವಿಷ್ಯದಲ್ಲಿ ಭಾರತ ವಿಶ್ವ ಮಟ್ಟದಲ್ಲಿಯೇ ಮಾದರಿ ದೇಶವಾಗಲಿದ್ದು, ಇದರಲ್ಲಿ ಉದ್ಯಮಿಗಳ ಪಾತ್ರ ಮಹತ್ವದ್ದಾಗಿದೆ. ಮುಂದಿನ ದಿನಗಳಲ್ಲಿ ಜೈ ಜವಾನ್‌, ಜೈ ಕಿಸಾನ್‌ ಜತೆ “ಜೈ ಅನ್ವೇಷಕ’ವೂ ಸೇರಬೇಕು ಎಂದು ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆ ಮಂಗಳ ವಾರ ನಗರದಲ್ಲಿ ಆಯೋಜಿಸಿದ್ದ ಎಲಿವೇಟ್‌ ಕಾಲ್‌ -2, ಉನ್ನತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅನ್ವೇಷಕರು ಭರವಸೆ ಮೂಡಿಸುತ್ತಿದ್ದು, ಪ್ರತಿಭಾನ್ವಿತರು ಹೊರಹೊಮ್ಮುತ್ತಿದ್ದಾರೆ. ಪ್ರತಿಭಾನ್ವಿತರ ಪ್ರಯ ತ್ನಕ್ಕೆ ಸರ್ಕಾರದ ಬೆಂಬಲ ಇದೆ ಎಂದು ತಿಳಿಸಿದರು. ನಾಡಿನಲ್ಲಿರುವ ಪ್ರತಿಭಾನ್ವಿತರನ್ನು ಗುರು ತಿಸಿ ಬೆಂಬಲಿಸಲು “ಗ್ರಾಂಟ್‌ ಇನ್‌ ನೀಡ್‌’ ಕಾರ್ಯಕ್ರಮ ರೂಪಿಸಲಾಗಿದೆ. ಅದ ಕ್ಕಾ  ಗಿಯೇ ಬಜೆಟ್‌ನಲ್ಲಿ ಇನ್ನೋವೇಷನ್‌ ಹಬ್‌ ಸ್ಥಾಪನೆ ಪ್ರಸ್ತಾಪ ಮಾಡಲಾಗಿದೆ ಎಂದರು.

ಈಸ್‌ ಆಫ್ ಡೂಯಿಂಗ್‌ ಬಿಸಿನೆಸ್‌ (ಸುಲಲಿತ ವ್ಯವಹಾರ) ಪರಿಣಾಮಕಾರಿ ಜಾರಿ ಮೂಲಕ ನಂ. 1 ಸ್ಥಾನದಲ್ಲಿರುವುದು ಕರ್ನಾಟಕದ ಉದ್ದೇಶವಾಗಿದೆ. ಉದ್ದಿಮೆಗೆ ಯಾವುದೇ ರೀತಿಯ ಅಡಚಣೆ ಇಲ್ಲದೇ ಸಂತೋಷದಿಂದ ಕೆಲಸ ಮಾಡುವ ವ್ಯವಸ್ಥೆ ನಿರ್ಮಾಣ ಮಾಡಿ, ವಿಶ್ವದಲ್ಲೇ ಕರ್ನಾಟಕ ಉದ್ಯಮಿ ಮತ್ತು ಉದ್ಯಮ ಸ್ನೇಹಿ ಸ್ಥಳ ಆಗಿರಬೇಕು ಎಂದು ಪಣ ತೊಟ್ಟು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಉತ್ತರ ಅಮೆರಿಕ, ಯೂರೋಪ್‌ಗಳ ಗಮನ ಸೆಳೆಯುವಲ್ಲಿ ಬೆಂಗಳೂರು ಯಶಸ್ವಿಯಾಗಿದೆ. ಆದರೆ, ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ನಮ್ಮ ಬೆಂಗಳೂರಿನ ಸಾಮರ್ಥ್ಯ ಗೊತ್ತಿಲ್ಲ. ಏಷ್ಯಾದ ಇತರೆ ರಾಷ್ಟ್ರಗಳಿಗೆ ಬೆಂಗಳೂರಿನ ಸಾಮರ್ಥ್ಯ ತಿಳಿಸಿಕೊಡುವ ಪ್ರಯತ್ನಗಳು ಆಗ ಬೇಕು. ಹೊರಗಿನಿಂದ ಬಂದವರೂ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ತೋರುವುದನ್ನು ಕಂಡಾಗ ಬಹಳ ಸಂತೋಷವಾಗುತ್ತದೆ.

ಬೆಂಗಳೂರಿನ ಅಭಿವೃದ್ಧಿಗೆ ಅವರ ನಿಸ್ವಾರ್ಥ ಸೇವೆ ದೊಡ್ಡದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಎಲಿವೇಟ್‌ ಕರ್ನಾಟಕದ ನಿರ್ದೇಶಕ ಪ್ರಶಾಂತ್‌ ಮಿಶ್ರಾ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಕುಮಾರ್‌ ನಾಯಕ್‌ ಸೇರಿ ದಂತೆ ಹಲವರು ಉಪಸ್ಥಿತರಿದ್ದರು.

113 ಸ್ಟಾರ್ಟ್‌ಅಪ್‌ಗಳ ವಿಜೇತರ ಘೋಷಣೆ: ನಾವೀನ್ಯತೆಯುಳ್ಳ ವಾಣಿಜ್ಯೋದ್ಯಮಿಗಳಿಗೆ 50 ಲಕ್ಷ ರೂ. ವರೆಗೆ ಅನುದಾನ ನೀಡುವುದೇ ಎಲಿವೇಟ್‌, ಉನ್ನತಿ ಕಾರ್ಯಕ್ರಮವಾಗಿದ್ದು, 113 ಸ್ಟಾರ್ಟ್‌ಅಪ್‌ಗ್ಳ ವಿಜೇತರನ್ನು ಘೋಷಿಸಲಾಯಿತು. ಬೆಂಗಳೂರಿನ 78, ಧಾರವಾಡದ 13, ಬೆಳಗಾವಿ 4, ಕಲಬುರಗಿ ಮತ್ತು ತುಮಕೂರಿನಿಂದ ತಲಾ 3, ಬೀದರ್‌, ಬೆಂಗಳೂರು ಗ್ರಾಮೀಣ, ಬಳ್ಳಾರಿಯ ತಲಾ 2, ರಾಮನಗರ, ಚಿಕ್ಕಮಗಳೂರು, ಮೈಸೂರು, ರಾಯಚೂರು, ಹಾವೇರಿ ಹಾಗೂ ಉಡುಪಿಯ ತಲಾ 1 ಸ್ಟಾರ್ಟ್‌ಅಪ್‌ ಸ್ಪರ್ಧೆಯಲ್ಲಿ ಗೆದ್ದಿವೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.