ಇನ್ನೂ ಪ್ರಕಟವಾಗದ ಜೆಡಿಎಸ್‌ 3ನೇ ಪಟ್ಟಿ


Team Udayavani, Apr 24, 2018, 6:40 AM IST

JDS.jpg

ಬೆಂಗಳೂರು: ನಾಮಪತ್ರ ಸಲ್ಲಿಸಲು ಇನ್ನು ಒಂದೇ ದಿನ ಬಾಕಿ ಇದ್ದರೂ ಜೆಡಿಎಸ್‌ ಇನ್ನೂ 24 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸದೇ ಇರುವುದು ಆ ಕ್ಷೇತ್ರದ ಆಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಎಲ್ಲಾ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದ ಜೆಡಿಎಸ್‌ ನಂತರ ಬಿಎಸ್‌ಪಿ ಜತೆ ಹೊಂದಾಣಿಕೆ ಮಾಡಿಕೊಂಡು 20 ಕ್ಷೇತ್ರಗಳನ್ನು ಆ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು. ಪ್ರಸ್ತುತ 2 ಹಂತಗಳಲ್ಲಿ 180 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್‌ ಇನ್ನೂ 24 ಕ್ಷೇತ್ರಗಳ ಪಟ್ಟಿ ಪ್ರಕಟಿಸಬೇಕಿದೆ. ಈ ಪೈಕಿ ಬೊಮ್ಮನಹಳ್ಳಿಯಿಂದ ನಿರ್ಮಾಪಕ ಕೆ.ಮಂಜು ಮಂಗಳವಾರ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿದಿದೆ.

ಈ ಪೈಕಿ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಘೋಷಣೆಯಾಗದೇ ಇದ್ದರೂ ಕೆಲವರಿಗೆ ನಾಮಪತ್ರ ಸಲ್ಲಿಸಲು ಸೂಚಿಸಲಾಗಿದೆ. ನಾಮಪತ್ರ ಸಲ್ಲಿಸಲು ಮಂಗಳವಾರ ಮಧ್ಯಾಹ್ನದವರೆಗೆ ಕಾಲಾವಕಾಶವಿದ್ದು, ಬುಧವಾರ ಮಧ್ಯಾಹ್ನದೊಳಗೆ ಬಿ ಫಾರಂ ಸಲ್ಲಿಸಿದರೆ ಸಾಕು. ಅಷ್ಟರೊಳಗೆ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿ ಬಿ ಫಾರಂ ವಿತರಿಸಲು ಅವಕಾಶ ಇದೆ. ಆದರೂ ಕೆಲವೆಡೆ ಅಭ್ಯರ್ಥಿಗಳನ್ನು ಹಾಕುವುದು ಅನುಮಾನ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಬಿಎಸ್‌ಪಿಗೆ 19 ಕ್ಷೇತ್ರ: ಒಪ್ಪಂದದಂತೆ ಬಿಎಸ್‌ಪಿಗೆ 20 ಕ್ಷೇತ್ರ ಬಿಟ್ಟುಕೊಟ್ಟಿದ್ದ ಜೆಡಿಎಸ್‌ ಅದರಲ್ಲಿ 1 ಕ್ಷೇತ್ರವನ್ನು ವಾಪಸ್‌ ಪಡೆದಿದೆ. ಕಲಬುರಗಿ ಗ್ರಾಮಾಂತರದಲ್ಲಿ ಬಿಜೆಪಿ ಟಿಕೆಟ್‌ ಸಿಗದೆ ಜೆಡಿಎಸ್‌ ಸೇರಿದ ಮಾಜಿ ಸಚಿವ ರೇವೂ ನಾಯಕ್‌ ಬೆಳಮಗಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಅಲ್ಲಿ ಈಗಾಗಲೇ ಘೋಷಣೆಯಾಗಿರುವ ಬಿಎಸ್‌ಪಿ ಅಭ್ಯರ್ಥಿ ಸೂರ್ಯಕಾಂತ ನಿಂಬಾಳ್ಕರ್‌ ಕಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.