ಸೌಹಾರ್ದತೆ ಕಾಪಾಡಲು ಕ್ರಿಮಿನಲ್ ಪ್ರಕರಣ ವಾಪಸ್
Team Udayavani, Jun 18, 2021, 7:02 PM IST
ಬೆಂಗಳೂರು: ಶಾಸಕರು, ಸಚಿವರುಸೇರಿ ರಾಜಕಾರಣಿಗಳು ಮತ್ತುಜನಪ್ರತಿನಿಧಿಗಳ ವಿರುದ್ಧದಕ್ರಿಮಿನಲ್ ಪ್ರಕರಣಗಳನ್ನು ವಾಪಸ್ಪಡೆದುಕೊಳ್ಳುವುದರ ಉದ್ದೇಶಸಮಾಜದಲ್ಲಿ ಸೌಹಾರ್ದತೆ ಕಾಪಾಡುವುದಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಕಳೆದ 7 ವರ್ಷದಲ್ಲಿ ರಾಜ್ಯಾದ್ಯಂತ ವಿವಿಧ ಕ್ರಿಮಿನಲ್ ಕೋಟ್ìನಲ್ಲಿ ವಿಚಾರಣಾ ಹಂತದಲ್ಲಿದ್ದ ಒಟ್ಟು 570 ಕ್ರಿಮಿನಲ್ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದುಆರೋಪಿಸಿ ಪೀಪಲ್ಸ… ಯೂನಿಯನ್ ಫಾರ್ ಸಿವಿಲ್ಲಿಬರ್ಟಿಸ್ (ಪಿಸಿಯುಎಲ್) ಮತ್ತು ವಕೀಲೆ ಸುಧಾಕಾಟ್ವಾ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಿ ಗುರುವಾರ ಸರ್ಕಾರ ಈಸಮರ್ಥನೆ ನೀಡಿದೆ.
ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರುಲಿಖೀತ ಆಕ್ಷೇಪಣೆಗಳನ್ನು ಸಲ್ಲಿಸಿದರು. ಅಲ್ಲದೇ ಈಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರ ಅಡ್ವೋಕೇಟ್ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿಕಾಲಾವಕಾಶ ನೀಡಬೇಕೆಂದು ಕೋರಿದರು. ಇದನ್ನುದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನುಜುಲೈ 15ಕ್ಕೆ ಮುಂದೂಡಿತು.
ಸರ್ಕಾರ ಹೇಳಿದ್ದು: ಕಾವೇರಿ ಹಾಗೂ ಮಹಾದಾಯಿನದಿ ನೀರು ಹಂಚಿಕೆ, ಮಂಡ್ಯದಲ್ಲಿ ಕಬ್ಬು ಬೆಳೆಗೆ ಬೆಂಬಲನಿಗದಿ,ಸಕ್ಕರೆ ಕಾರ್ಖಾನೆಯಿಂದ ಬಾಕಿ ಹಣ ಪಾವತಿ,ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ, ಆದಿವಾಸಿಗಳಒಕ್ಕಲೆಬ್ಬಿಸಿದ, ಮೈಸೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹನುಮ ಜಯಂತಿ ಆಚರಣಾ ರ್ಯಾಲಿ, ಚಿಕ್ಕಮಗಳೂರಿನದತ್ತಪೀಠ ವಿವಾದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಪ್ರತಿಭಟನೆ, ಮುಷ್ಕರನಡೆದಿದೆ. ಈ ಸಂಬಂಧ ರೈತರು, ರೈತ ನಾಯಕರು,ಶಾಸಕರು ಮತ್ತು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 2014ರಲ್ಲಿ 2,2016ರಲ್ಲಿ 22, 95, 2018ರಲ್ಲಿ 112 ಮತ್ತು 2020ರಲ್ಲಿ279 ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟನಿರ್ಣಯ ಕೈಗೊಂಡಿದೆ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.ಅಲ್ಲದೆ, ಸಮಾಜದಲ್ಲಿ ಸೌಹಾರ್ದತೆನೆಲೆಗೊಳಿಸುವ ಸದುದ್ದೇಶದಿಂದ ಈ ಎಲ್ಲಾ ಪ್ರಕರಣ ಹಿಂಪಡೆಯಲಾಗಿದೆ.
ಸರ್ಕಾರದ ಈ ಕ್ರಮವು ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ)ಸೆಕ್ಷನ್ 321ರ ಪ್ರಕಾರ ಸಂಬಂಧಪಟ್ಟ ನ್ಯಾಯಾಲಯದ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ. ಆದರೆ,ಸೆಕ್ಷನ್ 321ನ್ನು ಉಲ್ಲಂ ಸಿಲ್ಲ. ಅಪರಾಧನ್ಯಾಯ ಆಡಳಿತವನ್ನು ದುರ್ಬಲಗೊಳಿಸುವಂತಿಲ್ಲ ಮತ್ತು ನ್ಯಾಯಾಲಯದ ಅಧಿಕಾರವನ್ನು ಅತಿಕ್ರಮಿಸಿಲ್ಲ. ಹೀಗಾಗಿ, ಕೆಲ ಆರೋಪಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಕ್ರಿಮಿನಲ್ಪ್ರಕರಣ ಹಿಂಪಡೆಯಲಾಗಿದೆ ಎಂಬ ಅರ್ಜಿದಾರರ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಸರ್ಕಾರಸಮರ್ಥನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು