ನ್ಯಾಯಾಲಯಗಳಲ್ಲಿ ಕನ್ನಡದ ಬಳಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


Team Udayavani, Sep 21, 2021, 7:22 PM IST

hjyguy

ಬೆಂಗಳೂರು:  ಕಾನೂನಿನಲ್ಲಿ ಕನ್ನಡವನ್ನು ತಂದಿದ್ದರಿಂದ ನ್ಯಾಯಾಲಯಗಳಲ್ಲಿ ಇಂದು ಕನ್ನಡ ಹೆಚ್ಚಾಗಿ ಬಳಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಭಾಷಾಂತರ ನಿರ್ದೇಶನಾಲಯ ಹೊರತಂದಿರುವ ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು.

ಕಾನೂನು ನಿಘಂಟು ಕೆಲಸ ಯಶಸ್ವಿಯಾಗಿದೆ. 2003ರಲ್ಲಿ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರ ಮಾಡಿದ ನಂತರ ಅವು ಜನ ಸಾಮಾನ್ಯರಿಗೆ‌ ತಲುಪಿದವು. ಕಾನೂನುಗಳ ಅರ್ಥ ವ್ಯಾಪಕವಾಗಿ ಪ್ರಚಾರವಾಯಿತು. ಎಲ್ಲಕ್ಕಿಂತ ಮುಖ್ಯವಾಗಿ ನ್ಯಾಯಾಲಯ ಅದನ್ನು ಗುರುತಿಸಿ  ಮನ್ನಣೆಯನ್ನು ನೀಡಿದೆ. ಅದನ್ನು ಮುಂದುವರೆಸಿ ಇಂದು  ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಹೊರತಂದು   ಉತ್ತಮ ಕೆಲಸ ಮಾಡಿದೆ ಎಂದರು.

ರಾಷ್ಟ್ರೀಯ  ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕಾನೂನುಗಳನ್ನು ನಮ್ಮ ಜನರಿಗೆ ಸರಳವಾಗಿ ತಿಳಿಸುವ ಉದ್ದೇಶದಿಂದ ಈ ಮಹತ್ಕಾರ್ಯ ಸಾಧ್ಯವಾಗಿದೆ. ಇದಕ್ಕಾಗಿ ಶ್ರಮಪಟ್ಟಿರುವ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪ್ರೋತ್ಸಾಹ, ಬೆಂಬಲದಿಂದ ಇವೆಲ್ಲವನ್ನು ಮಾಡಲು ಸಾಧ್ಯವಾಗಿದೆ ಎಂದ ಅವರು, ಈ ಪ್ರಕ್ರಿಯೆ ಮುಂದುವರೆಯಬೇಕು. ಇನ್ನಷ್ಟು ಕನ್ನಡದ ಪದಗಳು ಕಾನೂನಿನಲ್ಲಿ ಬಳಕೆ ಆಗಬೇಕು ಹಾಗೂ ಕಾನೂನಿನಲ್ಲಿ ಬಳಕೆಯಾಗುವ ಪದಗಳು ಕನ್ನಡದಲ್ಲಿ ಬಳಕೆಯಾಗಬೇಕು ಎಂದರು.

ನ್ಯಾಯ, ನೀತಿ ಧರ್ಮ ಸದಾ ಒಟ್ಟಿಗೆ ಸಾಗುತ್ತದೆ:

ಇದೇ ಸಂದರ್ಭದಲ್ಲಿ ಇಸ್ಕಾನ್ ಸಂಸ್ಥಾಪಕ ಆಚಾರ್ಯ ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ 125  ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಹೊರತಂದಿರುವ ನಾಣ್ಯವನ್ನು ಸಮರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ನ್ಯಾಯ, ನೀತಿ, ಧರ್ಮ ಸದಾ ಒಟ್ಟಿಗೆ ಸಾಗುತ್ತದೆ. ಎಲ್ಲಿ ನ್ಯಾಯ ಇರುತ್ತದೆಯೋ ಅಲ್ಲಿ ನೀತಿ ಇರಬೇಕು. ಇವೆರಡೂ ಇದ್ದಲ್ಲಿ ಧರ್ಮ ಇರಲೇಬೇಕು. ಇಂದು ಒಂದೆಡೆ ಕಾನೂನಿನ ಪದಕೋಶ ಬಿಡುಗಡೆಯಾಗಿದ್ದು, ಮತ್ತೊಂದೆಡೆ ಪ್ರಭುಪಾದರನ್ನು ನೆನಪು ಮಾಡಿಕೊಂಡಿದ್ದೇವೆ. ಅವರು ಹಾಕಿಕೊಟ್ಟ ಕೃಷ್ಣನ ಪಥದಲ್ಲಿ ನಡೆಯಬೇಕು. ಭಗವದ್ಗೀತೆ ಮೂಲಕ ಬದುಕಿಗೆ ಕೃಷ್ಣ ಮಾರ್ಗದರ್ಶನ ನೀಡಿದಂತೆ ಅತ್ಯಂತ ಸರಳವಾಗಿ ಉತ್ಸಾಹದ ಮುಖಾಂತರ ಜಗತ್ತಿನ ಭಕ್ತರಲ್ಲಿ ತುಂಬಿದರು. ನ್ಯಾಯ,ನೀತಿ  ಕೃಷ್ಣನ ಧರ್ಮ. ಈ ಮೂರೂ ಅತ್ಯಂತ ಶ್ರೇಷ್ಠ ವಿಧಾನಸೌಧದಲ್ಲಿ ನಡೆದಿರುವುದು ಯೋಗಾಯೋಗ. ನ್ಯಾಯಾ, ನೀತಿ, ಧರ್ಮ ಪಾಲನೆಯೇ ಈ ಶಕ್ತಿಸೌಧದ ಮುಖ್ಯ ಕರ್ತವ್ಯವಾಗಿದೆ ಎಂದರು.

ಇಸ್ಕಾನ್ ದಕ್ಷಿಣ ಶಾಖಾಧ್ಯಕ್ಷ ಶ್ರೀ ವರದಕೃಷ್ಣದಾಸ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.