ಮೆಡಿಕಲ್‌ ಟೂರಿಸಂ ಪ್ರದೇಶವಾಗಿ ಮಂಗಳೂರು


Team Udayavani, Mar 4, 2018, 6:35 AM IST

Medical-Tourism-in-Mangalor.jpg

ಬೆಂಗಳೂರು: “ಆರೋಗ್ಯಕ್ಕೆ ಗಡಿರೇಖೆ ಇಲ್ಲ’ ಎಂಬ ಕಲ್ಪನೆಯಲ್ಲಿ ನಗರದಲ್ಲಿ ಆರಂಭವಾಗಿದ್ದ ಎರಡು ದಿನಗಳ ಇಂಟರ್‌ ನ್ಯಾಷನಲ್‌ ಮೆಡಿಕಲ್‌ ಟೂರಿಸಂ ಕುರಿತ ಸಮ್ಮೇಳನಕ್ಕೆ ಶನಿವಾರ ತೆರೆಬಿತ್ತು. ಕಡಲ ನಗರಿ ಮಂಗಳೂರನ್ನು ಮೆಡಿಕಲ್‌ ಟೂರಿಸಂ ಪ್ರದೇಶವನ್ನಾಗಿ ಅಭಿವೃದ್ದಿ ಪಡಿಸುವುದು ಸೇರಿದಂತೆ ಕೆಲವು ಪ್ರಮುಖ ನಿರ್ಣಯಗಳನ್ನು ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು.

ಮೆಡಿಕಲ್‌ ಟೂರಿಸಂ ಕುರಿತ 3ನೇ ಸಮ್ಮೇಳನ ಇದಾಗಿದ್ದು ಕೆನಡಾ, ಕೀನ್ಯಾ, ಸೋಮಾಲಿಯಾ, ಜಿಂಬಾಬ್ವೆ, ಘಾನ, ವಿಯೆಟ್ನಾಂ, ಐವರಿ ಕೋಸ್ಟ್‌, ಮೊಜಾಂಬಿಕ್‌ ಸೇರಿದಂತೆ ಸುಮಾರು 20 ದೇಶಗಳ 400 ಮಂದಿ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ನಗರದ ಖಾಸಗಿ ಹೋಟೆಲ್‌ನಲ್ಲಿ  ಶುಕ್ರವಾರ ಆರಂಭವಾಗಿದ್ದ ಈ ಆರೋಗ್ಯ ಸಮ್ಮೇಳನದಲ್ಲಿ ಆರೋಗ್ಯಕ್ಷೇತ್ರಕ್ಕೆ ಸಂಬಂಧಿಸಿದ ಹಲವು ವಿಚಾರಗೋಷ್ಠಿಗಳು ನಡೆದವು. ಅಲ್ಲದೆ ಕರ್ನಾಟಕದಲ್ಲಿ ಸುಲಭವಾಗಿ ದೊರೆಯುತ್ತಿರುವ ವಿವಿಧ ಶಸ್ತ್ರ ಚಿಕಿತ್ಸೆಗಳ ಬಗ್ಗೆ ಸಮ್ಮೇಳನದಲ್ಲಿ ಬೆಳಕು ಚೆಲ್ಲಲಾಯಿತು. ಆಯುರ್ವೇದ ಚಿಕಿತ್ಸೆಯ ಬಗ್ಗೆ ವಿಚಾರ ಗೋಷ್ಠಿ ನಡೆಯಿತು.

ಟೆಲಿಮೆಡಿಸಿನ್‌ ಬಗ್ಗೆ ಮಾತನಾಡಿದ ಹೈದ್ರಾಬಾದ್‌ನ ಡೆಕನ್‌ ಆಸ್ಪತ್ರೆಯ ವೈದ್ಯ ಡಾ.ಕೆ.ಎಸ್‌.ನಾಯಕ್‌, ಅಂತರ್ಜಾಲ ತಾಣದ ಬಳಕೆ ಮತ್ತು ಅದರ ಅಪಾಯಗಳ ಬಗ್ಗೆ ತಿಳಿ ಹೇಳಿದರು. ಇತ್ತೀಚಿನ ದಿನಗಳಲ್ಲಿ ಆರೋಗ್ಯಕ್ಕೆ ಸಬಂಧಿಸಿದ ದತ್ತಾಂಶಗಳು ಕೂಡ ಕಾಣೆಯಾಗುತ್ತಿವೆ ಭಷ್ಯತ್ತಿನ ದೃಷ್ಟಿಯಿಂದ ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಆರೋಗ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರು ಎಂದಿಗೂ ಸಾರ್ವಜನಿಕ ಸ್ಥಳಗಳಲ್ಲಿ ದೊರೆಯುವ ವೈಫೈ ಬಳಕೆ ಮಾಡದಂತೆ ಮತ್ತು ಆರೋಗ್ಯ ಸಂಬಂಧಿಸಿದ ದತ್ತಾಂಶಗಳನ್ನು ಹಂಚಿಕೊಳ್ಳುವಾಗ ಇತರರ ಮೊಬೈಲ್‌ ಬಳಕೆ ಮಾಡಿ ಹಂಚಿಕೊಳ್ಳದಂತೆ ಮನವಿ ಮಾಡಿದರು.

ಮಂಗಳೂರಿನ ಎನೆಪೊಯಾ ಆಸ್ಪತ್ರೆಯ ವೈದ್ಯ ಶಕ್ತಿವೇಲು ಕುಮಾರೇಸನ್‌ ಮಾತನಾಡಿ, ಕಡಲ ಕಿನಾರೆ ಮಂಗಳೂರು ದಕ್ಷಿಣ ಭಾರತದ ದುಬೈ ನಗರಿ ಎಂದು ಬಣ್ಣಿಸಿಕೊಂಡಿದೆ. ಕ್ಲೀನ್‌ ಸಿಟಿ ಎಂಬ ಹಿರಿಮೆಯು ಕೂಡ ಇದರದ್ದಾಗಿದ್ದು ಆರೋಗ್ಯಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ಹೆಸರಾಂತ ಆಸ್ಪತ್ರೆಗಳು ಇಲ್ಲಿದ್ದು ಕಡಿಮೆ ವೆಚ್ಚದಲ್ಲಿ ಹಲವು ವೈದ್ಯಕೀಯ ಚಿಕಿತ್ಸೆ ದೊರೆಯುತ್ತಿದೆ. ಎನೆಪೊಯ ಆಸ್ಪತ್ರೆ, ಬೈಪಾಸ್‌ ಸರ್ಜರಿ ಸೇರಿದಂತೆ ಹಲವು ಚಿಕಿತ್ಸೆಗಳನ್ನು ಕಡಿಮೆ ವೆಚ್ಚದಲ್ಲಿ ನೀಡುತ್ತಾ ಆರೋಗ್ಯ ಸೇವೆ ಮಾಡುತ್ತಿದೆ ಎಂದರು.

ಮಂಗಳೂರಿನ ಯೇನಪೊಯ ಆಸ್ಪತ್ರೆಯ  ಡಾ| ಮೊಹಮ್ಮದ್‌ ತಹೀರ್‌ ಸಹಿತ ಹಲವು ವೈದ್ಯರು ಆರೋಗ್ಯಕ್ಕೆ ಸಂಬಂಧಿಸಿದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದರು. ಮಂಗಳೂರು ಎಲ್ಲ ರೀತಿಯಲ್ಲೂ ಬೆಳವಣಿಗೆಗೆ ಹೊಂದುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರನ್ನು ಮೆಡಿಕಲ್‌ ಟೂರಿಸಂ ಪ್ರದೇಶವನ್ನಾಗಿ ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ.  ಸಮ್ಮೇಳನದಲ್ಲಿ ಪಾಲ್ಗೊಂಡಿರುವ ನಿಯೋಗ ರವಿವಾರ ಮಂಗಳೂರಿಗೆ ಭೇಟಿ ನೀಡಲಿದೆ ಎಂದು ಕಾರ್ಯಕ್ರಮದ ಸಂಯೋಜಕಿ ಮತ್ತು ಸಿಐಎ ಗ್ಲೋಬಲ್‌  ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕಿ ಅನಿತಾ ನಿರಂಜನ್‌ ತಿಳಿಸಿದರು.

ಟಾಪ್ ನ್ಯೂಸ್

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

MUST WATCH

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

ಹೊಸ ಸೇರ್ಪಡೆ

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.