ಜನಸೇವಕ ಉಪಕ್ರಮಕ್ಕೆ ಭಾರೀ ಜನಸ್ಪಂದನ: ಅಶ್ವತ್ಥ ನಾರಾಯಣ
Team Udayavani, Dec 19, 2021, 3:37 PM IST
ಬೆಂಗಳೂರು: ಆಧಾರ್ ಕಾರ್ಡಿನಿಂದ ಹಿಡಿದು ಆಸ್ತಿ ಹಕ್ಕುಪತ್ರದವರಗೆ 9 ಇಲಾಖೆಯ 79 ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ ‘ಜನಸೇವಕ’ ಕಾರ್ಯಕ್ರಮಕ್ಕೆ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಜನಸ್ಪಂದನ ವ್ಯಕ್ತವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಭಾನುವಾರ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಶವಂತಪುರದ ಅಟಲ್ ಉದ್ಯಾನ ಮತ್ತು ಕೋದಂಡರಾಮಪುರದ ಬಿಬಿಎಂಪಿ ಶಾಲೆ ಆವರಣದಲ್ಲಿ ಮುಂದುವರಿದ ‘ಜನಸೇವಕ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಲ್ಲೇಶ್ವರಂನಲ್ಲಿ ನ.1ರಿಂದಲೇ ಜನಸೇವಕ ಕಾರ್ಯಕ್ರಮವು ಚಾಲನೆ ಪಡೆದುಕೊಂಡಿದ್ದು, ಇತ್ತೀಚೆಗೆ ಕ್ಷೇತ್ರವ್ಯಾಪ್ತಿಯ ಎಲ್ಲ 7 ವಾರ್ಡುಗಳಿಗೂ ಇದನ್ನು ವಿಸ್ತರಿಸಲಾಗಿದೆ. ಇದರ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸಲು ಮನೆ ಮನೆಗೂ ಜನಸೇವಕ ಮಾರ್ಗದರ್ಶನ ಕೈಪಿಡಿಯನ್ನು ತಲುಪಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜನಸೇವಕ ಉಪಕ್ರಮದಡಿ ಜನರಿಗೆ ಅಗತ್ಯವಿರುವ ಸೇವೆಗಳು ಮನೆ ಬಾಗಿಲಿಗೆ ಬರುತ್ತಿವೆ. ನಿಗದಿತ ಸರಕಾರಿ ಶುಲ್ಕ ಮತ್ತು ಸೇವಾಶುಲ್ಕವನ್ನು ಡಿಜಿಟಲ್ ಪಾವತಿ ಮಾಡಿದರೆ ಸೇವೆಗಳು ನಿಗದಿತ ದಿನಗಳಲ್ಲಿ ನಿರಾಯಾಸವಾಗಿ ಸಿಗಲಿವೆ. ಇದು ಸಾರ್ವಜನಿಕರಿಗೆ ತುಂಬಾ ಸಂತಸ ತಂದಿದೆ ಎಂದು ಅವರು ಹೇಳಿದರು.
ಜನಸೇವಕ ಕಾರ್ಯಕ್ರಮದಡಿ ಈಗ ಇರುವ ಸೇವೆಗಳ ಜತೆಗೆ ಮತ್ತಷ್ಟು ಸೇವೆಗಳನ್ನು ಸೇರಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಸಚಿವರು ನುಡಿದರು.
ಈ ಸಂದರ್ಭದಲ್ಲಿ ಅವರು ನೂರಾರು ಜನರಿಗೆ ಹಲವು ಸೇವೆಗಳನ್ನು ವಿತರಿಸಿ, ಪ್ರಮಾಣಪತ್ರಗಳನ್ನು ಪ್ರದಾನ ಮಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ