ದೇಗುಲ ಪ್ರವೇಶ ಅಭಿಪ್ರಾಯ ಸ್ವಾಗತಿಸಿದ ಜಯಾಮಾಲ
Team Udayavani, Jul 19, 2018, 10:13 AM IST
ಬೆಂಗಳೂರು: “ಮಹಿಳೆಯರಿಗೆ ದೇವಸ್ಥಾನ ಪ್ರವೇಶ ನಿಷೇಧ ಅಸಂವಿಧಾನಿಕ’ ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯ ಸ್ವಾಗತಾರ್ಹ ಎಂದಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ.ಜಯಮಾಲಾ, ಮಹಿಳೆಗೆ ಸಮಾಜದಲ್ಲಿ ಅನ್ಯಾಯ ಆದಾಗಲೆಲ್ಲಾ, ನ್ಯಾಯಾಲಯದಿಂದ ಆಕೆಗೆ ನ್ಯಾಯ ಸಿಕ್ಕಿದೆ ಎಂದರು.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಅಭಿಪ್ರಾಯ, ಅಂತಿಮ ತೀರ್ಮಾನವೂ ಸಹ ಐತಿಹಾಸಿಕವಾಗಲಿದೆ ಎಂದು ನನಗೆ ವಿಶ್ವಾಸವಿದೆ. ಸಮಾಜದಲ್ಲಿ ಮಹಿಳೆಗೆ ಅನ್ಯಾಯವಾದಾಗ, ತಾರತಮ್ಯ ಆದಾಗ ನ್ಯಾಯಾಲಯ ಹೆಣ್ಣಿನ ಪರ ನಿಂತಿದೆ. ಕಾನೂನು ಮೂಲಕ ಆಕೆಗೆ ಜಯ ಸಿಕ್ಕಿದೆ. ಏಕೆಂದರೆ ನಮ್ಮ ಸಂವಿಧಾನ ಅಷ್ಟೊಂದು ಗಟ್ಟಿಯಾಗಿದೆ ಎಂದರು.
ಸಂವಿಧಾನ ಬರೆದವರು ಗಂಡಿಗೊಂದು ದೇವಸ್ಥಾನ, ಹೆಣ್ಣಿಗೊಂದು ದೇವರು ಎಂದು ಮಾಡಿಲ್ಲ. 1986ರಿಂದ 91ರವರೆಗೆ ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆ ಯರ ಪ್ರವೇಶಕ್ಕೆ ಅವಕಾಶವಿತ್ತು. 91ರಲ್ಲಿ ಏಕ ಸದಸ್ಯಪೀಠ ತೀರ್ಪು ನೀಡಿದ್ದರಿಂದ ಪ್ರವೇಶ ನಿಷೇಧಿಸಲಾಗಿತ್ತು. ಈಗ ಸುಪ್ರೀಂಕೋರ್ಟ್ನಲ್ಲಿ ನ್ಯಾಯ ಸಿಕ್ಕಿದೆ. ದೇವಸ್ಥಾನದ ವಿಚಾರದಲ್ಲಿ ಗಂಡು-ಹೆಣ್ಣು ಎಂಬ ತಾರತಮ್ಯ ಸರಿಯಲ್ಲ. ದೇವರ ದರ್ಶನದ ಬಗ್ಗೆ ಪುರಷರಿಗೆ ಎಷ್ಟು ತವಕ, ಭಕ್ತಿ ಇರುತ್ತದೋ, ಮಹಿಳೆಗೂ ಅಷ್ಟೇ ತವಕ ಮತ್ತು ಭಕ್ತಿ ಇರುತ್ತದೆ. ಹೆಣ್ಣಿರಲಿ, ಗಂಡಿರಲಿ ಎಲ್ಲ ಮನುಷ್ಯರು ದೇವರ ಮಕ್ಕಳು. ದೇವರ ಮತ್ತು ಭಕ್ತರ ನಡುವೆ ಕಾನೂನು-ನಿಯಮಗಳು ಅಲ್ಲ, ಭಕ್ತಿ ಮತ್ತು ನಂಬಿಕೆ ಇರುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…