ಕನ್ನಡ ಭಾಷೆಯನ್ನು ಹತ್ತಿಕ್ಕುವ ಹುನ್ನಾರ ನಡೆದಿದೆ: ಹೆಚ್ ಡಿಕೆ ಆಕ್ರೋಶ
Team Udayavani, Feb 4, 2021, 5:16 PM IST
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆದ ಏರ್ ಶೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ ಈ ಕುರಿತು ಮತ್ತೆ ಅಸಮಾಧಾನ ತೋರ್ಪಡಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಇಂದು ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಇತ್ತೀಚೆಗೆ ಕೇಂದ್ರದ ಕಾರ್ಯಕ್ರಮಗಳು ರಾಜ್ಯದಲ್ಲಿ ನಡೆಯುತ್ತಿದೆ. ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡೆಗಣನೆಯಾಗ್ತಿದೆ. ಕನ್ನಡಕ್ಕೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿದೆ. ಕನ್ನಡ ಭಾಷೆಯನ್ನ ಹತ್ತಿಕ್ಕುವ ಹುನ್ನಾರವಿದು. ಹೀಗಾಗಿ ಕೇಂದ್ರ ಮತ್ತು ರಾಜ್ಯಕ್ಕೆ ಆಗ್ರಹ ಮಾಡುತ್ತೇನೆ. ಈ ರೀತಿ ಬೆಳವಣಿಗೆಯಾದಾಗ ಗಮನಹರಿಸಿ. ನಿಮ್ಮನ್ನ ನೀವು ದೂರಿಕೊಳ್ಳಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಹಾಸನ-ಬೇಲೂರು ರೈಲು ಮಾರ್ಗಕ್ಕೆ ಕೇಂದ್ರ ಬಜೆಟ್ನಲ್ಲಿ ಕೇವಲ ಸಾವಿರ ರೂ.!
ದೆಹಲಿ ರೈತರ ಪ್ರತಿಭಟನೆ ವಿಚಾರ: ಕೂಡಲೇ ಕೇಂದ್ರ ಎಚ್ಚೆತ್ತುಕೊಳ್ಳುವುದು ಸೂಕ್ತ
ದೆಹಲಿ ರೈತರ ಪ್ರತಿಭಟನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ವಿದೇಶದ ಕೆಲವರು ಹೇಳಿಕೆ ನೀಡಿದ್ದಾರೆ. ರೈತರ ಬಗೆಗಿನ ಹೇಳಿಕೆ ನಾನು ಚರ್ಚೆ ಮಾಡೋದಿಲ್ಲ. ಉತ್ತರ ಭಾರತದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿಯವರಿಗೆ ನಾನು ಮನವಿ ಮಾಡಿದ್ದೇನೆ. ಈಗಲೂ ಮನವಿ ಮಾಡುತ್ತೇನೆ. ರೈತ ಸಂಘಟನೆಗಳ ಜೊತೆ ಚರ್ಚಿಸಬೇಕು. ರೈತರ ಮನವೊಲಿಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.
ಹಾಗೆಯೇ ರೈತರು ಬರದಂತೆ ರಸ್ತೆಯಲ್ಲಿ ಮೊಳೆ ಹೊಡೆದು ಬ್ಯಾರಿಕೇಡ್ ಹಾಕಿದ ವಿಚಾರಕ್ಕೆ ಆಕ್ಷೇಪಿಸಿದ ಹೆಚ್.ಡಿಕೆ, ರಸ್ತೆಯಲ್ಲಿ ಮೊಳೆ ಹೊಡೆದಿದ್ದು ಸರಿಯಲ್ಲ. ಇದು ಬಿಜೆಪಿ ಮೇಲೆ ದುಷ್ಪರಿಣಾಮ ಬೀರಲಿದೆ. ಕೂಡಲೇ ಕೇಂದ್ರ ಎಚ್ಚೆತ್ತುಕೊಳ್ಳುವುದು ಸೂಕ್ತ ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಫೆ.6ರ ರೈತ ಸಂಘಟನೆಯ ರಸ್ತೆ ಬಂದ್ ಪ್ರತಿಭಟನೆಗೆ ಬೆಂಬಲ ನೀಡಲ್ಲ: ಭಾರತೀಯ ಕಿಸಾನ್ ಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ