ರಾಜ್ಯಕ್ಕೂ ಕಾಲಿಟ್ಟ ಜುಂದ್‌-ಅಲ್‌ -ಅಕ್ಸಾ


Team Udayavani, Jan 11, 2019, 12:30 AM IST

terrorist-ss.jpg

ಬೆಂಗಳೂರು: ಸಿರಿಯಾದ ಜುಂದ್‌ -ಅಲ್‌ – ಅಕ್ಸಾ  ಅಥವಾ ಅಲ್‌- ನುಸ್ರಾ – ಫ್ರಂಟ್‌ ಉಗ್ರಸಂಘಟನೆ ಸೇರಿದ್ದಾರೆ ಎನ್ನಲಾದ ಕೇರಳ ಹಾಗೂ ರಾಜ್ಯದ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಭದ್ರತಾ ತನಿಖಾ ದಳ( ಎನ್‌ಐಎ) ತನಿಖೆ ಚುರುಕುಗೊಳಿಸಿದ ಬೆನ್ನಲ್ಲೇ, ರಾಜ್ಯದಲ್ಲಿ ಉಗ್ರ ಸಂಘಟನೆ ಬೇರುಗಳಿರುವುದಕ್ಕೆ ಪುಷ್ಠಿ ದೊರೆತಂತಾಗಿದೆ.

ಉದ್ಯೋಗ ಸಲುವಾಗಿ ಕತಾರ್‌ ಸೇರಿದ ಯುವಕರು ಬಳಿಕ ಐಸಿಸ್‌ ಹಾಗೂ ಜುಂದ್‌ ಅಲ್‌ ಅಕ್ಸಾ ಸಂಘಟನೆಯಲ್ಲಿ ಸಕ್ರಿಯವಾಗಿರುವ ಹಲವರ ಸಂಪರ್ಕಕ್ಕೆ ಬಂದಿದ್ದು, ಅಂತಿಮವಾಗಿ 2013ರಲ್ಲಿ ಸಿರಿಯಾ ಪ್ರವೇಶಿಸಿ  ಜುಂದ್‌ ಅಲ್‌ ಅಕ್ಸಾ ಸಂಘಟನೆಗೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಯವಕರ ಹೆಸರನ್ನು ಎನ್‌ಐಎ ಬಹಿರಂಗಪಡಿಸದಿದ್ದರೂ, ಕರಾವಳಿ ಭಾಗದ ಕೆಲವು ಯುವಕರೇ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

2016ರಲ್ಲಿ ಐಸಿಸ್‌ ಸಂಘಟನೆ ಸೇರಲು ಸಜ್ಜಾಗಿದ್ದ ಆರು ಮಂದಿ ಆರೋಪಿಗಳನ್ನು ಎನ್‌ಐಎ ಬಂಧಿಸಿದ ಬಳಿಕ ಮತ್ತೂಮ್ಮೆ, ಕತಾರ್‌ನಲ್ಲಿದ್ದುಕೊಂಡೇ ರಾಜ್ಯದ ಹಲವು ಯುವಕರನ್ನು ಉಗ್ರಸಂಘಟನೆಗೆ ಸೇರಲು ಪ್ರೇರೇಪಿಸಿದ ಅಂಶ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಆರೋಪಿ ಯುವಕರ ಹಿನ್ನೆಲೆ ಅವರ ಬೆಂಬಲಿಗರು, ರಾಜ್ಯದಲ್ಲಿ ಉಗ್ರ ಚಟುವಟಿಕೆಗೆ ಬೆಂಬಲ ನೀಡುತ್ತಿದ್ದರೇ ಎಂಬ ಶಂಕೆ ವ್ಯಕ್ತವಾಗಿದೆ. ಜತೆಗೆ ಆರೋಪಿತ ಯುವಕರು ಬಳಸುತ್ತಿದ್ದ ಫೇಸ್‌ಬುಕ್‌, ವ್ಯಾಟ್ಸಾಪ್‌ ಗ್ರೂಪ್‌ಗ್ಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಮತ್ತೂಂದೆಡೆ ಎನ್‌ಐಎ ತನಿಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಲೇ ಎಚ್ಚೆತ್ತುಕೊಂಡಿರುವ ರಾಜ್ಯ ಪೊಲೀಸ್‌ ಇಲಾಖೆಯೂ ರಾಜ್ಯದಲ್ಲಿರಬಹುದಾದ ಉಗ್ರರ ಸ್ಲಿàಪರ್‌ಸೆಲ್‌ಗ‌ಳ ಬಗ್ಗೆ ಆಂತರಿಕ ತನಿಖೆ ಆರಂಭಿಸಿದೆ. ಜತೆಗೆ, ಈ ಹಿಂದೆ ಬಂಧನವಾಗಿದ್ದ ಉಗ್ರರನ್ನು ವಿಚಾರಣೆಗೊಳಪಡಿಸಲಿದೆ ಎಂದು ತಿಳಿದು ಬಂದಿದೆ.

ಇತರೆ ಉಗ್ರರ ಜತೆ ನಂಟು?
ದುಬೈನಲ್ಲಿದ್ದು ಐಸಿಸ್‌ ಉಗ್ರ ಸಂಘಟನೆ ಪರ ಫೇಸ್‌ಬುಕ್‌, ವ್ಯಾಟ್ಸಾಪ್‌, ಟ್ವಿಟರ್‌ ಸೇರಿದಂತೆ ವ್ಯಾಪಕ ಪ್ರಚಾರ ನಡೆಸಿ ಸಾವಿರಾರು ಮಂದಿ ಯುವಕರನ್ನು ಐಸಿಸ್‌ ಸೇರಲು ಪ್ರೇರೆಪಿಸಿದ ಆರೋಪದಲ್ಲಿ 2016ರಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಭಟ್ಕಳದ ಅದ್ನಾನ್‌ ಹಸ್ಸನ್‌ ಜತೆ ಜುಂದ್‌ ಅಲ್‌ ಅಕ್ಸಾ ಸಂಘಟನೆ ಸೇರಿರುವ ಯುವಕರಿಗೆ ನಂಟಿರುವ ಸಾಧ್ಯತೆಯಿದೆ.

ದುಬೈನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅದ್ನಾನ್‌, ಸೌದಿಅರೆಬಿಯಾ, ಫಿಲಿಡೆಲ್ಫಿಯಾ, ಶ್ರೀಲಂಕಾ ಸೇರಿ ವಿವಿಧ ದೇಶಗಳ ಸಾವಿರಾರು ಯುವಕರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ. ಆತ ರಚಿಸಿದ್ದ ವ್ಯಾಟ್ಸಾಪ್‌ ಗ್ರೂಪ್‌ನಲ್ಲಿ ಕರ್ನಾಟಕದ ಹಲವು ಯುವಕರು ಇರುವ ಶಂಕೆಯನ್ನು ಎನ್‌ಐಎ ವ್ಯಕ್ತಪಡಿಸಿತ್ತು. ಅದೇ ಯುವಕರು ಮತ್ತೂಂದು ಜುಂದ್‌ ಅಲ್‌ ಅಕ್ಸಾ ಸೇರಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವಿದೇಶಿ ಯುವಕರೇ ಟಾರ್ಗೆಟ್‌ 
ಐಸಿಸ್‌ ಉಗ್ರ ಸಂಘಟನೆಗೆ ಪರ್ಯಾಯವಾಗಿ ಸಲಾಫಿ ಜಿಹಾದಿಗಳು ಕಟ್ಟಿಕೊಂಡ ಸಂಘಟನೆ  ಜುಂದ್‌- ಅಲ್‌- ಅಕ್ಸಾ ಸಿರಿಯಾ ನಾಗರಿಕ ಯುದ್ಧದ ವೇಳೆ ಬೆಳಕಿಗೆ ಬಂದಿತ್ತು. ಈ ಹಿಂದೆ ಇದೇ ಸಂಘಟನೆಯನ್ನು ಶರಿಯತ್‌ ಅಲ್‌ ಕೈದಾ ಎಂದು ಕರೆಯಲಾಗುತ್ತಿದ್ದು,ಅದರ ಅಂಗ ಸಂಸ್ಥೆಯಾಗಿ ಅಲ್‌- ನುಸ್ರಾ – ಫ್ರಂಟ್‌ ಕಾರ್ಯನಿರ್ವಹಿಸುತ್ತಿತ್ತು. ಸಿರಿಯಾದಲ್ಲಿ ಷರಿಯತ್‌ ಕಾನೂನು ಜಾರಿಗೊಳಿಸುವ ಗುರಿ ಸಂಘಟನೆಯದ್ದಾಗಿತ್ತು. ಈ ಸಂಘಟನೆ ವಿದೇಶಗಳ ಯುವಕರನ್ನು ಪ್ರಭಾವಿಸಿ ಅವರನ್ನು ತನ್ನ ಗುಂಪಿಗೆ ಸೇರಿಸಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ. 

– ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.