ಜೈಲು ಪಾಲಾದ ಜನಾರ್ದನ ರೆಡ್ಡಿ ಆಪ್ತ ಅಲಿಖಾನ
Team Udayavani, Nov 21, 2018, 6:00 AM IST
ಬೆಂಗಳೂರು: ಆ್ಯಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣದ ಐದನೇ ಆರೋಪಿ ಅಲಿಖಾನ್ಗೆ ನಿರೀಕ್ಷಣಾ ಜಾಮೀನು ನೀಡಲು ಸೆಷನ್ಸ್ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಬಂಧನ ಭೀತಿಯಿಂದ 1ನೇ ಎಸಿ ಎಂಎಂ ನ್ಯಾಯಾಲಯಕ್ಕೆ ಅಲಿಖಾನ್ ಶರಣಾಗಿದ್ದಾರೆ. ನ್ಯಾಯಾಲಯ ಅಲಿಖಾನ್ಗೆ ನ. 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆ್ಯಂಬಿಡೆಂಟ್ ಕಂಪೆನಿ ಮೂಲಕ 57 ಕೆ.ಜಿ ಚಿನ್ನದ ಗಟ್ಟಿ ಸ್ವೀಕರಿಸಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಲುಪಿಸಿರುವ
ಗಂಭೀರ ಆರೋಪ ಎದುರಿಸುತ್ತಿರುವ ಅಲಿಖಾನ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಲಿಖಾನ್ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರ ವಾದ ಪ್ರತಿ ವಾದ ಅಲಿಸಿ ಆದೇಶ ಕಾಯ್ದಿರಿಸಿದ್ದ 61ನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ ಮಂಗಳವಾರ ಅಲಿಖಾನ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದರು. ಜತೆಗೆ, ಅರ್ಜಿದಾರರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ. ಹೀಗಾಗಿ, ಆರೋಪಿಗೆ ನಿರೀಕ್ಷಣಾ ಜಾಮೀನು ಮುಂಜೂರು ಮಾಡಬಾರದು ಎಂಬ ಅಭಿಯೋಜನಾ ತಕರಾರುಗಳನ್ನು
ನ್ಯಾಯಾಧೀಶರು ಮಾನ್ಯ ಮಾಡಿದ್ದಾರೆ.
ಪ್ರಕರಣದಲ್ಲಿ ಸಿಸಿಬಿ ಪರ ವಾದಿಸಿದ್ದ ಸರ್ಕಾರಿ ಅಭಿಯೋಜಕಿ ಶೈಲಜಾ ಕೃಷ್ಣನಾಯಕ್ ಮಾತನಾಡಿ, ಪ್ರಕರಣದ 5ನೇ ಆರೋಪಿಯಾಗಿರುವ ಅಲಿಖಾನ್ ಆ್ಯಂಬಿಡೆಂಟ್ ಕಂಪೆನಿಯಿಂದ 57 ಕೆ.ಜಿ ಚಿನ್ನ ಹಾಗೂ ನಗದು ಪಡೆದಿದ್ದಾರೆ. ಜತೆಗೆ, ಆರೋಪಿ ಎಸಿಎಂಎಂ ಕೋರ್ಟ್ನಲ್ಲಿ ಆ್ಯಂಬಿಡೆಂಟ್ ಮೂಲಕ ಪಡೆದಿರುವ ಚಿನ್ನ ಹಾಗೂ ನಗದು ವಾಪಸ್ ನೀಡುವುದಾಗಿ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಂಶ ಅವರು ಚಿನ್ನ ಹಾಗೂ ನಗದು ಪಡೆದಿರುವುದರ ಸಂಕೇತವಾಗಿದೆ. ಹೀಗಾಗಿ ಆತನಿಂದ ಚಿನ್ನ, ನಗದು ಜಪ್ತಿ
ಮಾಡಬೇಕಿದ್ದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ ಎಂಬ ಇನ್ನಿತರೆ ಅಂಶಗಳನ್ನು ಪರಿಗಣಿಸಿ ಆರೋಪಿಯ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ