ಅನ್ಯ ಭಾಷೆ ವಿಡಿಯೋಗಳಲ್ಲಿ ಕನ್ನಡ ಪ್ರಯೋಗ


Team Udayavani, Oct 29, 2018, 12:06 PM IST

anya-you.jpg

ಬೆಂಗಳೂರು: ಅತಿ ಹೆಚ್ಚು ಜನ ಬಳಸುವ ಯೂಟ್ಯೂಬ್‌ನಲ್ಲಿ ಬರುವ ವಿವಿಧ ಭಾಷೆಯ ಯಾವುದೇ ಪ್ರಕಾರದ ವಿಡಿಯೋ ತುಣುಕುಗಳು ನಿಮಗೆ ಕನ್ನಡದಲ್ಲೇ ಲಭ್ಯವಾದರೆ ಹೇಗಿರುತ್ತದೆ? ಇಂತಹದ್ದೊಂದು ವಿನೂತನ ಸಾಫ್ಟ್ವೇರ್‌ ಅಭಿವೃದ್ಧಿಪಡಿಸಲು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಎಲೆಕ್ಟ್ರಾನಿಕ್‌ ಇಂಜಿನಿಯರಿಂಗ್‌ ವಿಭಾಗ ಮುಂದಾಗಿದೆ. ಪ್ರಸ್ತುತ ಇಂಗ್ಲಿಷ್‌ನಲ್ಲಿ ಮಾತ್ರ ಇರುವ ಈ ಸೌಲಭ್ಯವನ್ನು ಕನ್ನಡಕ್ಕೂ ತರಲು ಚಿಂತನೆ ನಡೆದಿದ್ದು, ಶೀಘ್ರದಲ್ಲೇ ಲಭ್ಯವಾಗಲಿದೆ. 

ವಿಶ್ವದ ಬೇರೆ ಬೇರೆ ಭಾಷೆಯಲ್ಲಿ ಮಾಹಿತಿ ಆಧಾರಿತ ಸಾವಿರಾರು ವಿಡಿಯೋ ತುಣುಕುಗಳು ನಿತ್ಯ ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಆಗುತ್ತವೆ. ಆದರೆ, ಬಹುತೇಕರಿಗೆ ಅದು ಅರ್ಥವಾಗುವುದೇ ಇಲ್ಲ. ಇಂಗ್ಲಿಷ್‌ ಬಲ್ಲವರಿಗೆ ಅದನ್ನು ಅಕ್ಷರ ರೂಪದಲ್ಲಿ ತರ್ಜುಮೆ ಮಾಡಿಕೊಂಡು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಕನ್ನಡ ಸೇರಿದಂತೆ ಇತರೆ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಕಂಡುಕೊಳ್ಳಲು ಸಾಧ್ಯವಿಲ್ಲ. ಇದರಿಂದ ಅನೇಕರು ಆ ಮಾಹಿತಿಯಿಂದ ವಂಚಿತರಾಗುತ್ತಾರೆ. ಮುಂದಿನ ದಿನಗಳಲ್ಲಿ ಕನ್ನಡದಲ್ಲಿ ಪ್ರಯೋಗ ಮಾಡಲು ಐಐಎಸ್ಸಿ ಉದ್ದೇಶಿಸಿದೆ.

ಹಾಗೊಂದು ವೇಳೆ ಈ ಪ್ರಯೋಗ ಯಶಸ್ವಿಯಾದರೆ, ಹೀಗೆ ಸಾಮಾಜಿಕ ಜಾಲತಾಣದಲ್ಲಿರುವ ವಿಡಿಯೋ ತುಣುಕನ್ನು ಪ್ರಾದೇಶಿಕ ಭಾಷೆಯಲ್ಲಿ ತರ್ಜುಮೆ ಮಾಡಿ, ಅಕ್ಷರ ರೂಪದಲ್ಲಿ ಬಿತ್ತರಿಸುವ ಮೊದಲ ಭಾಷೆ ಎಂಬ ಹೆಗ್ಗಳಿಕೆ ಕನ್ನಡದ್ದಾಗಲಿದೆ. ಪ್ರಸ್ತುತ ಇದು ಪ್ರಾಥಮಿಕ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಎಲೆಕ್ಟ್ರಿಕ್‌ ಇಂಜಿನಿಯರಿಂಗ್‌ ವಿಭಾಗದ ಪ್ರೊ.ಎ.ಜಿ.ರಾಮಕೃಷ್ಣನ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಪ್ರಸ್ತುತ ನಮ್ಮ ಬಳಿ ಕನ್ನಡ ಮಾತನಾಡಿದರೆ, ಅದು ತಕ್ಷಣ ಅಕ್ಷರ ರೂಪದಲ್ಲಿ ಟೈಪ್‌ ಆಗುವಂತಹ ಸಾಫ್ಟ್ವೇರ್‌ ಲಭ್ಯವಿದೆ. ಇದೇ ಮಾದರಿಯನ್ನು ಯೂಟ್ಯೂಬ್‌ನಲ್ಲಿ ಅಳವಡಿಸಲು ಸಾಧ್ಯವಿದೆ. ಅದನ್ನು “ಎನೇಬಲ್‌’ ಮಾಡಿದರೆ ಸಾಕು, ಅನ್ಯಭಾಷೆಯಲ್ಲಿ ವಿಡಿಯೋ ತುಣುಕು ವೀಕ್ಷಿಸುತ್ತಿರುವ ವ್ಯಕ್ತಿಗೆ ಅಟೋಮೆಟಿಕ್‌ ಆಗಿ ಪರದೆಯಲ್ಲಿ ಕನ್ನಡದಲ್ಲಿ ಇಡೀ ದೃಶ್ಯಾವಳಿಯ ಸಾರ ಬರುತ್ತದೆ. ಇದರ ಮುಖ್ಯ ಉದ್ದೇಶ ಆರೋಗ್ಯ, ಕೃಷಿ, ಅಧ್ಯಾತ್ಮ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಜಾಗತಿಕವಾಗಿ ಸಾಕಷ್ಟು ಆವಿಷ್ಕಾರಗಳನ್ನು ಕನ್ನಡಿಗರಿಗೆ ಕನ್ನಡದಲ್ಲೇ ದೊರೆಯುವಂತೆ ಮಾಡುವುದಾಗಿದೆ. ಗ್ರಾಮೀಣ ಪ್ರದೇಶದ ಜನರಿಗೆ ಇದು ಹೆಚ್ಚು ಅನುಕೂಲ ಆಗಲಿದೆ ಎಂದೂ ಅವರು ಹೇಳಿದರು. 

ಇದಲ್ಲದೆ, ಈಗಾಗಲೇ ಆಪ್ಟಿಕಲ್‌ ಕ್ಯಾರೆಕ್ಟರ್‌ ರಿಕಗ್ನಿಷನ್‌ (ಒಸಿಆರ್‌) ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದೆ. ಇದು ಪುಸ್ತಕವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದು “ಲಿಪಿಜ್ಞಾನ’ಕ್ಕೆ ಹಾಕಿದರೆ, ಅಕ್ಷರ ರೂಪದಲ್ಲಿ ಬರುತ್ತದೆ. ಅದನ್ನು “ಮಧುರ ವಾಚಕ’ದ ಸಹಾಯದಿಂದ ಕೇಳಬಹುದು. ಇದರಿಂದ ಅಂಧ ಮಕ್ಕಳು ಕೂಡ ಸುಲಭವಾಗಿ ಕಲಿಯಬಹುದು. ರಾಜ್ಯದ 35 ಬ್ರೈಲ್‌ ಶಾಲೆಗಳಲ್ಲಿ ಇದರ ಉಪಯೋಗ ಆಗುತ್ತಿದೆ.

ಕನ್ನಡದತ್ತ ಮುಖ ಮಾಡಿದ ಐಫೋನ್‌, ಗೂಗಲ್‌, ವಾಟ್ಸ್‌ಆ್ಯಪ್‌: ಸ್ಮಾರ್ಟ್‌ಫೋನ್‌ನಲ್ಲಿ ಕನ್ನಡ ಕೀ ಬೋರ್ಡ್‌ ಬಳಕೆಗೆ ಅವಕಾಶ ಇದೆ. ಆದರೆ, ಐ-ಫೋನ್‌ನಲ್ಲಿ ಇದರ ಲಭ್ಯತೆ ಇರಲಿಲ್ಲ. ಹೆಚ್ಚು ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಈಗ ಆ್ಯಪಲ್‌ ಐಫೋನ್‌ನಲ್ಲೂ ಕನ್ನಡ ಕೀ-ಬೋಡ್‌ ಪರಿಚಯಿಸಲಾಗಿದೆ. ಇದಲ್ಲದೆ, ಗೂಗಲ್‌ ನಕ್ಷೆ ಕೂಡ ಸಂಪೂರ್ಣ ಕನ್ನಡದಲ್ಲಿ ಬರುತ್ತಿದೆ.

ಇದೆಲ್ಲಕ್ಕೂ ಮುಖ್ಯ ಕಾರಣ ಕನ್ನಡಿಗರು ಅತಿ ಹೆಚ್ಚು ಅಂತರ್ಜಾಲ ಬಳಕೆ ಮಾಡುತ್ತಿರುವುದು ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ. ಗೂಗಲ್‌ ಮತ್ತು ಕೆಪಿಎಂಜಿ ಈಚೆಗೆ ನಡೆಸಿದ ಸಮೀಕ್ಷೆ ಪ್ರಕಾರ ಹೊಸದಾಗಿ ಹತ್ತು ಜನ ಇಂಟರ್‌ನೆಟ್‌ ಬಳಕೆದಾರರು ಬಂದರೆ, ಅದರಲ್ಲಿ 8ರಿಂದ 9 ಜನ ದೇಶದ ಪ್ರಾದೇಶಿಕ ಭಾಷೆಯವರಾಗಿರುತ್ತಾರೆ. ಅದರಲ್ಲೂ ಕನ್ನಡಿಗರು ಮೊದಲ ಮೂರು ಸ್ಥಾನದಲ್ಲಿದ್ದಾರೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.