ಈಶ್ವರಪ್ಪಗೆ ಜಯಮಾಲ ನೀತಿ ಪಾಠ
Team Udayavani, Jun 15, 2017, 11:54 AM IST
ವಿಧಾನಪರಿಷತ್ತು: ಸದನದಲ್ಲಿ ರೈತರು, ಮಕ್ಕಳು, ಮಹಿಳೆಯರ ಬಗ್ಗೆ ಚರ್ಚೆ ನಡೆಯುವಾಗ ಘನತೆ ಗಾಂಭೀರ್ಯದೊಂದಿಗೆ ನಡೆದುಕೊಳ್ಳಬೇಕು.
ವೈಯುಕ್ತಿಕ ವಿಚಾರಗಳ ಬಗ್ಗೆ ಇಲ್ಲಿ ಮಾತನಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಸದಸ್ಯೆ ಜಯಮಾಲ ಅವರು ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ “ನೀತಿಪಾಠ’ ಹೇಳಿದ ಪ್ರಸಂಗ ಬುಧವಾರ ಮೇಲ್ಮನೆಯಲ್ಲಿ
ನಡೆಯಿತು.
ಬರದ ಮೇಲಿನ ಚರ್ಚೆಯಲ್ಲಿ ಬಿಜೆಪಿಯ ತಾರಾ ಅನೂರಾಧ ಮಾತನಾಡುತ್ತಿದ್ದ ವೇಳೆ ಮಾತು ಮುಕ್ತಾಯಗೊಳಿಸುವಂತೆ ಉಪಸಭಾಪತಿ ಮರಿತಿಬ್ಬೇಗೌಡ ಹೇಳಿದರು. ಇದಕ್ಕೆ ಈ ಸದನಲ್ಲಿ ನಾವು ಮಹಿಳೆಯರು ಇರೋದೇ ಕಡಿಮೆ, ಹಾಗಾಗಿ ನಮಗೆ ಮಾತನಾಡಲು ಹೆಚ್ಚಿನ ಅವಕಾಶ ಸಿಗಬೇಕು ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಕೆ.ಎಸ್. ಈಶ್ವರಪ್ಪ, ನಮ್ಮ ಮನೆಗಳಲ್ಲಿ ನಮ್ಮ-ನಮ್ಮ ಹೆಂಡತಿಯರದ್ದೇ ನಡೆಯುತ್ತದೆ. ಹಾಗೇನೆ ಈ ಮನೆಯಲ್ಲೂ (ವಿಧಾಪರಿಷತ್) ತಾರಾ, ಮೋಟಮ್ಮ ಅವರದ್ದೇ ನಡೆಯತ್ತದೆ ಅದಕ್ಕಾಗಿ ಅವಕಾಶ ಕೊಡಿ ಎಂದರಲ್ಲದೇ, ಅಸಭ್ಯ ಪದವೊಂದನ್ನು ಬಳಸಿದರು. ಈಶ್ವರಪ್ಪ ಬಳಸಿದ ಪದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಯಮಾಲ, ಸದನಲ್ಲಿ ರೈತರು, ಮಕ್ಕಳು ಹಾಗೂ ಮಹಿಳೆಯರ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಘನತೆ-ಗಾಂಭೀರ್ಯದೊಂದಿಗೆ ಮಾತನಾಡಬೇಕು.
ವೈಯುಕ್ತಿಕ ವಿಚಾರಗಳನ್ನು ಇಲ್ಲಿ ಪ್ರಸ್ತಾಪಿಸುವುದು ಸರಿಯಲ್ಲ ಎಂದು ಹೇಳುತ್ತ ತಮ್ಮ ಅಸಮಾಧಾನ ಹೊರಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!