ಕನ್ನಡ ಕಾಯಕಕ್ಕೆ ಮುಂದಾದ ವೈದ್ಯರು, ರೈತರು, ಶಿಕ್ಷಕರು

ಅಧಿಕಗೊಂಡ ಕನ್ನಡ ಕಾಯಕ ಪಡೆಯ ಸದಸ್ಯತ್ವ | ಸ್ವಯಂ ಪ್ರೇರಣೆಯಿಂದ ಕನ್ನಡ ಜಾಗೃತಿ ಮೂಡಿಸುವ ಕೆಲಸ

Team Udayavani, Dec 29, 2020, 12:38 PM IST

ಕನ್ನಡ ಕಾಯಕಕ್ಕೆ ಮುಂದಾದ ವೈದ್ಯರು, ರೈತರು, ಶಿಕ್ಷಕರು

ಬೆಂಗಳೂರು: ರಾಜ್ಯದಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ನಿಗಾವಹಿಸಲು ವೈದ್ಯರು, ರೈತರು, ಶಿಕ್ಷಕರು, ಚಾಲಕರು,  ರಂಗ ಕರ್ಮಿಗಳು ಮುಂದೆ ಬಂದಿದ್ದು ಇವರೆಲ್ಲರೂಸ್ವಯಂ ಪ್ರೇರಣೆಯಿಂದ ಕನ್ನಡ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಕನ್ನಡ ಕಾಯಕ ಪಡೆಯ ಸದಸ್ಯತ್ವಪಡೆದು ಕನ್ನಡ ಉಳಿಸಿ ಬೆಳೆಸುವ ಕೆಲಸದಲ್ಲಿ ಇವರುಜೊತೆಗೂಡಲಿದ್ದಾರೆ. ಈಗಾಗಲೇ 877 ಮಂದಿ ನೋಂದಣಿ ಮಾಡಿಸಿಕೊಂಡಿದ್ದು ಈ ಸಂಖ್ಯೆ ಮತ್ತಷ್ಟುಹೆಚ್ಚುವ ನಿರೀಕ್ಷೆಯಿದೆ. ಹೆಸರು ನೋಂದಾಯಿಸಿಕೊಂಡವರಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರಭಾಗದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ “ಕನ್ನಡ ಕಾಯಕ ವರ್ಷ’ ಘೋಷಿಸಿದೆ. ಅಲ್ಲದೆ ಇದರ ನಿರ್ವಹಣೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಹಿಸಿದೆ. ಹೀಗಾಗಿ ಇದರ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಪ್ರಾಧಿಕಾರವು ತನ್ನದೇ ಆದ ರೀತಿಯಲ್ಲಿ ರೂಪುರೇಷೆಗ ‌ಳನ್ನು ಸಿದ್ಧಪಡಿಸಿದೆ. ಇದರಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆಗೆ ಆನ್‌ಲೈನ್‌ ವೇದಿಕೆ ಬಳಸಿಕೊಳ್ಳಲಾಗುತ್ತಿದೆ. ಬ್ಯಾಂಕ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಕನ್ನಡ ಕಲಿಕೆ ಹಾಗೂ ಸಮುದಾಯದ ವಿವಿಧ ಹಂತಗಳಲ್ಲಿ ಭಾಷೆಯ ಬೆಳವಣಿಗೆಗೆ ಪೂರಕವಾದ 100ಕ್ಕೂ ಅಧಿಕ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲು ರೂಪುರೇಷೆ ಅಣಿಗೊಳಿಸಿದೆ. ಸರ್ಕಾರವು ಘೋಷಿಸಿರುವ ಕನ್ನಡ ಕಾಯಕ ವರ್ಷದ ಭಾಗವಾಗಿನೋಂದಣಿ ಪ್ರಕ್ರಿಯೆ ನಡೆದಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಸೋಮೇಶ್ವರ : ಆಕಸ್ಮಿಕವಾಗಿ ಸಮುದ್ರಕ್ಕೆ ಜಾರಿಬಿದ್ದ ಮಹಿಳೆಯ ರಕ್ಷಣೆ

ಅಧಿಕ ಸಂಖ್ಯೆಯಲ್ಲಿ ನೋಂದಾಣಿ: ಕನ್ನಡ ಕೆಲಸ ಮಾಡಲು ಅಧಿಕ ಸಂಖ್ಯೆಯಲ್ಲಿ ನಾಡಿನ ವಿವಿಧಜಿಲ್ಲೆಗಳಲ್ಲಿ ಹೆಸರು ನೋಂದಾಯಿಸಿ ಕೊಂಡಿದ್ದಾರೆ. ಅದರಲ್ಲಿ ಬೆಂಗಳೂರು ನಗರ ಮತ್ತುಗ್ರಾಮಾಂತರದಲ್ಲಿ 159 , ಮೈಸೂರಿನಲ್ಲಿ 39 , ಬೆಳಗಾವಿಯಲ್ಲಿ,35 ಬಾಗಲಕೋಟೆಯಲ್ಲಿ 30, ಮಂಡ್ಯದಲ್ಲಿ 27 ಹಾವೇರಿಯಲ್ಲಿ 26, ಹಾಸನದಲ್ಲಿ 23, ಧಾರವಾಡದಲ್ಲಿ 22, ಕೋಲಾರ, ಚಿತ್ರದುರ್ಗದಲ್ಲಿ ತಲಾ 21, ಕಲಬುರ್ಗಿಯಲ್ಲಿ 18,ಚಿಕ್ಕಮಗಳೂರು, ಚಾಮರಾಜನಗರದಲ್ಲಿ ತಲಾ 16 ಮಂದಿ ಕಾಯಕಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಅವರು 12 ಜಿಲ್ಲೆಗಳ ಕನ್ನಡ ಕಾಯಕ ಪಡೆಯ ಸದಸ್ಯರುಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ ತಿಳಿಸಿದ್ದಾರೆ.

ಕನ್ನಡ ಕಾಯಕ ಪಡೆಯ ಕಾರ್ಯಗಳೇನು? :

ಪ್ರಯಾಣಿಕರ ಸೇವಾ ಕೇಂದ್ರಗಳಲ್ಲಿರುವ ಎಲ್ಲಾ ರೀತಿಯ ಮನರಂಜನೆಗಳು ಕನ್ನಡದಲ್ಲಿ ಇರಬೇಕು. ಒಂದು ವೇಳೆ ಇಲ್ಲದೆ ಇದ್ದರೆ ಈ ಬಗ್ಗೆ ಸಂಬಂಧ ಪಟ್ಟವರಲ್ಲಿ ಮನವಿ ಮಾಡುವುದು. ಅಂಗಡಿಗಳಲ್ಲಿ ಕನ್ನಡ ಬಳಸುವಂತೆ ಅರಿವು ಮೂಡಿಸುವುದು, ವಿದ್ಯಾರ್ಥಿಗಳಿಗೆ ಪ್ರಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳ ಆಯೋಜನೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನುಆಯೋಜಿಸುವುದು. ವಾಹನಗಳಲ್ಲಿ ಕನ್ನಡ ಘೋಷ ವಾಕ್ಯಗಳಿರುವ ಭಿತ್ತಿಚಿತ್ರಗಳನ್ನು ಅಂಟಿಸಲು ಇತರರಲ್ಲಿ ಮನವಿ ಮಾಡುವುದು. ರೈಲ್ವೆ,ಅಂಚೆ, ಆದಾಯ ತೆರಿಗೆ, ವಿಮಾ ಸೇರಿದಂತೆ ಇನ್ನಿತರ ಕಚೇರಿಗಳಲ್ಲಿ ಕನ್ನಡ ನಮೂನೆಗಳನ್ನು ಬಳಲುವಂತೆ ಮನವಿ ಮಾಡುವುದು ಸೇರಿದಂತೆ ಹಲವು ಕಾರ್ಯ ಸೂಚಿಗಳು ಕಾಯಕ ಪಡೆಯ ಸದಸ್ಯರ ಚಟುವಟಿಕೆಯ ಪಟ್ಟಿಯಲ್ಲಿವೆ.

ಇಂದು ಕುವೆಂಪು ಜನ್ಮದಿನ : ಜಿಲ್ಲಾ ಲೀಡ್‌ ಬ್ಯಾಂಕ್‌ಗಳ ಮುಂದೆ ಕನ್ನಡ ಕಾಯಕ ಪಡೆಯ ಸದಸ್ಯರು ಅಭಿಯಾನ ನಡೆಸಲುಯೋಜನೆ ರೂಪಿಸಲಾಗಿದೆ. ಕುವೆಂಪು ಜನ್ಮ ದಿನಾಚರಣೆಯಂದು (ಡಿ.29)ಲೀಡ್‌ ಬ್ಯಾಂಕ್‌ಗಳಮುಂದೆ ಕನ್ನಡದ ಅಭಿಯಾದ ಬಗ್ಗೆ ಜಾಗೃತಿ ಮೂಡಿಸಲು ಸಲುವಾಗಿ ಈಗಾಗಲೇ ಕನ್ನಡ ಅಭಿವೃದ್ಧಿಪ್ರಾಧಿಕಾರದ ಅಧ್ಯಕ್ಷರು ಕಾಯಕ ಪಡೆಯ ಸದಸ್ಯರಿಗೆ ಕೆಲವು ಮಾರ್ಗ ಸೂಚಿ ನೀಡಿದ್ದಾರೆಪ್ರಾಧಿಕಾರದ ಕನ್ನಡ ಕಾಯಕ ಪಡೆಯಲ್ಲಿ ವೈದ್ಯರು, ಎಂಜಿನಿಯರ್‌ಗಳು, ಪೊಲೀಸರು,ಶಿಕ್ಷಕರು, ಚಾಲಕರು, ರೈತರು, ರಂಗಕರ್ಮಿಗಳುಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಹೆಸರು ನೋಂದಾಣಿ ಮಾಡಿಕೊಂಡಿರುವುದು ಖುಷಿ ವಿಚಾರ. ಟಿ.ಎಸ್‌.ನಾಗಾಭರಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.