ಪರಭಾಷಿಗರಿಗೆ ಕನ್ನಡ ಕಡ್ಡಾಯ
Team Udayavani, Nov 2, 2017, 10:02 AM IST
ಬೆಂಗಳೂರು: ಪರಭಾಷಿಗರು ಕನ್ನಡ ಕಲಿಯದಿದ್ದರೆ ತಮ್ಮ ಊರುಗಳಿಗೆ ಹೋಗಬೇಕು. ಇಲ್ಲದಿದ್ದರೆ ದಂಗೆಯೆದ್ದು
ಕಳುಹಿಸಿಕೊಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ವಾಟಾಳ್ನಾಗರಾಜ್ ಎಚ್ಚರಿಸಿದರು. ನಗರದ ಮೈಸೂರು ಬ್ಯಾಂಕ್ ವೃತ್ತದ ವಿಜಯನಗರ ಹೆಬ್ಟಾಗಿಲು ಬಳಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಹಮ್ಮಿ
ಕೊಂಡಿದ್ದ ಕನ್ನಡ ರಾಜ್ಯೋತ್ಸವ ಮತ್ತು ಭುವನೇಶ್ವರಿ ಪೂಜೆ, ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಕನ್ನಡ ನಾಡಿನ ಮೂಲಸೌಕರ್ಯ ಬಳಸಿಕೊಂಡು ಹತ್ತಾರು ವರ್ಷದಿಂದ ವಾಸಿಸುತ್ತಿರುವ ಅನೇಕ ಪರಭಾಷಿಗರು ಕನ್ನಡ ಕಲಿಯುವಲ್ಲಿ ನಿರ್ಲಕ್ಷ್ಯವಹಿಸಿದ್ದಾರೆ.
ಅವರಿಗೆ ಕನ್ನಡ ಕಲಿಯಲು ಆಗದಿದ್ದರೆ, ಕನ್ನಡಿಗರೇ ದಂಗೆ ಎದ್ದು ಕಳುಹಿಸಬೇಕಾಗುತ್ತದೆ. ನಾವು ಯಾವುದೇ
ಭಾಷೆಯ ವಿರೋಧಿ ಗಳಲ್ಲ. ಇಲ್ಲಿರ ಬೇಕಾದರೆ, ಕನ್ನಡ ಕಲಿಕೆ ಕಡ್ಡಾಯ ಎಂದರು. ಬೆಂಗಳೂರಿನ ವ್ಯಾಪಾರ ಸ್ಥಳಗಳಲ್ಲಿ ಸೇರಿದಂತೆ ಎಲ್ಲೆಡೆ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು. ಬಿಬಿಎಂಪಿ ನಾಮಫಲಕ
ಗಳಲ್ಲಿ ಕನ್ನಡ ಬಳಸದ ಅಂಗಡಿಗಳ ಪರವಾನಗಿ ರದ್ದು ಮಾಡಬೇಕು ಎಂದು ಒತ್ತಾಯಿಸಿದರು. ಮೇಯರ್ ಸಂಪತ್
ರಾಜ್ ಮಾತನಾಡಿದರು. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ.ಗೋವಿಂದ್, ಕೆ.ಆರ್.ಕುಮಾರ್, ಪ್ರವೀಣ್ಕುಮಾರ್ ಶೆಟ್ಟಿ, ಮುನಿಯಪ್ಪಗೌಡ, ಡಿ.ಕೆ.ರಾಜು, ನಾರಾಯಣಸ್ವಾಮಿ, ಕಸಾಪ ಗೌರವ ಕಾರ್ಯದರ್ಶಿ ವ. ಚ.ಚನ್ನೇಗೌಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ