ಅಪರಾಧ ತಗ್ಗಿಸಲು ಜಂಟಿ ಕಾರ್ಯಾಚರಣೆ
ನಗರದಲ್ಲಿ ಶನಿವಾರ ರಾತ್ರಿ 11ರಿಂದ ಮುಂಜಾನೆ ನಾಲ್ಕು ಗಂಟೆವರೆಗೆ ವಾಹನಗಳ ತಪಾಸಣೆ
Team Udayavani, Jul 29, 2019, 7:52 AM IST
ಅನುಮಾನಾಸ್ಪದ ವರ್ತನೆ ತೋರಿದ ಕೆಲವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಯಿತು.
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ನಗರ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಪೊಲೀಸರು ಹಾಗೂ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಜಂಟಿಯಾಗಿ ಶನಿವಾರ ರಾತ್ರಿಯಿಡಿ ವಿಶೇಷ ಕಾರ್ಯಾಚರಣೆ ನಡೆಸಿದರು.
ನಗರ ಪೊಲೀಸ್ ಆಯುಕ್ತ ಆಲೋಕ್ ಕುಮಾರ್, ಸಿಸಿಬಿ, ಸಂಚಾರ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಎಲ್ಲ ಡಿಸಿಪಿ, ಎಸಿಪಿ ಹಾಗೂ ಇನ್ಸ್ಪೆಕ್ಟರ್ಗಳು ಸೇರಿ ಎಲ್ಲ ಹಂತದ ಸಿಬ್ಬಂದಿ ಶನಿವಾರ ರಾತ್ರಿ 11 ಗಂಟೆಯಿಂದ ಮುಂಜಾನೆ ನಾಲ್ಕು ಗಂಟೆವರೆಗೂ ತಮ್ಮ ವ್ಯಾಪ್ತಿಗಳಲ್ಲಿ ಗಸ್ತು ತಿರುಗಿದರು. ನಗರದ ಎಲ್ಲ ಪ್ರಮುಖ ರಸ್ತೆಗಳು, ಜಂಕ್ಷನ್ಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ವಾಹನಗಳ ತಪಾಸಣೆ ನಡೆಸಿದರು.
ವಿಶೇಷವಾಗಿ ಹೊಂಡಾ ಆಕ್ಟಿವಾ, ಪಲ್ಸರ್ ಬೈಕ್ಗಳನ್ನು ತಡೆದು ತಪಾಸಣೆ ನಡೆಸಿದರು. ಈ ವೇಳೆ ಅನುಮಾನಾಸ್ಪದವಾಗಿ ವರ್ತಿಸಿದ ವ್ಯಕ್ತಿಗಳು ಹಾಗೂ ಅವರ ವಾಹನಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯಲಾಯಿತು. ನಂತರ ಅವರ ಪೂರ್ವಾಪರ ವಿಚಾರಿಸಿ ವಾಹನಗಳ ಮೂಲ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದರು. ಇದರೊಂದಿಗೆ ನಗರದಲ್ಲಿರುವ ನೂರಾರು ಹೊಯ್ಸಳ, ಚಿತಾ ಹಾಗೂ ಇತರೆ ವಾಹನಗಳು ಎಲ್ಲೆಡೆ ಗಸ್ತು ತಿರುಗುತ್ತಿದ್ದವು. ಈ ವಿಶೇಷ ಕಾರ್ಯಾಚರಣೆ ವೇಳೆ 499ಕ್ಕೂ ಹೆಚ್ಚು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ, ಸುಮಾರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸರು ಹೇಳಿದರು.
120ಕ್ಕೂ ಹೆಚ್ಚು ಕಡೆ ನಾಕಾಬಂದಿ: ಪ್ರತಿ ಶನಿವಾರ ಎಲ್ಲ ವಲಯಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ. ಆದರೆ, ಈ ಬಾರಿ ನಗರದೆಲ್ಲೆಡೆ ಸುಮಾರು 120ಕ್ಕೂ ಹೆಚ್ಚು ಪ್ರಮುಖ ಪ್ರದೇಶಗಳಲ್ಲಿ ನಾಕಾಬಂದಿ ಹಾಕಲಾಯಿತು. ನಗರ ಪೊಲೀಸ್ ಆಯುಕ್ತ ಆಲೋಕ್ ಕುಮಾರ್ ಎಲ್ಲ ನಾಕಾಬಂದಿ ಸ್ಥಳಗಳಿಗೆ ಖುದ್ದು ಭೇಟಿ ನೀಡಿ, ಅಧಿಕಾರಗಳ ಜತೆ ಕಾರ್ಯಾಚರಣೆ ಬಗ್ಗೆ ಚರ್ಚಿಸಿದರು. ಈ ವೇಳೆ ಕೆಲ ವಾಹನ ಸವಾರರರನ್ನು ಸ್ವತಃ ಆಯುಕ್ತರೇ ವಿಚಾರಣೆ ನಡೆಸಿದರು.
ಸರ, ವಾಹನ ಕಳ್ಳರ ಮೇಲೆ ನಿಗಾ: ಕಳವು ಮಾಡಿದ ವಾಹನಗಳಿಂದಲೇ ಆರೋಪಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಪದೇ ಪದೆ ಅಪರಾಧ ಪ್ರಕರಣಗಳಲ್ಲಿ ತೊಡಗುವ, ರಾತ್ರಿ ವೇಳೆ ಮಾತ್ರ ಸುಲಿಗೆ, ದರೋಡೆ ಮುಂತಾದ ಕೃತ್ಯಗಳನ್ನು ನಡೆಸುವವರಿಗೆ ಈ ಕಾರ್ಯಾಚರಣೆ ಮೂಲಕ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್