ಜ.23: ಪಂಚಾಯತ್ ವ್ಯವಸ್ಥೆ ಸಬಲೀಕರಣಕ್ಕಾಗಿ ಆಗ್ರಹಿಸಿ ಧರಣಿ
Team Udayavani, Jan 19, 2018, 6:20 AM IST
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯಲ್ಲಿ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜ.23ರಂದು ಧರಣಿ ನಡೆಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಾಯತ್ ವ್ಯವಸ್ಥೆಯ ಸಬಲೀಕರಣಕ್ಕಾಗಿ ಒತ್ತಾಯಿಸಿ ಮತ್ತು ಅಧಿಕಾರ ವಿಕೇಂದ್ರಿಕರಣದ ಅನುಷ್ಟಾನ ಸೇರಿ 30ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಧಾನಸೌಧ ಮತ್ತು ವಿಕಾಸಸೌಧ ನಡುವಿನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯರಾದ ಎಂ.ಕೆ.ಪ್ರಾಣೇಶ್, ಸುನಿಲ್ ಸುಬ್ರಹ್ಮಣ್ಯ, ಬಿ.ಜಿ.ಪಾಟೀಲ್ ಸೇರಿದಂತೆ ಇತರೆ ಜನಪ್ರತಿನಿಧಿಗಳು ಧರಣಿಯಲ್ಲಿ ಪಾಲ್ಗೊಳ್ಳಲಿದ್ದು ಈ ಸಂಬಂಧ ಅನುಮತಿಗಾಗಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಮನವಿ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ