ಬೆಂಗಳೂರು: ವಿವಾಹ ಪ್ರಸ್ತಾಪ ನಿರಾಕರಿಸಿದ ವಿಚ್ಛೇದಿತೆಯ ಮೇಲೆ ಆ್ಯಸಿಡ್ ದಾಳಿ
ಮೂವರು ಮಕ್ಕಳ ತಾಯಿಯನ್ನು ಪೀಡಿಸುತ್ತಿದ್ದ ಕ್ರೂರಿಯ ಬಂಧನ
Team Udayavani, Jun 10, 2022, 4:12 PM IST
ಬೆಂಗಳೂರು: ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕಾಗಿ ಮಹಿಳೆಯ ಮೇಲೆ ಭಗ್ನ ಪ್ರೇಮಿಯೊಬ್ಬ ಆ್ಯಸಿಡ್ ಎರಚಿದ ಘಟನೆ ಶುಕ್ರವಾರ ಬೆಳಗ್ಗೆ ನಗರದ ಜೆಪಿ ನಗರದ ಸಾರಕ್ಕಿ ರಸ್ತೆ ಜಂಕ್ಷನ್ನಲ್ಲಿ ನಡೆದಿದೆ.
ದಾಳಿಯಿಂದ 32 ವರ್ಷದ ಮಹಿಳೆಯ ಬಲಗಣ್ಣಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಅಹ್ಮದ್ (36) ಎಂಬಾತನನ್ನು ಬಂಧಿಸಲಾಗಿದೆ.
ವಿಚ್ಛೇದನ ಪಡೆದಿರುವ ಮಹಿಳೆ ಮೂವರು ಮಕ್ಕಳೊಂದಿಗೆ ವಾಸವಾಗಿದ್ದರು. ಇಬ್ಬರು ಅಗರಬತ್ತಿ ಉತ್ಪನ್ನಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಮೂರು ವರ್ಷಗಳಿಂದ ಪರಸ್ಪರ ಪರಿಚಿತರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಕಳೆದ ಹಲವು ವಾರಗಳಿಂದ ಅಹ್ಮದ್ ತನ್ನದೇ ಸಮುದಾಯದ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ.ಆದಾಗ್ಯೂ, ವಳು ಪದೇ ಪದೇ ಅವನ ಮನವಿಯನ್ನು ತಿರಸ್ಕರಿಸಿದ್ದಳು. ಶುಕ್ರವಾರ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ.
ಎರಡು ತಿಂಗಳ ಹಿಂದೆ ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ದಾಳಿ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ. ನಂತರ ಆರೋಪಿಯನ್ನು ತಮಿಳುನಾಡಿನಿಂದ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ