ಚುನಾವಣಾ ಅಖಾಡಕ್ಕೆ ಸಜ್ಜಾದ ನಟ ಉಪೇಂದ್ರ


Team Udayavani, Nov 12, 2017, 12:10 PM IST

Actor-Upendra.jpg

ಬೆಂಗಳೂರು: ಕರ್ನಾಟಕ ಪ್ರಜ್ಞಾವಂತ ಜನತಾಪಕ್ಷ ಸ್ಥಾಪಿಸಿರುವ ನಟ ಉಪೇಂದ್ರ ತಮ್ಮ ಪಕ್ಷದ ಧ್ಯೇಯೋದ್ದೇಶ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡಲು ವೆಬ್‌ಸೈಟ್‌ ಹಾಗೂ ಆ್ಯಪ್‌ ಬಿಡುಗಡೆ ಮಾಡಿದ್ದಾರೆ.

ಕೆಪಿಜೆಪಿ ಆ್ಯಪ್‌ ಮತ್ತು www.kpjpuppi.org ವೆಬ್‌ಸೈಟ್‌ ಮೂಲಕ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಕಾರ್ಯಯೋಜನೆಗಳನ್ನು ತಿಳಿದು ಕೊಳ್ಳಬಹುದು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಮಾಹಿತಿ ಸಿಗಲಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಖುದ್ದಾಗಿ ತಮ್ಮ ಕ್ಷೇತ್ರದ ಸಮಸ್ಯೆ ಹಾಗೂ ಆ ಕುರಿತು ಜನರ ಜೊತೆ ಚರ್ಚಿಸುವ ವೀಡಿಯೋ ಹಾಗೂ ಫೋಟೋ ದಾಖಲೆಗಳ ಜೊತೆ ಹಲವು ವಿವರಗಳನ್ನು ನೀಡಬಹುದು.

ಮಾಹಿತಿಗೆ ಆ್ಯಪ್‌, ವೆಬ್‌ಸೈಟ್‌: ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಪೇಂದ್ರ, ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲಾಗುತ್ತಿದೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಪಕ್ಷದ ಚಟುವಟಿಕೆಗಳ ಬಗ್ಗೆ ಜನತೆಗೆ ಸಂಪೂರ್ಣ ವಿವರ ನೀಡಲು ಆ್ಯಪ್‌ ಮತ್ತು ವೆಬ್‌ಸೈಟ್‌ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಕೆಪಿಜೆಪಿ ಕಾರ್ಯಚಟುವಟಿಕೆ, ಸಂಘಟನೆ, ಅಭ್ಯರ್ಥಿಯ ಆಯ್ಕೆ, ಸಂದರ್ಶನ, ಸಭೆ-ಸಮಾರಂಭಗಳು, ಚುನಾವಣಾ ಪ್ರಚಾರ, ಪಕ್ಷದ ಧ್ಯೇಯೋದ್ದೇಶಗಳು ಸೇರಿದಂತೆ ಇನ್ನಿತರ ಹಲವು ಅಂಶಗಳು ಪಕ್ಷದ ಆ್ಯಪ್‌ ಮತ್ತು ವೆಬ್‌ಸೈಟ್‌ನಲ್ಲಿ
ಸಂಪೂರ್ಣವಾಗಿ ದೊರೆಯಲಿವೆ ಎಂದರು.

ಅಭ್ಯರ್ಥಿಗಳ ಆಯ್ಕೆಯ ಸಂದರ್ಶನ ಪಾರದರ್ಶಕ ರೀತಿಯಲ್ಲಿ ನಡೆಯಲಿದೆ.ಇದು ಕೆಪಿಜೆಪಿ ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರವಾಗಲಿದೆ ಎಂದು ಹೇಳಿದರು.

60 ಸಾವಿರ ಮೇಲ್‌: ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ ಕೇವಲ ವೇದಿಕೆ. ಪಕ್ಷದ ಅಭ್ಯರ್ಥಿಗಳಿಗೆ ಖುರ್ಚಿ ಖಾಲಿ ಇದೆ. ಸಾಧಿಸುವ ಉದ್ದೇಶ ಉಳ್ಳವರು ಈ ಖುರ್ಚಿಯಲ್ಲಿ ಕೂರಬಹುದು. ಈಗಾಲೇ ಪಕ್ಷದ ವತಿಯಿಂದ ಸ್ಪರ್ಧಿಸಲು 60 ಸಾವಿರ ಮೇಲ್‌ಗ‌ಳು ಬಂದಿವೆ. ಇವುಗಳಲ್ಲಿ 8 ಸಾವಿರ ಮೇಲ್‌ಗ‌ಳನ್ನು ಅಧ್ಯಯನ ಮಾಡಿರುವುದಾಗಿ ತಿಳಿಸಿದರು.

ಜನ ಆಶೀರ್ವದಿಸಿದರೆ ಮಾತ್ರ ರಾಜಕೀಯದಲ್ಲಿ ರಾಜಕಾರಣದಲ್ಲಿ ಜನ ಆಶೀರ್ವದಿಸಿದರೆ ರಾಜಕೀಯ ಕ್ಷೇತ್ರದಲ್ಲಿ ಇರುತ್ತೇನೆ. ಇಲ್ಲದಿದ್ದರೆ ಸಿನಿಮಾ ರಂಗದಲ್ಲೇ ಸಕ್ರಿಯನಾಗುತ್ತೇನೆ ಎಂದು ಚಿತ್ರ ನಟ ಉಪೇಂದ್ರ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಆ್ಯಪ್‌ ಮತ್ತು ವೆಬ್‌ಸೈಟ್‌ ಬಿಡುಗಡೆಗೊಳಿಸಿ
ಮಾತನಾಡಿದರು. ಮುಂದಿನ ನಾಲ್ಕು ತಿಂಗಳ ಕಾಲ ಸಿನಿಮಾ ರಂಗ ಬಿಟ್ಟು ಬೇರು ಮಟ್ಟದಲ್ಲಿ ಪಕ್ಷ ಕಟ್ಟುವ
ನಿಟ್ಟಿನಲ್ಲಿ ತೊಡಗುವುದಾಗಿ ತಿಳಿಸಿದರು.

ಪ್ರತಿ ಕ್ಷೇತ್ರಕ್ಕೂ ಪ್ರಣಾಳಿಕೆ: ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದು, ಪ್ರತಿ
ಕ್ಷೇತ್ರಕ್ಕೂ ಒಂದೊಂದು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಿದೆ ಎಂದು ಹೇಳಿದರು. ನನ್ನ ಕುಟುಂಬದ ಸದಸ್ಯರು ಬೇಸರಗೊಳ್ಳಬಾರದೆಂಬ ಕಾರಣಕ್ಕಾಗಿ ನಾನು ಕೆಪಿಜೆಪಿ ಪಕ್ಷದ ಕೆಲವು ಕಾರ್ಯಕ್ರಮಗಳಲ್ಲಿ ಅವರನ್ನು ಕರೆದುಕೊಂಡು
ಬಂದಿದ್ದೆ. ಅಷ್ಟಕ್ಕೆ ಕೆಲವರು ಉಪೇಂದ್ರ ಅವರ ಕುಟುಂಬ ರಾಜಕಾರಣ ಮಾಡಲು ಹೊರಟಿದೆ ಎಂದು ಆರೋಪಿಸಿದರು. ಆದರೆ ಇದು ಸತ್ಯಕ್ಕೆ ದೂರವಾದುದು. ನಾನು ಕುಟುಂಬ ರಾಜಕಾರಣ ಮಾಡುವುದಿಲ್ಲ. ಒಂದು ವೇಳೆ ಕುಟುಂಬ ಸದಸ್ಯರು ಪಕ್ಷಕ್ಕೆ ಬರಲು ಇಚ್ಛಿಸಿದರೆ ಅವರು ಕೂಡ ಪಕ್ಷದ ಮಾರ್ಗದರ್ಶಿ ಸೂತ್ರದ ಮೂಲಕವೇ ಪ್ರವೇಶಿಸಬೇಕಾಗುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.