ಜೆಡಿಎಸ್‌, ಬಿಎಸ್‌ಪಿ ಮೈತ್ರಿಯಿಂದ ಗೆಲುವು


Team Udayavani, May 17, 2018, 10:14 AM IST

blore-4.jpg

ದೇವನಹಳ್ಳಿ: ಬಹುಜನ ಸಮಾಜ ಪಾರ್ಟಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಚುನಾವಣೆ ಎದುರಿಸಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಎನ್‌. ಮಹೇಶ್‌ ಗೆಲುವು ಸಾಧಿಸಿರುವುದರಿಂದ ಬಿಎಸ್‌ಪಿ ಕಾರ್ಯಕರ್ತರಲ್ಲಿ ಸಂತಸ ಉಂಟಾಗಿದೆ ಎಂದು ರಾಜ್ಯ ಬಹುಜನ ಸಮಾಜ ಪಾರ್ಟಿ ಕಾರ್ಯದರ್ಶಿ ನಂದಿಗುಂದ ಪಿ.ವೆಂಕಟೇಶ್‌ ಹರ್ಷ ವ್ಯಕ್ತಪಡಿಸಿದರು.

ನಗರದ ಟಿಪ್ಪು ಸುಲ್ತಾನ್‌ ರಸ್ತೆಯಲ್ಲಿರುವ ಬಿಎಸ್‌ಪಿ ಕಚೇರಿಯಲ್ಲಿ ತಾಲೂಕು ಬಹುಜನ ಸಮಾಜ ಪಾರ್ಟಿ ವತಿಯಿಂದ ನೂತನ ಶಾಸಕ ನಿಸರ್ಗ ಎಲ್‌.ಎನ್‌.ನಾರಾಯಣಸ್ವಾಮಿ ಅವರನ್ನು ಅಭಿನಂದಿಸಿ ಮಾತನಾಡಿದರು. 

ಬಿಎಸ್‌ಪಿ ಮತ್ತು ಜೆಡಿಎಸ್‌ ಮೈತ್ರಿ ಬಗ್ಗೆ ರಾಷ್ಟ್ರೀಯಾಧ್ಯಕ್ಷೆ ಮಾಯಾವತಿಯವರ ಆದೇಶದಂತೆ ದೇವನಹಳ್ಳಿ ತಾಲೂಕಿನಲ್ಲಿ ಜೆಡಿಎಸ್‌ನ್ನು ಬೆಂಬಲಿಸುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಕರ್ತರು ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಪ್ರಚಾರ ಮಾಡಿದ್ದರು. ಜೆಡಿಎಸ್‌ ಅಭ್ಯರ್ಥಿ ನಿಸರ್ಗ ಎಲ್‌.ಎನ್‌.ನಾರಾಯಣ ಸ್ವಾಮಿ ಗೆದ್ದಿರುವುದರಿಂದ ಜೆಡಿಎಸ್‌ ಸಹಕಾರ ಅಗತ್ಯವಿರುತ್ತದೆ. ಮುಂದಿನ ದಿನಗಳಲ್ಲೂ ಮೈತ್ರಿ ಮುಂದುವರಿಸಿ ಗೆಲುವು ಸಾಧಿಸಲಾಗುವುದು ಎಂದರು.

ಟೊಂಕಕಟ್ಟಿ ಮತಯಾಚನೆ: ನೂತನ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಬಿಎಸ್‌ಪಿ ಸಹೋದರರು ನಮ್ಮ ಕಾರ್ಯಕರ್ತರ ಜೊತೆಗೂಡಿ ನಮ್ಮ ಗೆಲುವಿಗೆ ಶ್ರಮಿಸಿದ್ದಾರೆ. ನನ್ನ ಗೆಲುವಿಗೆ ಪಕ್ಷಾತೀತವಾಗಿ ಕಾರ್ಯಕರ್ತರು ಮತ್ತು ಮುಖಂಡರು ಶ್ರಮಿಸಿದ್ದಾರೆ. ಪ್ರತಿಯೊಂದು ಘಟಕದ ಪದಾಧಿಕಾರಿಗಳು ಗೆಲುವಿಗಾಗಿ ಹಗಲಿರುಳು ಟೊಂಕಕಟ್ಟಿ ಮತಯಾಚನೆ ಮಾಡಿದ್ದಾರೆ ಎಂದು ಹೇಳಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಶ್ರೀನಿವಾಸ್‌ ಮಾತನಾಡಿ, ರಾಜ್ಯದಲ್ಲಿ ಫ‌ಲಿತಾಂಶ ಏನೇ ಇರಲೀ ನಿರಂತರ ಎರಡನೇ ಬಾರಿಗೆ ಜೆಡಿಎಸ್‌ ಗೆಲುವು ಸಾಧಿಸಲು ಕಾರ್ಯಕರ್ತರು ಕಾರಣ ಎಂಬುವುದನ್ನು ಮರೆಯುವಂತಿಲ್ಲ. ಕಳೆದ ಬಾರಿಗಿಂತ ಈ ಬಾರಿ ಅತೀ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಬಿಎಸ್‌ಪಿ ಅಧ್ಯಕ್ಷ ಮುನಿಕೃಷ್ಣ, ತಾಲೂಕು ಬಿಎಸ್‌ಪಿ ಅಧ್ಯಕ್ಷ ನರಸಿಂಹಮೂರ್ತಿ, ತಾಲೂಕು ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಪುರಸಭಾ ಸದಸ್ಯ ಬೇಕರಿ ಮಂಜುನಾಥ್‌, ಜಿಲ್ಲಾ ಬಿಎಸ್‌ಪಿ ಉಪಾಧ್ಯಕ್ಷ ಸಿ.ಮುನಿಯಪ್ಪ, ಬಂಗಾರಪ್ಪ, ವೆಂಕಟೇಶ್‌, ವೆಂಕಟಸ್ವಾಮಿ, ನರಸಿಂಹರಾಜು, ಜಿಲ್ಲಾ ಸಂಯೋಜಕ ತಿಮ್ಮರಾಯಪ್ಪ, ಜಿಲ್ಲಾ ಖಜಾಂಚಿ ನರಸಿಂಹ ಮೂರ್ತಿ, ತಾಲೂಕು ಉಪಾಧ್ಯಕ್ಷ ಮುನಿರಾಜು,  ರಾಮಾಂಜಿನಪ್ಪ, ಬಿ.ವಿ. ಮಂಜುನಾಥ್‌, ಮುಖಂಡ ಡಿ.ಸಿ.ನಾರಾಯಣಸ್ವಾಮಿ, ಶಿವಪ್ಪ, ನಾರಾಯಣಪ್ಪ, ಎಚ್‌.ಮಂಜುನಾಥ್‌, ಮುನಿರಾಜ್‌ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.