ಬರ ನಿರ್ವಹಣೆಗೆ ಸಮರ್ಥನೆ: ಬಿಜೆಪಿ ಸಭಾತ್ಯಾಗ


Team Udayavani, Jun 21, 2017, 11:32 AM IST

170620kpn93.jpg

ವಿಧಾನ ಪರಿಷತ್ತು: ಸಹಕಾರ ಸಂಘಗಳಲ್ಲಿನ ರಾಜ್ಯ ರೈತರ ಸಾಲ ಮನ್ನಾ ಮಾಡಬೇಕು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಶಾಸಕರ ನೇತೃತ್ವದ ಕಾರ್ಯಪಡೆ ಬದಲಿಗೆ ಅಧಿಕಾರಿಗಳ ನೇತೃತ್ವದ ಕಾರ್ಯಪಡೆ ರಚಿಸಬೇಕೆಂಬ ಮನವಿಗೆ ಸರ್ಕಾರದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಸದಸ್ಯರು ಸಭಾತ್ಯಾಗ ಮಾಡಿದ ಪ್ರಸಂಗ ಮೇಲ್ಮನೆಯಲ್ಲಿ ಮಂಗಳವಾರ ನಡೆಯಿತು.

ಬರ ಪರಿಸ್ಥಿತಿಗೆ ಸಂಬಂಧಪಟ್ಟಂತೆ ನಡೆದ ಸುದೀರ್ಘ‌ ಚರ್ಚೆ ಬಳಿಕ ಮಂಗಳವಾರ ಸಚಿವರಾದ ಕಾಗೋಡು ತಿಮ್ಮಪ್ಪ, ಎಚ್‌. ಕೆ.ಪಾಟೀಲ್‌ ಹಾಗೂ ಕೃಷ್ಣ ಭೈರೇಗೌಡ ಅವರು ಅಂಕಿಸಂಖ್ಯೆ ನೀಡಿ ಸರ್ಕಾರ ಬರವನ್ನು ಸಮರ್ಥವಾಗಿ ನಿರ್ವಹಿಸಿದೆ ಎಂದು ಸಮರ್ಥನೆ ನೀಡಿದರು. ಇದಕ್ಕೆ ಸಮಾಧಾನಗೊಳ್ಳದ ಪ್ರತಿಪಕ್ಷ ಬಿಜೆಪಿ ಸದಸ್ಯರು ಸಾಲ ಮನ್ನಾ ಬಗ್ಗೆ ಘೋಷಣೆ ಮಾಡದ ಸರ್ಕಾರದ ಧೋರಣೆ ಖಂಡಿಸಿ ಸಭಾತ್ಯಾಗ ಮಾಡಿದರು.

ಸ್ಪಂದಿಸುವ ಸಮಾಧಾನವಿದೆ: ಇದಕ್ಕೂ ಮೊದಲು ಉತ್ತರ ನೀಡಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, “ರಾಜ್ಯದಲ್ಲಿ ತೀವ್ರವಾಗಿ ಕಾಣಿಸಿಕೊಂಡ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಿ ಜನರಿಗೆ ಸ್ಪಂದಿಸಿದ ಸಮಾಧಾನವಿದೆ. ಮುಖ್ಯಮಂತ್ರಿಗಳು ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಕೇಂದ್ರ ಸರ್ಕಾರವು 1685.52 ಕೋಟಿ ರೂ. ಹಣ ನೀಡಿದ್ದು, ಈವರೆಗೆ 22.99 ಲಕ್ಷ ಫ‌ಲಾನುಭವಿಗಳ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲಾಗಿದೆ.

ಬಾಕಿ ಉಳಿದವರಿಗೂ ಬೆಳೆಹಾನಿ ಮೊತ್ತ ವಿತರಿಸಲಾಗುವುದು. ಹಿಂಗಾರು ಹಂಗಾಮಿನಲ್ಲಿ 7097 ಕೋಟಿ ರೂ. ಬೆಳೆ ನಷ್ಟದ ಅಂದಾಜು ಇದ್ದು 3,310 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಹಿಂಗಾರು ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡುವಂತೆ ಸದ್ಯದಲ್ಲೇ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಸಚಿವ ಕೃಷ್ಣ ಭೈರೇಗೌಡ, ರಾಜ್ಯ ಸರ್ಕಾರದ ಪ್ರಯತ್ನದ ಫ‌ಲವಾಗಿ ರೈತರಿಗೆ ತ್ವರಿತವಾಗಿ ಬೆಳೆ ನಷ್ಟ ಪರಿಹಾರ ವಿತರಿಸಲು ಸಾಧ್ಯವಾಗಿದೆ. 2012-13ರಲ್ಲಿ ರೈತರಿಗೆ ಕೇವಲ 649 ಕೋಟಿ ರೂ. ಬೆಳೆ ನಷ್ಟ ಪರಿಹಾರ ವಿತರಿಸಿದ್ದರೆ, 2015-16ನೇ ಸಾಲಿನಲ್ಲಿ ಒಟ್ಟು 3,331 ಕೋಟಿ ರೂ. ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.

ಸಾಧ್ಯವಾಗದಿದ್ದರೆ ಬಡ್ಡಿ ಸೇರಿ ಹಣ: ಸಚಿವ ಎಚ್‌.ಕೆ.ಪಾಟೀಲ್‌, “ಉದ್ಯೋಗ ಖಾತರಿ ಯೋಜನೆಯಡಿ
ಶೇ.91ರಷ್ಟು ಫ‌ಲಾನುಭವಿಗಳ ಆಧಾರ್‌ ಜೋಡಣೆ ಪೂರ್ಣಗೊಂಡಿದ್ದು, ಬ್ಯಾಂಕ್‌ಗಳಲ್ಲಿ ಆಧಾರ್‌ ಜೋಡಣೆ
ಶೇ.43ರಷ್ಟು ಮಾತ್ರವಿದ್ದು, ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ.

15 ದಿನದೊಳಗೆ ಫ‌ಲಾನುಭವಿಗಳಿಗೆ ವೇತನ ನೀಡಲಾಗುತ್ತಿದೆ. ಒಂದೊಮ್ಮೆ 15 ದಿನದೊಳಗೆ ಸಾಧ್ಯವಾಗದಿದ್ದರೆ ಶೇ.0.05ರಷ್ಟು ಬಡ್ಡಿ ನೀಡಲಾಗುತ್ತದೆ ಎಂದು ತಿಳಿಸಿದರು .

ಸದನ ನಿರ್ಣಯ ಕೈಗೊಂಡರೆ ಸೂಕ್ತ: ಬಳಿಕ ಕಾಂಗ್ರೆಸ್‌ನ ವಿ.ಎಸ್‌.ಉಗ್ರಪ್ಪ, ರಾಷ್ಟ್ರೀಕೃತ, ವಾಣಿಜ್ಯ ಬ್ಯಾಂಕ್‌ಗಳ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಉಭಯ ಸದನಗಳಲ್ಲೂ ನಿರ್ಣಯ ಕೈಗೊಳ್ಳುವತ್ತ ಚಿಂತಿಸಬಹುದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್‌ನ ರಮೇಶ್‌ಬಾಬು, “ರಾಜ್ಯ ಸರ್ಕಾರವು ಸಹಕಾರ ಸಂಘ/ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಿದರೆ ಉಭಯ ಸದನದಲ್ಲಿ ನಿರ್ಣಯ ಕೈಗೊಳ್ಳುವುದನ್ನು ಜೆಡಿಎಸ್‌ ಬೆಂಬಲಿಸಲಿದೆ ಎಂದು ಹೇಳಿದರು. ಬಳಿಕಬರ ಕುರಿತ ಚರ್ಚೆಗೆ ತೆರೆಬಿತ್ತು.

ಸರ್ಕಾರದ ಧೋರಣೆಗೆ ಖಂಡನೆ
ಮೂವರು ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಳಕಳಿಯಿದ್ದಂತಿಲ್ಲ. ಪಂಜಾಬ್‌, ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಸಾಲ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ಸಹಕಾರಿ ಸಂಘ/ ಬ್ಯಾಂಕ್‌ಗಳಲ್ಲಿನ 10,760 ಕೋಟಿ ರೂ. ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕಿತ್ತು.ಆದರೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರ್ಕಾರದ ಧೋರಣೆ ಖಂಡಿಸಲಾಗುವುದು’ ಎಂದು ಹೇಳುತ್ತಾ ಸಭಾತ್ಯಾಗ ನಡೆಸಿದರು.  

ಬರದ ಹಿನ್ನೆಲೆಯಲ್ಲಿ ಅಡಿಕೆ, ತೆಂಗು ತೋಟಗಾರಿಕೆ ಬೆಳೆಗೂ ನಷ್ಟವಾಗಿದ್ದು, ಈ ಬಗ್ಗೆ ಸರ್ವೇ ನಡೆಯುತ್ತಿದ್ದು, ಸಂಪುಟ ಉಪಸಮಿತಿ ವರದಿ ಸಲ್ಲಿಸಿದ ನಂತರ ಮರಗಳ ಸಂಖ್ಯೆಗೆ ಅನುಗುಣವಾಗಿ ಇಲ್ಲವೇ ಹೆಕ್ಟೇರ್‌ವಾರು ಪರಿಹಾರ ನೀಡಬೇಕೆ ಎಂಬ ಬಗ್ಗೆ ಪರಿಶೀಲಿಸಿ ನಿರ್ಧರಿಸಲಾಗುವುದು.
ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ

ಬರ ಪರಿಸ್ಥಿತಿ ನಿರ್ವಹಣೆಗೆ ಸಚಿವರು ನೀಡಿದ ಉತ್ತರ ಹಳೇ ಬ್ರೋಕನ್‌ ರೆಕಾರ್ಡ್‌ ಅನ್ನು ಮತ್ತೂಮ್ಮೆ ಕೇಳಿದಂತಾಯಿತು. ಸಚಿವರು ಕಾಗದದಲ್ಲಿರುವುದನ್ನು ನೋಡಿ ಉತ್ತರ ನೀಡುತ್ತಿದ್ದಾರೆ. ನಾನು ಸ್ಥಳಕ್ಕೆ ಹೋಗಿ ವಸ್ತುಸ್ಥಿತಿ ನೋಡಿ ಬಂದಿದ್ದೇನೆ. ಅಧಿಕಾರಿಗಳ ಮೇಲೆ ನಿಯಂತ್ರಣವಿಲ್ಲದ ಕಾರಣ ಬಹಳಷ್ಟು ಯೋಜನೆಗಳು ಕಾಗದದಲ್ಲೇ ಉಳಿದಿವೆ. 
– ಕೆ.ಎಸ್‌.ಈಶ್ವರಪ್ಪ, ಪ್ರತಿಪಕ್ಷ ನಾಯಕ

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಸಂಸ್ಥೆ (ಕೆಆರ್‌ಐಡಿಎಲ್‌) ನಿರ್ಮಿಸಿರುವ ಶುದ್ಧ ನೀರಿನ ಘಟಕಗಳ ನಿರ್ವಹಣೆ ಹಾಗೂ ಮೇಲ್ವಿಚಾರಣೆಯನ್ನು ಜೂನ್‌ 30ರವರೆಗೆ ಮಾತ್ರವಲ್ಲದೇ ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗುವುದು. ಈ ಸಂಬಂಧ ಸೂಕ್ತ ಆದೇಶ ಹೊರಡಿಸಲಾಗುವುದು.
– ಎಚ್‌.ಕೆ.ಪಾಟೀಲ್‌, ಸಚಿವ
 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.