ಸಿಎಂ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ: ಸಚಿವ ಗೋಪಾಲಯ್ಯ
Team Udayavani, Jul 17, 2022, 2:11 PM IST
ಬೆಂಗಳೂರು: ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರಿದ ನಂತರ ನನಗೆ ಮುಖ್ಯಮಂತ್ರಿಗಳು ಕೇಳಿದಷ್ಟು ಅನುದಾನ ಕೊಟ್ಟಿದ್ದಾರೆ. ಅತಿ ಹೆಚ್ಚು ಬಹುಮತದೊಂದಿಗೆ ನನ್ನ ಗೆಲ್ಲಿಸಿ ಕಳುಹಿಸಿದ್ದೀರಿ. ಮುಂದೆ ಬರುವ ಬಿಬಿಎಂಪಿ ಚುನಾವಣೆಯಲ್ಲಿ ಒಂಬತ್ತು ಜನರನ್ನು ಗೆಲ್ಲಿಸುವ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಗೋಪಾಲಯ್ಯ ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ನನ್ನನ್ನು ನಂಬಿ ಮುಖ್ಯಮಂತ್ರಿ ಗಳು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಉಸ್ತುವಾರಿ ಕೊಟ್ಟಿದ್ದಾರೆ. ನಿಮ್ಮನಂಬಿಕೆಗೆ ತಕ್ಕಂತೆ ನಾನು ಕೆಲಸ ಮಾಡುತ್ತೇನೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಅತಿಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದರು.
ಇದನ್ನೂ ಓದಿ:ಅಪ್ರಾಪ್ತೆ ವಿವಾಹವಾಗಲು ಆಕೆಯ ಆಧಾರ್ ಕಾರ್ಡ್ನಲ್ಲಿ ವಯಸ್ಸು ತಿದ್ದುಪಡಿ: ನಾಲ್ವರ ಸೆರೆ