3 ಕ್ಷೇತ್ರಗಳ ಕೈ ಬಿ.ಫಾರಂ ವಿತರಣೆಗೆ ತಡೆ
Team Udayavani, Apr 18, 2018, 6:10 AM IST
ಬೆಂಗಳೂರು: ಟಿಕೆಟ್ ಘೋಷಣೆಯಾದ ಕ್ಷೇತ್ರಗಳ ಬಿ.ಫಾರಂ ವಿತರಣೆ ಆರಂಭಿಸಿದ್ದ ಕಾಂಗ್ರೆಸ್ ಏಕಾಏಕಿಯಾಗಿ 3 ಕ್ಷೇತ್ರಗಳ
ಹಂಚಿಕೆಯನ್ನು ತಡೆ ಹಿಡಿದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಬಾದಾಮಿ ಕ್ಷೇತ್ರದ ಬಿ ಫಾರಂ ವಿತರಣೆ ತಡೆ ಹಿಡಿಯಲಾಗಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಒತ್ತಡದಿಂದ ಜಗಳೂರು ಬಿ ಫಾರಂ ವಿತರಣೆ ಮಾಡಿಲ್ಲ ಎಂದು ಹೇಳಲಾಗಿದೆ. ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅಧ್ಯಕ್ಷರನ್ನು ಭೇಟಿ ಮಾಡಿ ಘೋಷಿತ ಅಭ್ಯರ್ಥಿ ಡಾ.ದೇವರಾಜ್ಗೆ ಬಿ. ಫಾರಂ ನೀಡದಂತೆ ಮನವಿ ಮಾಡಿಕೊಂಡರು. ಜಗಳೂರು ಕ್ಷೇತ್ರದ ಹಾಲಿ ಶಾಸಕ ಎಚ್.ಪಿ. ರಾಜೇಶ್ ಕೂಡ ಅಧ್ಯಕ್ಷರನ್ನು ಭೇಟಿ ಮಾಡಿ ಬಿ. ಫಾರಂ ವಿತರಿಸದಂತೆ ಮನವಿ ಮಾಡಿದರು.
ಚಂದ್ರಮೌಳಿಗೆ ವಿರೋಧ: ಮಡಿಕೇರಿ ಕ್ಷೇತ್ರದ ಟಿಕೆಟ್ ಪಡೆದಿರುವ ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್ ಚಂದ್ರಮೌಳಿಗೆ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಾವಿರಾರು ಕೋಟಿ ರೂ. ವಂಚನೆ ಮಾಡಿರುವ ಮೆಹೂಲ್ ಚೌಕ್ಸಿ ಪರ ವಕಾಲತ್ತು ವಹಿಸಿದ್ದರಿಂದ ಅವರಿಗೆ ಟಿಕೆಟ್ ನೀಡಿದರೆ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರವಾಗಲಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಸಂಚಾಲಕ ಬ್ರಿಜೇಶ್ ಕಾಳಪ್ಪ ಆರೋಪಿಸಿದ್ದರು. ಆ ಹಿನ್ನೆಲೆಯಲ್ಲಿ ಚಂದ್ರಮೌಳಿಗೆ ಟಿಕೆಟ್ ಘೋಷಣೆಯಾಗಿದ್ದರೂ, ಬಿ. ಫಾರಂ ನೀಡದಂತೆ ಹೈ ಕಮಾಂಡ್ ತಡೆ ಹಿಡಿದಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.