ತಾಂತ್ರಿಕ ಕಾಲೇಜುಗಳಲ್ಲಿ ಇನ್ನೂ ಮೊಳಗದ ಕನ್ನಡ ಡಿಂಡಿಮ


Team Udayavani, Dec 3, 2018, 6:15 AM IST

college-web-site.jpg

ಬೆಂಗಳೂರು: ರಾಜ್ಯದ ಪಾಲಿಟೆಕ್ನಿಕ್‌ ಹಾಗೂ ಸರ್ಕಾರಿ ಮತ್ತು ಅನುದಾನಿತ ಎಂಜಿನಿಯರಿಂಗ್‌ ಕಾಲೇಜುಗಳ ಕಚೇರಿ ವ್ಯವಹಾರ ಇನ್ಮುಂದೆ ಕನ್ನಡದಲ್ಲೇ ನಡೆಯಲಿದೆ. ಆದರೆ, ಸಂಸ್ಥೆಗಳ ವೆಬ್‌ಸೈಟ್‌ ಕನ್ನಡೀಕರಣಕ್ಕೆ ನೀಡಿದ್ದ ಗಡುವು ಮೀರಿದರೂ ಕಾರ್ಯ ಮುಗಿದಿಲ್ಲ!

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದು ಹೆಚ್ಚು ಅನುಕೂಲವಾಗಲಿದ್ದು, ಶುಲ್ಕ ಹಾಗೂ ಸೀಟಿನ ವಿವರ ಸಹಿತವಾಗಿ ಕಾಲೇಜಿನ ಎಲ್ಲ ಮಾಹಿತಿ ಕನ್ನಡದಲ್ಲೇ ಪಡೆಯಬಹುದು ಹಾಗೂ ಅಧಿಕಾರಿಗಳೊಂದಿಗೆ ಕನ್ನಡದ‌ಲ್ಲೇ ವ್ಯವಹರಿಸಬಹುದು. ಆದರೆ, ಗ್ರಾಮೀಣ ವಿದ್ಯಾರ್ಥಿಗಳು ಇನ್ನೂ “ಕನ್ನಡಕ್ಕಾಗಿ’ ಕಾಯಬೇಕಿದೆ.

ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿ 82 ಸರ್ಕಾರಿ, 44 ಅನುದಾನಿತ ಹಾಗೂ 170 ಖಾಸಗಿ ಪಾಲಿಟೆಕ್ನಿಕ್‌ ಮತ್ತು 11 ಸರ್ಕಾರಿ, 9 ಅನುದಾನಿತ ಎಂಜಿನಿಯರಿಂಗ್‌ ಕಾಲೇಜುಗಳಿವೆ. ಇದರಲ್ಲಿ ಬಹುತೇಕ ಕಾಲೇಜು ಹಾಗೂ ಪಾಲಿಟೆಕ್ನಿಕ್‌ ಸಂಸ್ಥೆಗಳ ಅಧಿಕೃತ ವೆಬ್‌ಸೈಟ್‌ ಆಂಗ್ಲ ಭಾಷೆಯಲ್ಲೇ ಇದೆ. ಜತೆಗೆ ಕಚೇರಿಯ ವ್ಯವಹಾರಗಳು ಆಂಗ್ಲ ಭಾಷೆಯಲ್ಲೇ ನಡೆಯುತ್ತಿವೆ. ಇದಕ್ಕೆ ಕಡಿವಾಣ ಬೀಳಲಿದ್ದು, ಸಂಸ್ಥೆಯ ಸೂಚನಾ ಫ‌ಲಕ, ನೋಟಿಸ್‌, ಸಭಾ ನಡಾವಳಿ ಸೇರಿ ಕಚೇರಿಯ ನಿತ್ಯದ ವ್ಯವಹಾರಗಳು ಕನ್ನಡದಲ್ಲೇ ಇರಬೇಕೆಂದು ತಾಂತ್ರಿಕ ಶಿಕ್ಷಣ ಇಲಾಖೆ ಎಲ್ಲ ಕಾಲೇಜು ಹಾಗೂ ಪಾಲಿಟೆಕ್ನಿಕ್‌ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
ಕನ್ನಡದಲ್ಲಿ ವೆಬ್‌ಸೈಟ್‌: ಕಾಲೇಜು ಹಾಗೂ ಪಾಲಿಟೆಕ್ನಿಕ್‌ ಸಂಸ್ಥೆಗಳ ವೆಬ್‌ಸೈಟ್‌ ಕನ್ನಡದಲ್ಲೇ ಇರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಇಲಾಖೆಗೆ ಸೂಚಿಸಲಾಗಿದೆ. 

ಅದರಂತೆ ಇಲಾಖೆಯ ಅಧಿಕಾರಿಗಳು ಎಲ್ಲ ಸಂಸ್ಥೆಗಳ ಪ್ರಾಂಶುಪಾಲರಿಗೆ ಪತ್ರ ಬರೆದು, ಆದಷ್ಟು ಬೇಗ ಸಂಸ್ಥೆಯ ವೆಬ್‌ಸೈಟ್‌ ಕನ್ನಡಕ್ಕೆ ಬದಲಾಯಿಸಬೇಕು. ಸಂಪೂರ್ಣ ಇಂಗ್ಲಿಷ್‌ ಇದ್ದಲ್ಲಿ, ಅದನ್ನು ಬದಲಾಯಿಸಿ, ಕನ್ನಡ ಅಳವಡಿಸಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಕೆಲವು ಕಾಲೇಜಿನ ಪ್ರಾಂಶುಪಾಲರು ಈಗಾಗಲೇ ಇದನ್ನು ಜಾರಿಗೆ ತಂದಿದ್ದಾರೆ. ಇನ್ನು ಕೆಲವು ಕಾಲೇಜಿನ ವೆಬ್‌ಸೈಟ್‌ ಇನ್ನೂ ಇಂಗ್ಲಿಷ್‌ನಲ್ಲೇ ಇದೆ.

ವರದಿ ಸಲ್ಲಿಸಿಲ್ಲ : ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳು ತಮ್ಮ ಸಂಸ್ಥೆಯ ವೆಬ್‌ಸೈಟ್‌ ಇಂಗ್ಲಿಷ್‌ನಿಂದ ಕನ್ನಡಕ್ಕೆ ಬದಲಾಯಿಸಿರುವ ಬಗ್ಗೆ ವರದಿ ನೀಡುವಂತೆ ನ.27ರ ಗಡುವು ನೀಡಲಾಗಿತ್ತು. ಆದರೆ, ಬಹುತೇಕ ಕಾಲೇಜುಗಳು ವರದಿ ಒಪ್ಪಿಸಿಲ್ಲ. ಕೆಲವು ಕಾಲೇಜಿನವರು ವೆಬ್‌ಸೈಟ್‌ನ ಮುಖ ಪುಟವನ್ನು ಮಾತ್ರ ಕನ್ನಡದಲ್ಲಿ ಹೋಸ್ಟ್‌ ಮಾಡಿದ್ದಾರೆ. ಉಳಿದಂತೆ ವೆಬ್‌ಸೈಟ್‌ ಒಳಗಿರುವ ಎಲ್ಲ ಅಂಶವೂ ಇಂಗ್ಲಿಷ್‌ನಲ್ಲೇ ಇರುವುದು ಕಂಡುಬಂದಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಡಿ.6ಕ್ಕೆ ಪರಿಶೀಲನೆ : ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜಿನ ವೆಬ್‌ಸೈಟ್‌ ಹಾಗೂ ಕಚೇರಿ ವ್ಯವಹಾರದಲ್ಲಿ ಕನ್ನಡ ಎಷ್ಟರ ಮಟ್ಟಿಗೆ ಅನುಷ್ಠಾನವಾಗಿದೆ ಎಂಬುದರ ಪ್ರಗತಿ ಪರಿಶೀಲನೆ ಡಿ.6ರಂದು ನಡೆಯಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇಲಾಖೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಹಿಂದಿನ ಆದೇಶ ಅನುಷ್ಠಾನ ಮಾಡದ ಕಾಲೇಜುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಿಸುವ ಸಾಧ್ಯತೆಯೂ ಇದೆ. ಕನ್ನಡ ವೆಬ್‌ಸೈಟ್‌ ಸಿದ್ಧಪಡಿಸಿ ಹೋಸ್ಟ್‌ ಮಾಡಿರುವ ಬಗ್ಗೆ ವರದಿ ಸಲ್ಲಿಸಲು ಪ್ರಾಧಿಕಾರ ಸೂಚಿಸಿತ್ತು. ಅದು ಕೂಡ ಇನ್ನೂ ಆಗಲಿಲ್ಲ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಮೇರೆಗೆ ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಎಲ್ಲ ಎಂಜಿನಿಯರಿಂಗ್‌ ಕಾಲೇಜು ಹಾಗೂ ಪಾಲಿಟೆಕ್ನಿಕ್‌ ಸಂಸ್ಥೆಗಳ ವೆಬ್‌ಸೈಟ್‌ ಕನ್ನಡೀಕರಿಸಲು ನಿರ್ದೇಶನ ನೀಡಿದ್ದೇವೆ. ಬಹುತೇಕ ಕಾಲೇಜುಗಳಿಂದ ಈ ಸಂಬಂಧ ವರದಿಯೂ ಬಂದಿದೆ. ಡಿ.6ಕ್ಕೆ ಪರಿಶೀಲನೆ ನಡೆಯಲಿದೆ.
– ಎಚ್‌.ಯು.ತಳವಾರ, ನಿರ್ದೇಶಕ, ತಾಂತ್ರಿಕ ಶಿಕ್ಷಣ ಇಲಾಖೆ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.