ಅರಣ್ಯ ಇಲಾಖೆ ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್
Team Udayavani, Nov 16, 2018, 11:38 AM IST
ಬೆಂಗಳೂರು: ಗುತ್ತಿಗೆ ನೌಕರರೊಬ್ಬರಿಗೆ ಸಿಗಬೇಕಾದ ನ್ಯಾಯಬದ್ಧ ಬಾಕಿಯನ್ನು ಪಾವತಿಸಬೇಕು ಹಾಗೂ ಅವರಿಗೆ ಪುನಃ ಕೆಲಸ ನೀಡಬೇಕು ಎಂಬ ಆದೇಶ ಪಾಲಿಸದ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹೈಕೋರ್ಟ್ ಗುರುವಾರ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತು.
ಈ ಕುರಿತಂತೆ ತುಮಕೂರು ಜಿಲ್ಲೆಯ ಗುಬ್ಬಿಯ ನಿವಾಸಿ ಚಿಕ್ಕಹನುಂತರಾಯ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾ. ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಎಚ್.ಪಿ. ಸಂದೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರಣ್ಯ ಇಲಾಖೆಯ ಕಾರ್ಯದರ್ಶಿ, ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಅರಣ್ಯ ಇಲಾಖೆಯಲ್ಲಿ ಸುಮಾರು 18 ವರ್ಷ ಗುತ್ತಿಗೆ ಆಧಾರದ ಮೇಲೆ ವಾಚ್ಮನ್ ಆಗಿ ಕೆಲಸ ಮಾಡಿದಾತನಿಗೆ ನ್ಯಾಯಬದ್ಧವಾಗಿ ಬಾಕಿ ಪಾವತಿಸಬೇಕು ಮತ್ತು ಅವರನ್ನು ಮತ್ತೆ ಕೆಲಸ ನೀಡಬೇಕು ಎಂಬ ಹೈಕೋರ್ಟ್ನ ಏಕಸದಸ್ಯಪೀಠ ಈ ಹಿಂದೆ ಆದೇಶ ನೀಡಿತ್ತು. ಅದನ್ನು ಪಾಲಿಸದ ಕಾರಣಕ್ಕೆ ಇದೀಗ ವಿಭಾಗೀಯ ನ್ಯಾಯಪೀಠ ಸಂಬಂಧಪಟ್ಟ ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 1990ರಿಂದ 2008ರವರೆಗೆ ಚಿಕ್ಕಹನುಮಂತರಾಯ ಅವರು ಗುತ್ತಿಗೆ ಆಧಾರದ ಮೇಲೆ ವಾಚ್ಮನ್ ಆಗಿ ಗುಬ್ಬಿ ಸಾಮಾಜಿಕ ಅರಣ್ಯದಲ್ಲಿ , ಚಿಕ್ಕಮಗಳೂರು ಹಾಗೂ ತಿಪಟೂರಿನಲ್ಲಿ ಕೆಲಸ ಮಾಡಿದ್ದಾರೆ. 2006ರಲ್ಲಿ ಇಲಾಖೆಯಲ್ಲಿ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ ವಾಚ್ಮನ್ಗಳ ಸೇವೆ ಕಾಯಂ ಮಾಡಲಾಗಿತ್ತು. ಆದರೆ ಅರ್ಜಿದಾರರ ಸೇವೆ ಕಾಯಂಗೊಳಿಸಲಿಲ್ಲ ಎಂದರು.
ಆ ಕ್ರಮ ಪ್ರಶ್ನಿಸಿ ಕಾರ್ಮಿಕ ನ್ಯಾಯಾಲಯದ ಮೊರೆ ಹೋದಾಗ ನ್ಯಾಯಾಲಯ ಅರ್ಜಿದಾರರ ಪರ ತೀರ್ಪು ನೀಡಿತ್ತು. ಆನಂತರ ಹೈಕೋರ್ಟ್ ಕೂಡ 2017ರ ಜ.25ರಂದು ಅರ್ಜಿದಾರರಿಗೆ ಕೂಡಲೇ ಶೇ.50ರಷ್ಟು ಹಿಂಬಾಕಿ ನೀಡಬೇಕು ಮತ್ತು ಸೇವೆಗೆ ತೆಗೆದುಕೊಳ್ಳಬೇಕು ಎಂದು ಮಧ್ಯಂತರ ಆದೇಶ ನೀಡಿತ್ತು. ಆ ಆದೇಶವನ್ನೂ ಸಹ ಇಲಾಖೆ ಪಾಲನೆ ಮಾಡಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ