ಜನಾರ್ದನ ರೆಡ್ಡಿ ಕೊರಳ ತುಂಬಾ ಕಾನೂನಿನ ಉರುಳು


Team Udayavani, Nov 12, 2018, 6:00 AM IST

janardhan-reddy-20182018.jpg

ಬೆಂಗಳೂರು: ಇತ್ತೀಚೆಗಿನ ಉಪಚುನಾವಣೆ ಸಂದರ್ಭದಲ್ಲಿ ಅಬ್ಬರಿಸಿದ್ದ ಜನಾರ್ದನ ರೆಡ್ಡಿ ಈಗಜೈಲು ಸೇರಿದ್ದಾರೆ. ಅಕ್ರಮ ಗಣಿಗಾರಿಕೆ, ಅಕ್ರಮ  ಅದಿರು ಸಾಗಾಟ, ಕ್ಯಾಷ್‌ ಫಾರ್‌ ಬೇಲ್‌ ಪ್ರಕರಣಗಳಲ್ಲಿ ಜಾಮೀನು ಪಡೆದು ಕೊಂಚ ನಿರಾಳರಾಗಿದ್ದ ರೆಡ್ಡಿಗೆ ಇದೀಗ “ಡೀಲ್‌’ ಹೆಸರಲ್ಲಿ ಮತ್ತೂಂದು ಸುತ್ತಿನ ಕಾನೂನು ಕುಣಿಕೆ ಸುತ್ತಿಕೊಂಡಿದೆ.

ರೆಡ್ಡಿ ವಿರುದ್ಧ ಅಕ್ರಮ ಗಣಿಗಾಣಿಕೆ, ಅಕ್ರಮ ಅದಿರು ಸಾಗಾಟ, ಕ್ಯಾಷ್‌ ಫಾರ್‌ ಬೇಲ್‌ ಪ್ರಕರಣಗಳು ಸೇರಿ ಪ್ರಮುಖವಾಗಿ 6 ಪ್ರಕರಣಗಳು ದಾಖಲಾಗಿದ್ದವು. ಈ ಎಲ್ಲ ಪ್ರಕರಣಗಳಲ್ಲಿ ಅವರಿಗೆ ಜಾಮೀನು ಸಿಕ್ಕಿದ್ದು, ಈ ಎಲ್ಲ ಪ್ರಕರಣಗಳು ಅಧೀನ ನ್ಯಾಯಾಲಯ, ಸಿಬಿಐ ವಿಶೇಷ ನ್ಯಾಯಾಲಯ,ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇವೆ.

ಅಕ್ರಮ ಗಣಿಗಾರಿಕೆ ಆರೋಪದಲ್ಲಿ ರೆಡ್ಡಿಯವರು ಜೈಲು ಸೇರಲು ಪ್ರಮುಖ ಕಾರಣವಾಗಿದ್ದು ಆಂಧ್ರಪ್ರದೇಶ ಸರ್ಕಾರ, ಕರ್ನಾಟಕದ ಲೋಕಾಯುಕ್ತ ಹಾಗೂ ಸಮಾಜ ಪರಿವರ್ತನಾ ಸಮುದಾಯ. ರೆಡ್ಡಿ ವಿರುದಟಛಿ ಮೊದಲ ಪ್ರಕರಣ ದಾಖಲಾಗಿದ್ದು 2009ರಲ್ಲಿ ಓಬಳಾಪುರಂ ಮೈನಿಂಗ್‌ ಕಂಪನಿಯಿಂದ (ಓಎಂಸಿ) ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ ದಲ್ಲಿ. ಈ ಪ್ರಕರಣವನ್ನುಆಂಧ್ರಪ್ರದೇಶ ಎಸಿಬಿ  ದಾಖಲಿಸಿತ್ತು. ಈ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದ್ದು, ಈ ಪ್ರಕರಣ ಹೈದರಾಬಾದ್‌ ಸಿಬಿಐನಲ್ಲಿ ತನಿಖಾ ಹಂತದಲ್ಲಿ ಬಾಕಿ ಇದೆ.

ಅಸೋಸಿಯೇಟೆಡ್‌ ಮೈನಿಂಗ್‌ ಕಂಪನಿ (ಎಎಂಸಿ) ಮೂಲಕ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2012ರಲ್ಲಿ ಸುಪ್ರೀಂಕೋರ್ಟ್‌ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ ಬೆಂಗಳೂರು ಸಿಬಿಐ, 2013ರಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಈ ಅಕ್ರಮದಿಂದ ರಾಜ್ಯದ ಬೊಕ್ಕಸಕ್ಕೆ 480 ಕೋಟಿ ರೂ.ನಷ್ಟ ಆಗಿದೆ ಎಂದು ಚಾರ್ಜ್‌ ಶೀಟ್‌ನಲ್ಲಿ ಹೇಳಲಾಗಿತ್ತು. ಈ ಪ್ರಕರಣದಲ್ಲೂ ರೆಡ್ಡಿಗೆ ಜಾಮೀನು ಸಿಕ್ಕಿದ್ದು, ಬೆಂಗಳೂರು ಸಿಬಿಐ, ಕರ್ನಾಟಕ ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ ನಲ್ಲಿ ಈ ಪ್ರಕರಣ ವಿವಿಧ
ಹಂತಗಳಲ್ಲಿ ವಿಚಾರಣೆಗೆ ಬಾಕಿ ಇದೆ.

ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಮಾಡಿದ ಹಾಗೂ ಅದಿರು ಕಳ್ಳತನ ಮಾಡಿದ್ದ ಆರೋಪದಲ್ಲಿ ಬೆಂಗಳೂರು ಸಿಬಿಐ, 2012ರಲ್ಲಿ ಐದು ಪ್ರತ್ಯೇಕ ಎಫ್ಐಆರ್‌ಗಳನ್ನು ದಾಖಲಿಸಿಕೊಂಡಿತ್ತು.ಈ ಪ್ರಕರಣದಲ್ಲೂ ಜಾಮೀನು ಸಿಕ್ಕಿದ್ದು ಸಿಬಿಐನಲ್ಲಿ ತನಿಖೆ ಮುಂದುವರಿದಿದೆ.

ಕ್ಯಾಷ್‌ ಫಾರ್‌ ಬೇಲ್‌ ಪ್ರಕರಣ: ಈ ಮಧ್ಯೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ರೆಡ್ಡಿ, ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದುಕೊಳ್ಳಲು ಜಡ್ಜ್ಗೆ 60 ಕೋಟಿ ರೂ.ಲಂಚದ ಆಮಿವೊಡ್ಡಿದ್ದ ಆರೋಪ ಕೇಳಿ ಬಂತು. “ಕ್ಯಾಷ್‌ ಫಾರ್‌ ಬೇಲ್‌’ ಹೆಸರಲ್ಲಿ ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸಂಚಲನ ಉಂಟು ಮಾಡಿತ್ತು.2012ರಲ್ಲಿ ನಡೆದ ಈ ಪ್ರಕರಣದ ತನಿಖೆ ಹೈದರಬಾದ್‌ ಸಿಬಿಐನಲ್ಲಿ ಸದ್ಯ ನನೆಗುದಿಗೆ ಬಿದ್ದಿದೆ.

ಸುದೀರ್ಘ‌ ಅವಧಿ ಜೈಲಲ್ಲಿ
ರೆಡ್ಡಿಯ ಮೊದಲು ಬಂಧನವಾಗಿದ್ದು 2011ರ ಸೆಪ್ಟೆಂಬರ್‌ 5ರಂದು. ಆಗ ಓಬಳಾಪುರಂ ಅಕ್ರಮ ಗಣಿಗಾರಿಕೆ ಕೇಸ್‌ನಲ್ಲಿ ಹೈದರಾಬಾದ್‌ ಸಿಬಿಐ ಅವರನ್ನು ಬಂಧಿಸಿತ್ತು. ಸುಮಾರು ಒಂದು ವರ್ಷ ಚಂಚಲಗುಡ್ಡ ಜೈಲಿನಲ್ಲಿದ್ದ ಅವರು, ಎಎಂಸಿ ಅಕ್ರಮ ಗಣಿಗಾರಿಕೆ, ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಬೇಕಾಯಿತು. ಎಲ್ಲ ಪ್ರಕರಣಗಳಲ್ಲಿ ಅವರಿಗೆ 2015ರ ಜ.21ರಂದು ಜಾಮೀನು ಸಿಕ್ಕಿತು. ಸತತ ಮೂರು ವರ್ಷ 3 ತಿಂಗಳು ರೆಡ್ಡಿ ಜೈಲಲ್ಲಿ ಇರಬೇಕಾಯಿತು. ಯಾವ ಪ್ರಕರಣದಲ್ಲೂ ಶಿಕ್ಷೆಯಾಗದೆ ಒಬ್ಬ ವಿಚಾರಣಾಧೀನ ಕೈದಿ ಇಷ್ಟೊಂದು ಸುದೀರ್ಘ‌ ಅವಧಿ ಜೈಲಲ್ಲಿ ಕಳೆದದ್ದು ದೇಶದ ಇತಿಹಾಸದಲ್ಲೇ ಮೊದಲು ಎಂದು ಸ್ವತ: ಸಿಬಿಐ ಹೇಳಿತ್ತು.

ರೆಡ್ಡಿ ವಿರುದ್ಧ  ಅಕ್ರಮ ಗಣಿಗಾರಿಕೆ ಆರೋಪದ ಎಲ್ಲ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದೆ. ಆದರೆ, ಪ್ರಕರಣಗಳು ವಿಚಾರಣಾ ಹಂತದಲ್ಲಿ ಬಾಕಿ ಇವೆ. ಇದರಲ್ಲಿ ಕೆಲವೊಂದು ಅರ್ಜಿಗಳು ಹೈಕೋರ್ಟ್‌ನಲ್ಲಿ ಹಾಗೂ ಕೆಲವು ಮೇಲ್ಮನವಿಗಳು ಸುಪ್ರೀಂಕೋರ್ಟ್‌ನಲ್ಲಿ ಇವೆ.
– ಪ್ರಸನ್ನಕುಮಾರ್‌, ಸಿಬಿಐ ಪರ ವಕೀಲರು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ರೆಡ್ಡಿ ವಿರುದ್ಧದ ಪ್ರಕರಣಗಳ ಶೀಘ್ರ ತನಿಖೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಇಚ್ಛಾಶಕ್ತಿಯಿಲ್ಲ. ತನಿಖಾ ಸಂಸ್ಥೆಗಳಿಗೆ ಆಸಕ್ತಿ ಇಲ್ಲದಂತಾಗಿದೆ. ಆದ್ದರಿಂದ ಎಲ್ಲ ಪ್ರಕರಣಗಳು ಸಂಪೂರ್ಣವಾಗಿ ನನೆಗುದಿಗೆ ಬಿದ್ದಿವೆ. ಈಗಿನ ಪ್ರಕರಣವೂ ಆ ಪಟ್ಟಿಗೆ ಸೇರುತ್ತದಷ್ಟೇ.
– ಎಸ್‌.ಆರ್‌. ಹಿರೇಮಠ, ಸಂಸ್ಥಾಪಕ ಅಧ್ಯಕ್ಷ,
ಸಮಾಜ ಪರಿವರ್ತನಾ ಸಮುದಾಯ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.