ಕನ್ನಡ ಕೋಗಿಲೆ ಗ್ರ್ಯಾಂಡ್ ಫಿನಾಲೆ ಇಂದು, ನಾಳೆ
Team Udayavani, Aug 3, 2019, 3:03 AM IST
ಬೆಂಗಳೂರು: ಖುಷಿಗಾಗಿ ಹಾಡುವ ಶೋ ಕನ್ನಡ ಕೋಗಿಲೆ ಅಂತಿಮ ಹಂತ ತಲುಪಿದೆ. ಆ.3 ಮತ್ತು 4ರಂದು ರಾತ್ರಿ 8ರಿಂದ ಕನ್ನಡ ಕೋಗಿಲೆಯ ಗ್ರ್ಯಾಂಡ್ ಫಿನಾಲೆ ಕಲರ್ಸ್ ಸೂಪರ್ ಚಾನೆಲ್ನಲ್ಲಿ ಪ್ರಸಾರವಾಗಲಿದೆ. ಮೈಸೂರಿನ ಆಲಾಪ್, ಕೊಪ್ಪಳದ ಏಳು ವರ್ಷ ವಯಸ್ಸಿನ ಅರ್ಜುನ್ ಇಟಗಿ, ಉಡುಪಿಯ ಕಲಾವತಿ ದಯಾನಂದ್, ಹಾವೇರಿಯ ಖಾಸಿಂ, ಬೆಂಗಳೂರಿನ ನೀತು ಸುಬ್ರಹ್ಮಣ್ಯಂ ಮತ್ತು ಶಿವಮೊಗ್ಗದ ಪಾರ್ಥ ಪ್ರತಿಷ್ಠಿತ ಕನ್ನಡ ಕೋಗಿಲೆ ಕಿರೀಟಕ್ಕಾಗಿ ಸೆಣಸಲಿದ್ದಾರೆ.
ಸಂಗೀತ ಪ್ರಿಯರ ನಡುವಲ್ಲಿ ಈಗಾಗಲೇ ದೊಡ್ಡ ಹೆಸರು ಮಾಡಿರುವ ಕನ್ನಡಕೋಗಿಲೆಯ ಎರಡನೇ ಸೀಸನ್ ಇದು. ವೈಧ್ಯಮಯ ಹಾಡುಗಾರರು ಮತ್ತು ಮನಮೋಹಕ ಹಾಡುಗಾರಿಕೆಯ ಮೂಲಕ ಆರಂಭದಿಂದಲೇ ಜನರನ್ನು ತನ್ನತ್ತ ಸೆಳೆದಿರುವ ಕೋಗಿಲೆಯ ಎರಡನೇ ಸೀಸನ್ ಸಂಗೀತದ ಗುಣಮಟ್ಟದ ವಿಷಯದಲ್ಲಿ ಇನ್ನೂ ಒಂದು ಹಂತ ಮೇಲಕ್ಕೆ ಹೋಗಿದೆ. ಶೋ ನಡೆಯುತ್ತಿರುವಾಗಲೇ ಇದರ ಸ್ಪರ್ಧಿಗಳು ಸಿನಿಮಾಗಳಲ್ಲಿ ಹಾಡಿರುವುದು ಅವರ ಪ್ರತಿಭೆಗೆ ಸಾಕ್ಷಿ ಎಂದು ಪ್ರಕಟಣೆ ತಿಳಿಸಿದೆ.
ಸಾಧು ಕೋಕಿಲ, ಅರ್ಚನಾ ಉಡುಪ ಮತ್ತು ಚಂದನ್ ಶೆಟ್ಟಿ ತೀರ್ಪುಗಾರರಾಗಿರುವ ಕನ್ನಡ ಕೋಗಿಲೆಯನ್ನು ಸಿರಿ ನಡೆಸಿಕೊಡುತ್ತಿದ್ದಾರೆ. ಗ್ರ್ಯಾಂಡ್ ಫಿನಾಲೆಯಲ್ಲಿ ಸಂಗೀತ ಮಾಂತ್ರಿಕ ಗುರುಕಿರಣ್ ವಿಶೇಷ ತೀರ್ಪುಗಾರರಾಗಿದ್ದರು. ಕನ್ನಡ ಕೋಗಿಲೆ ಈ ಸೀಸನ್ನಲ್ಲಿ ರಿಯಲ್ ಸ್ಟಾರ್ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಅಭಿಷೇಕ್ಅಂಬರೀಷ್, ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ, ಅನೂಪ್ ಸೀಳಿನ್, ಕವಿ ದೊಡ್ಡರಂಗೇಗೌಡ ಅತಿಥಿಗಳಾಗಿ ಭಾಗವಸಿ ಸ್ಪರ್ಧಿಗಳನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ