ಜೆಡಿಎಸ್‌ ಶಾಸಕರಿಗೆ 25 ಕೋ. ರೂ. ಆಫ‌ರ್‌


Team Udayavani, Feb 9, 2019, 12:30 AM IST

8bnp-24.jpg

ಬೆಂಗಳೂರು: ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ನೇರವಾಗಿಯೇ ಆಪರೇಷನ್‌ ಕಮಲಕ್ಕೆ ಕೈಹಾಕಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಆಡಿಯೋ ಬಿಡುಗಡೆ ಮಾಡಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪಗುರುವಾರ ದೇವದುರ್ಗ ಸರಕಾರಿ ಪ್ರವಾಸಿ ಬಂಗಲೆಯಲ್ಲಿ ಕುಳಿತು ಗುರುಮಿಠ್ಕಲ್ ಜೆಡಿಎಸ್‌ ಶಾಸಕ ನಾಗನ ಗೌಡ ಕಂದಕೂರ ಅವರ ಪುತ್ರ ಶರಣ ಗೌಡ ಕಂದಕೂರ ಅವರಿಗೆ ದೂರವಾಣಿ ಮುಖಾಂತರ ಮಾತನಾಡಿ, 25 ಕೋ. ರೂ. , ಯಾದಗಿರಿ ಜಿಲ್ಲಾ ಉಸ್ತುವಾರಿ ಮತ್ತು ಪ್ರಮುಖ ಖಾತೆ ನೀಡಲಾಗುವುದು ಎಂದು ಆಮಿಷ ಒಡ್ಡಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು

ಬಿಜೆಪಿಗೆ ಬರಲು ಮುಂಬಯಿಗೆ ಹೋದರೆ ಅಲ್ಲಿ ಬಿ.ವೈ. ವಿಜಯೇಂದ್ರ ಅವರು ಹಣ ನೀಡುತ್ತಾರೆ ಎಂದು ಯಡಿಯೂರಪ್ಪಹೇಳಿದ್ದಾರೆ. ಯಡಿಯೂರಪ್ಪ ಅವರು ನೇರವಾಗಿ ರಾಜ್ಯದ ಸಮ್ಮಿಶ್ರ ಸರಕಾರವನ್ನು ಪತನಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾದಂತಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕುಮ್ಮಕ್ಕಿದೆ, ಪ್ರಧಾನಿ ಮೋದಿಯವರು ದ್ವಿಮುಖ ನೀತಿ ಹೊಂದಿದ್ದಾರೆ. ಪ್ರಜಾಪ್ರಭುತ್ವ ಉಳಿಸುವ ಬಗ್ಗೆ ಜನರ ಮುಂದೆ ಮಾತನಾಡುವ ಅವರ ನಿಜವಾದ ಬಣ್ಣವನ್ನು ರಾಜ್ಯ ಬಿಜೆಪಿ ನಾಯಕರೇ ಬಯಲು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ದ್ವಿಮುಖ ಬಣ್ಣದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾವಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇÊಗೌಡ ಮತ್ತು ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಪ್ರಧಾನಿ ಮೋದಿಯವರು ಈಗಲಾದರೂ ತಮ್ಮ ನಿಜವಾದ ಮುಖವನ್ನು ತೋರಿಸಬೇಕು. ಬಿಜೆಪಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ನಾಶ ಮಾಡಲು ಹೊರಟಿದ್ದಾರೆ. ಇವರ ಪ್ರಯತ್ನದ ಹಿಂದೆ ಯಾರಿದ್ದಾರೆ ಎಂದು ಪ್ರಧಾನಿ ಮೋದಿ ಉತ್ತರಿಸಬೇಕು.

ಬಿಜೆಪಿ ನಾಯಕರು ಆಪರೇಷನ್‌ ಕಮಲ ಕಾರ್ಯಾಚರಣೆ ಬಗ್ಗೆ ದಾಖಲೆ ತೋರಿಸಿ ಎಂದು ಸವಾಲು ಹಾಕಿದ್ದರು. ಹೀಗಾಗಿ, ನಾನೇ ಶರಣ ಗೌಡ ಕಂದಕೂರ ಅವರಿಗೆ ಆಡಿಯೋ ಮಾಡಿಕೊಳ್ಳಲು ಹೇಳಿದ್ದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.