ಜೂ. 12 “ಕರ್ನಾಟಕ ಬಂದ್’ ಕರೆ: ಗೊಂದಲ
Team Udayavani, Jun 11, 2017, 3:45 AM IST
ಬೆಂಗಳೂರು: ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಒಕ್ಕೂಟ ಹಾಗೂ ರೈತರ ಸಾಲ ಮನ್ನಾಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜೂನ್ 12ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಆದರೆ ಕೆಲ ಸಂಘಟನೆಗಳು ಬಂದ್ಗೆ ಬೆಂಬಲವಿಲ್ಲ ಎಂದು ಪ್ರಕಟಿಸಿರುವುದರಿಂದ ಗೊಂದಲ ಸೃಷ್ಟಿಯಾಗಿದೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ಸೇವೆ ಸದ್ಯದ ಮಟ್ಟಿಗೆ ಎಂದಿನಂತೆ ಇರಲಿವೆ ಎಂದು ಸಂಬಂಧಪಟ್ಟ ಇಲಾಖೆಗಳು ಸ್ಪಷ್ಟಪಡಿಸಿವೆ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಓಲಾ- ಉಬರ್ ಕ್ಯಾಬ್ ಚಾಲಕರ ಸಂಘ ಬಂದ್ ಬೆಂಬಲಿಸಿ ಕ್ಯಾಬ್ ರಸ್ತೆಗಿಳಿಸದಿರುವುದಾಗಿ ಪ್ರಕಟಿಸಿವೆ. ಬೆಂಗಳೂರು ಪ್ರವಾಸಿ ವಾಹನ ಮಾಲೀಕರ ಸಂಘ ಹೋರಾಟಕ್ಕೆ ನೈತಿಕ ಬೆಂಬಲ ನೀಡಿದ್ದರೂ ವಾಹನ ಸೇವೆ ಎಂದಿನಂತೆ ಇರಲಿದೆ ಎಂದು ತಿಳಿಸಿದೆ. ಆಟೋ ಚಾಲಕರ ಸಂಘ ಬಂದ್ನಿಂದ ದೂರ ಉಳಿದಿದೆ. ಹೋಟೆಲ್ ಮಾಲೀಕರ ಸಂಘ ಪ್ರತಿಕ್ರಿಯೆ ನೀಡಿಲ್ಲ.
ಕರ್ನಾಟಕ ಬಂದ್ಗೆ ಬೆಂಬಲ ನೀಡುವಂತೆ ಯಾವ ಸಂಘಟನೆಯೂ ಮನವಿ ಮಾಡಿಲ್ಲ. ಹಾಗಾಗಿ ಜೂನ್ 12ರಂದು ಆಟೋ ಸಂಚಾರ ಎಂದಿನಂತೆ ಇರಲಿದೆ ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಮೀನಾಕ್ಷಿ ಸುಂದರಂ ತಿಳಿಸಿದರು.
ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲವಿದ್ದು, ಸೋಮವಾರ ಎಲ್ಲಿಯೂ ಕ್ಯಾಬ್ಗಳನ್ನು ರಸ್ತೆಗಿಳಿಸದಂತೆ ಮನವಿ ಮಾಡಲಾಗಿದೆ ಎಂದು ಓಲಾ- ಉಬರ್ ಚಾಲಕರ ಸಂಘದ ಪದಾಧಿಕಾರಿ ಪಾಷ ಹೇಳಿದರು.
ಈ ನಡುವೆ ಪದೇ ಪದೇ ಬಂದ್ಗೆ ಕರೆ ನೀಡುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ಬಂದ್ಗೆ ಬೆಂಬಲವಿಲ್ಲ ಎಂದು ಕೆಲ ಕನ್ನಡ ಪರ ಸಂಘಟನೆಗಳು ಬಹಿರಂಗವಾಗಿ ಘೋಷಿಸಿವೆ. ಹಾಗಾಗಿ ಸೋಮವಾರ ಬಂದ್ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ