ಕನ್ನಡ ಕಾವ್ಯ ರಚನೆಯಿಂದ ಮನಸು ಪ್ರಪುಲ್ಲ


Team Udayavani, Feb 3, 2020, 3:06 AM IST

kannada-kavya

ಬೆಂಗಳೂರು: ಕನ್ನಡದ ಅಕ್ಷರ ನನಗೆ ಎಲ್ಲವನ್ನೂ ಕರುಣಿಸಿದೆ. ನನ್ನ ಏಳ್ಗೆಗೆ ಕನ್ನಡ ಭಾಷಾ ಸಾಹಿತ್ಯ ರಚನೆ ಕಾರಣವಾಗಿದೆ.ಹೀಗಾಗಿ ಕನ್ನಡ ಮಾತೆಗೆ ನಾನು ಸದಾ ಋಣಿ ಎಂದು ನಿತ್ಯೋತ್ಸವ ಕವಿ ನಾಡೋಜ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ನಾಡೋಜ ನಿಸಾರ್‌ ಅಹಮದ್‌ ಅಭಿಮಾನಿಗಳ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ “ನಿತ್ಯೋತ್ಸವ-84′ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಕನ್ನಡ ಭಾಷೆಯಲ್ಲಿನ ಕಾವ್ಯ ರಚನೆ ನನ್ನನ್ನು ಬಹು ಎತ್ತರಕ್ಕೆ ಕೊಂಡೊಯ್ದಿದೆ. ಹೀಗಾಗಿ ಮನಸು ಕೂಡ ಪ್ರಪುಲ್ಲವಾಗಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಅಧ್ಯಾಪಕನಾಗಿದ್ದಾಗ ನಿತ್ಯೋ ತ್ಸವ ಕವನ ಸಂಕಲನ ಹೊರತಂದೆ. ಆ ವೇಳೆ ಸುಗಮ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಹಿರಿಯ ಗಾಯಕ ಮತ್ತು ಸಂಗೀತ ನಿರ್ದೇಶಕ ಮೈಸೂರು ಅನಂತಸ್ವಾಮಿ ಅವರಿಗೆ ನನ್ನ ನಿತ್ಯೋತ್ಸವ ಕವನ ಸಂಕಲ ಕಣ್ಣಿಗೆ ಬಿತ್ತು. ಅವರಿಂದಾಗಿಯೇ ನಿತ್ಯೋ ತ್ಸವ ಗೀತೆಗಳು ನಾಡಿನಾದ್ಯಂತ ಮನ-ಮನೆಗಳಿಗೆ ತಲುಪಿದವು. ನನ್ನ ಕವಿತೆಗಳ ಯಶಸ್ಸಿನ ಶ್ರೇಯಸ್ಸು ಮೈಸೂರು ಅನಂತಸ್ವಾಮಿ ಅವರಿಗೆ ಸಲ್ಲುತ್ತದೆ ಎಂದರು.

ಅನನ್ಯತೆ ತಂದು ಕೊಟ್ಟರು: ಹಿರಿಯ ವಿಮರ್ಶಕ ಡಾ.ಸಿ.ಎನ್‌.ರಾಮಚಂದ್ರನ್‌ ಮಾತನಾಡಿ, ಕನ್ನಡ ಸಾಹಿತ್ಯ ಲೋಕಕ್ಕೆ ಕೆ.ಎಸ್‌.ನಿಸಾರ್‌ ಅಹಮದ್‌ ಅವರ ಕೊಡುಗೆ ಅಪಾರ. ಜತೆಗೆ ಹೊಸ ಹೊಸ ಆಯಾಮಗಳಲ್ಲಿ ಕವಿತೆಗಳನ್ನು ರಚಿಸಿ ಕನ್ನಡ ಕಾವ್ಯಲೋಕ್ಕೆ ಅನನ್ಯತೆ ತಂದು ಕೊಟ್ಟ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ ಎಂದು ಶ್ಲಾ ಸಿದರು.

ಸಾಹಿತ್ಯ ಕೃಷಿ: ಅನುವಾದಕ ಎಂ.ಎಸ್‌.ರಘುನಾಥ್‌ ಮಾತನಾಡಿ, ನಿಸಾರ್‌ ಅಹಮದ್‌ ಅವರ ಮನೆ ಮಾತು ಉರ್ದು. ಆದರೂ ಕನ್ನಡ ಭಾಷೆಯ ಮೇಲಿದ್ದ ಪ್ರೀತಿ ಅವರನ್ನು ಕಾವ್ಯ ರಚನೆಗೆ ಕರೆತಂದಿತು. “ಬೆಣ್ಣೆ ಕದ್ದ ನಮ್ಮ ಕೃಷ್ಣ ‘ ಕವನ ನಿಸಾರ್‌ ಅವರ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿದೆ. ಸಂವೇದನ ಶೀಲತೆ ಅವರ ಕಾವ್ಯದಲ್ಲಿ ಹುದು ಗಿದೆ ಎಂದು ತಿಳಿಸಿದರು. ಲೇಖಕ ಮತ್ತು ಅನು ವಾದಕರಾದ ಸ.ರಘುನಾಥ್‌, ಪಾರ್ವತಿ ಐತಾಳ್‌, ಲತಾಬಾಯಿ, ಮಾಹಿರ್‌ ಮನ್ಸೂರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.